Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...