Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...