Homeಕರ್ನಾಟಕಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

’ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ’

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು, ಆದರೂ ಘಟನೆ ಬಗ್ಗೆ ದೂರು ಮಾತ್ರ ದಾಖಲಾಗದಕ್ಕೆ ದಲಿತಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳದೆ ಶಾಂತಿ-ಸೌಹಾರ್ದ ಸಭೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಕರಿಯಪ್ಪ ಗುಡಿಮನಿ ಆರೋಪಿಸಿದ್ದಾರೆ.

ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ಸೆ. 4 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚನ್ನದಾಸರ ಸಮುದಾಯದ ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯ ದೇವಸ್ಥಾನಕ್ಕೆ ಕುಟುಂಬದವರು ತೆರಳಿದ್ದರು. ಆಕಸ್ಮಿಕವಾಗಿ ಮಗು ದೇವಸ್ಥಾನದ ಒಳಗೆ ಪ್ರವೇಶಿಸಿದೆ. ದಲಿತರು ಗುಡಿ ಪ್ರವೇಶಿಸಿದ್ದಕ್ಕೆ ಅಪವಿತ್ರವಾಗಿದೆ ಎಂದು ಸೆ.11 ರಂದು ಗ್ರಾಮದ ಸವರ್ಣಿಯರು ಸಭೆ ನಡೆಸಿ, ದೇವಸ್ಥಾನವನ್ನು ಶುದ್ಧೀಕರಿಸಿದ್ದರು. ಕುಟುಂಬಕ್ಕೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಬಳಿಕ ಗ್ರಾಮಕ್ಕೆ ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದವರಿಗೆ ಎಚ್ಚರಿಕೆ ನೀಡಿ, ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದ್ದರು. ಆದರೆ, ಕಾನೂನು ಕ್ರಮ ಕೈಗೊಂಡಿಲ್ಲ.

ಕುಷ್ಟಗಿ ತಹಶೀಲ್ದಾರ ಸಿದ್ದೇಶ, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಸಿಪಿಐ ನಿಂಗಪ್ಪ ಎನ್‌.ಆರ್‌, ಪಿಎಸ್‌ಐಗಳಾದ ತಿಮ್ಮಣ್ಣ ನಾಯಕ, ಅಶೋಕ ಬೇವೂರು, ಕಂದಾಯ ನಿರೀಕ್ಷಕ ಉಮೇಶಗೌಡ ಪಾಟೀಲ್‌, ಪಿಡಿಒ ವೆಂಕಟೇಶ ನಾಯ್ಕ್‌ ಇದ್ದರು ಭೇಟಿ ನೀಡಿ, ಶಾಂತಿ-ಸೌಹಾರ್ದ ಸಭೆ ನಡೆಸಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ, “ಗಂಗಾವತಿ ಡಿವೈಎಸ್‌ಪಿ ಸಭೆ ನಡೆಸಿ ಸುಮ್ಮನೆ ಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳದೆ ತಪ್ಪನ್ನು ಮುಚ್ಚಿಡಲು ಸಭೆ ನಡೆಸಿದ್ದಾರೆ. ಅವರು ಅಸ್ಪೃಶ್ಯತಾ ನಿವಾರಣೆ ಬಗ್ಗೆ ತಿಳಿ ಹೇಳಬೇಕಿತ್ತು. ಆದರೆ,
ದೂರು ದಾಖಲಾಗುವುದು ಬೇಡ. ಶಾಂತಿ ಕಾಪಾಡಿ ಎಂದು ಬಾಯಿ ಮಾತಿನಲ್ಲಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

PC: public tv

“ಸಭೆ ನಡೆಸಿದ ಮಾತ್ರಕ್ಕೆ ಆ ದಲಿತ ಕುಟುಂಬಕ್ಕೆ ಆಗಿರುವ ಅವಮಾನ. ಮಾನಸಿಕ ಹಿಂಸೆ ಕಡಿಮೆಯಾಗುತ್ತದೆಯೇ…? ಅವರ ಮೇಲಾದ ದೌರ್ಜನ್ಯದ ಬಗ್ಗೆ ನೋವು ಇದ್ದೆ ಇರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು. ನಾವು ನಮ್ಮ ಸಂಘದ ವತಿಯಿಂದ ಗ್ರಾಮಕ್ಕೆ ಭೇಟಿ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಯನ್ನು ಖಂಡಿಸಿರುವ ಭೀಮ್ ಆರ್ಮಿಯ ಮುಖಂಡ ನಟರಾಜ್ ದಿಂಡಗೂರು, “ಮನುಷ್ಯರನ್ನು ಮನುಷ್ಯ ಎಂದು ನೋಡದ ಧರ್ಮ ಇದು. ಆಡವಾಡುವ ಮಗುವಿನ ಮೇಲೆ ಅಸ್ಪೃಶ್ಯತಾ ಆಚರಣೆ ನಡೆಸುವುದು ಅಮಾನವೀಯ. ಅಲ್ಲಿ ಕಾನೂನು ವ್ಯವಸ್ಥೆ ಸವರ್ಣಿಯರ ಪರವಾಗಿದೆ. ಇವರು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ನಾವೆಲ್ಲ ಹಿಂದೂಗಳು ಒಂದು ಎಂದು..ಆದರೆ, ಇಂತಹ ಘಟನೆಗಳು ಬಂದಾಗ ನಾವು ಯಾರು…? ನಮ್ಮ ಅಸ್ತಿತ್ವವೇನು…? ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ. ಇಂತಹ ಘಟನೆಗಳಿಗೆ ತಾಲೂಕು ಆಡಳಿತ, ಜಿಲ್ಲಾಡಳಿತ ಕಾರಣ. ಇಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ಘಟನೆಯನ್ನು ಖಂಡಿಸಿದ್ದು, “ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?” ಎಂದು ಪ್ರಶ್ನಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈಗಲೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಶೋಷಣೆ ನಡೆಯುತ್ತಲೆ ಇದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...