Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...