Homeಮುಖಪುಟದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದರು.

- Advertisement -
- Advertisement -

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಬಾಲಕಿ ಉಸಿರುಗಟ್ಟಿದ್ದರಿಂದ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದ್ದು, ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಧೇ ಶ್ಯಾಮ್‌ ಹೇಳಿಕೆಯನ್ನು ಪಡೆದಿರುವ ಪೊಲಿಸರು, “ರಾಧೇ ಶ್ಯಾಮ್‌ ಈ ಹಿಂದೆಯೂ ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದ” ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು (ಶ್ಯಾಮ್, ಕುಲ್‌ದೀಪ್‌ ಸಿಂಗ್, ಲಕ್ಷ್ಮಿನಾರಾಯಣ್ ಮತ್ತು ಸಲೀಂ ಅಹಮದ್‌) ಆಗಸ್ಟ್ 2ರಂದು ಪೊಲೀಸರು ಬಂದಿಸಿದ್ದರು. ಶ್ಯಾಮ್‌ ಪೂಜಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕೊಲೆಯಾದ ಬಾಲಕಿಯ ತಾಯಿಗೆ ಪರಿಚಯಸ್ಥರಾಗಿದ್ದರು.

ಅತ್ಯಾಚಾರ, ಕೊಲೆ ಹಾಗೂ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ನಾಲ್ವರ ಮೇಲೂ ಜಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪರಿಶಿಷ್ಟರ ಮೇಲೆ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ದೋಷಾರೋಪ ಪಟ್ಟಿ ಮಾಡಲಾಗಿದೆ.

ಪೊಲೀಸರು ಆರೋಪಿಗಳ ಬಹಿರಂಗ ಹೇಳಿಕೆಗಳು, ಸಾರ್ವಜನಿಕ ಸಾಕ್ಷಿಗಳು ಮತ್ತು ಸಿಸಿಟಿವಿ ಕ್ಯಾಮೆರಾ ತುಣುಕನ್ನು ಅವಲಂಬಿಸಿ ಪೊಲೀಸರು ಜಾರ್ಜ್‌‌ಶೀಟ್ ರೂಪಿಸಿದ್ದಾರೆ.

ಇದನ್ನೂ ಓದಿ:  ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸ್ಮಶಾನದಲ್ಲಿ ನೀರು ತರಲೆಂದು ಬಾಲಕಿ ಹೋದಾಗ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದಾಗ ಶ್ಯಾಮ್‌, ಬಾಲಕಿಯ ಬಾಯಿಯನ್ನು ಬಿಗಿಹಿಡಿದಿದ್ದರಿಂದ ಸಾವು ಸಂಭವಿಸಿದೆ. ಅತ್ಯಾಚಾರ ಎಸಗುವಾಗ ಕುಲದೀಪ್‌ ಸಿಂಗ್‌ ಬಾಲಕಿಯ ಕೈಗಳನ್ನು ಹಿಡಿದಿದ್ದನು. ಶ್ಯಾಮ್‌ ಮತ್ತು ಸಿಂಗ್‌ ಅತ್ಯಾಚಾರ ಎಸಗುವಾಗ ಅಹಮದ್‌ನನ್ನು ಜಿಲೇಬಿ ತರಲು ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯು ಉಸಿರಾಡುವುದನ್ನು ನಿಲ್ಲಿಸಿದ ನಂತರ ಆರೋಪಿಯು ಗಲಿಬಿಲಿಗೊಂಡನು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ‘ವಿದ್ಯುತ್ ತಂತಿ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಪೋಷಕರು ನಂಬುವಂತೆ ಮಾಡಲು ಆರೋಪಿಗಳು ಬಾಲಕಿಯ ದೇಹದ ಮೇಲೆ ನೀರು ಸುರಿದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್‌ ತಾನು ಪೋರ್ನ್‌ ವಿಡಿಯೊಗಳನ್ನು ನೋಡಲು ಬಳಸುತ್ತಿದ್ದ ಮೊಬೈಲ್‌ ಹಾಗೂ ಅತ್ಯಾಚಾರಕ್ಕೆ ಬಳಕೆಯಾಗಿದ್ದ ಬೆಡ್‌ಶೀಟ್‌ಅನ್ನು ಸ್ಮಶಾನದಲ್ಲಿ ಬೆಂಕಿ ಹಾಕುವ ಮೂಲಕ ಸಾಕ್ಷ್ಯಾನಾಶಕ್ಕೆ ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯ ಪೋಷಕರನ್ನು ಬೆದರಿಸಿದ್ದಾರೆ. ಅವರ ಬಡತನ, ಅನಕ್ಷರತೆ, ಜಾತಿಯ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಬಾಲಕಿಯನ್ನು ಬಲವಂತವಾಗಿ ಸುಟ್ಟಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸೆ.29ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...