Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...