Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...