Homeಕರ್ನಾಟಕಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

- Advertisement -
- Advertisement -

ನಟಿ, ನಿರ್ದೇಶಕಿ, ಬರಹಗಾರ್ತಿ ಶೈಲಜಾ ಪಡಿಂಡಾಲ ನಿರ್ದೇಶಿಸಿರುವ ಕನ್ನಡದ ಮೊದಲ ಲೆಸ್ಬಿಯನ್ ಪ್ರೇಮಕಥೆಯ ಚಿತ್ರ ‘ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಕನ್ನಡದ ಈ ಲೆಸ್ಬಿಯನ್ ಪ್ರೇಮಕಥೆಯನ್ನು ಆಧರಿಸಿದ ಚಿತ್ರ ‘ನಾನು ಲೇಡಿಸ್’ ಅಪರೂಪದ ಗೌರವವನ್ನು ಗಳಿಸಿದ್ದು, ಮುಂದಿನ ತಿಂಗಳು ಅಕ್ಟೋಬರ್‌ 1 ರಿಂದ 16 ರವರೆಗೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆಯಲಿರುವ 16 ನೇ ತಸ್ವೀರ್ ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ.

’ನಾನು ಲೇಡಿಸ್’ ಚಲನಚಿತ್ರವು ಇಬ್ಬರು ಯುವತಿಯರು ಈ ಸಮಾಜದಲ್ಲಿ ತಮ್ಮ ಪ್ರೇಮವನ್ನು ಉಳಿಸಿಕೊಳ್ಳಲು ಹೆಣಗಾಡುವ ಕಥೆಯ ಜೊತೆಗೆ ಮಧ್ಯಮ ವರ್ಗದ ಆರ್ಥಿಕ ಸಮಸ್ಯೆಗಳು, ಸಮಾಜ, ಆರ್ಥಿಕ ವ್ಯವಸ್ಥೆ, ಲಿಂಗತ್ವ, ಮದುವೆ, ಸಲಿಂಗಿಗಳ ಸಮುದಾಯದ ಸಂತಾನೋತ್ಪತ್ತಿ ಹಕ್ಕುಗಳಂತಹ ಅನೇಕ ಅಂಶಗಳನ್ನು ಈ ಚಲನಚಿತ್ರವು ಹೊಂದಿದೆ ಎಂದು ಶೈಲಜಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಐದು ವರ್ಷದ ಕೆಳಗೆ ಶೈಲಜಾ ‘ಮೆಮೋರೀಸ್ ಆಫ್ ಮೆಷೀನ್’ ಎಂಬ ಕಿರುಚಿತ್ರ ನಿರ್ದೇಶಿಸುವ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಿದ್ದರು. ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಆ ಕಿರುಚಿತ್ರ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿತ್ತು. ಈ ಬಾರಿ ಲೆಸ್ಬಿಯನ್ ಪ್ರೇಮಕಥೆಯ ಮೂಲಕ ಕನ್ನಡಕ್ಕೆ ಅಪರೂಪವಾದ ಕಥಾ ಎಳೆಯನ್ನು ಹೇಳಲು ಹೊರಟಿದ್ದಾರೆ.

Naanu Ladies | Shailaja Padindala

’ನನ್ನ ಮೊದಲ ಕಿರುಚಿತ್ರ ’ಮೆಮೋರೀಸ್ ಆಫ್ ಮೆಷೀನ್’ ಇದೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಈಗ ನನ್ನ ಮೊದಲ ಚಿತ್ರ ಕೂಡ ಇಲ್ಲಿಯೇ ಪ್ರದರ್ಶನಗೊಳ್ಳುತ್ತಿರುವುದಕ್ಕೆ ನಾನು ರೋಮಾಂಚಿತಳಾಗಿದ್ದೇನೆ. ತಸ್ವೀರ್ ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದೊಂದಿಗೆ ನನ್ನ ಅನುಭವ ಮರೆಯಲಾರದಂತಹದ್ದು’ ಎಂದು ಶೈಲಜಾ ಹೇಳಿದ್ದಾರೆ.

ಇನ್ನು ತಸ್ವೀರ್ ಫಿಲ್ಮ್ ಫೆಸ್ಟಿವಲ್‌ನ ಸಂಸ್ಥಾಪಕಿ ರೀಟಾ ಮೆಹೆರ್ “ಇದೊಂದು ಕಠಿಣ ಸ್ಪರ್ಧೆಯಾಗಿತ್ತು. ನಮ್ಮ ಚಲನಚಿತ್ರೋತ್ಸವದ 16 ನೇ ಆವೃತ್ತಿಯಲ್ಲಿ ಶೈಲಜಾ ಅವರ ‘ನಾನು ಲೇಡಿಸ್’  ಪ್ರದರ್ಶಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ನಾನು ಲೇಡೀಸ್ ಒಂದು ಸುಂದರ ಕಥೆ!” ಎಂದಿದ್ದಾರೆ.

ಚಿತ್ರದಲ್ಲಿ ಶೈಲಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಮೇದಿನಿ ಕೆಳಮನೆ, ಗುರು ಸೋಮಸುಂದರಮ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಛಾಯಾಗ್ರಹಣದ ಹೊಣೆಯನ್ನು ಹೊಸಬರಾದ ಕೋಮಲ್ ಖಿಯಾನಿ ಮತ್ತು ಚೆಹೆಕ್ ಬಿಲ್ಗಿ ಹೊತ್ತಿದ್ದಾರೆ. ಚಿತ್ರವನ್ನು ವಿಷ್ಣು ಪ್ರದೀಪ್, ಎಸ್ತರ್ ರೋಷಿತಾ ಮತ್ತು ತಿಜು ಈಸ್ತಪ್ಪನ್ ನಿರ್ಮಿಸಿದ್ದಾರೆ.

ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನದ ನಂತರ, ಚಲನಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: 200 ಹಲ್ಲಾ ಹೋ: ಪ್ರತೀಕಾರ ಹತ್ಯೆಯ ಸುತ್ತ ಮಹತ್ವದ ಜಾತಿ ದೌರ್ಜನ್ಯದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...