Homeಕರ್ನಾಟಕಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು... ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ.....

ಎಕ್ಸಿಟ್ ಪೋಲ್ಸ್ ಹೊರ ಹಾಕಿದ ‘ಸರ್‍ಪ್ರೈಸ್’ಗಳು… ಈ ಪೋಲ್ಸ್ ಬಗ್ಗೆ ಅನುಮಾನ ಏಕೆಂದರೆ…..

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು.

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಎಕ್ಸಿಟ್ ಪೋಲ್ಸ್ ಮತ್ತೆ ಮೋದಿಯೇ ಪ್ರಧಾನಿ ಎಂಬರ್ಥದಲ್ಲಿ ಬಂದಿವೆ. ಆದರೆ, ಇವು ಹಲವು ‘ಸರ್‍ಪ್ರೈಸ್’ ಅಂಶಗಳನ್ನೂ ನಮ್ಮ ಮುಂದಿಟ್ಟಿವೆ. 2014ರಲ್ಲಿ ಮೋದಿ ಹವಾ ಇದ್ದಾಗ ಈ ಎಲ್ಲ ಪೋಲ್ಸ್ ಹೆಚ್ಚೂ-ಕಡಿಮೆ ಸತ್ಯವನ್ನೇ ನುಡಿದಿದ್ದವು. ಆದರೆ 2004, 2009 ರಲ್ಲಿ ಇವು ನೀಡಿದ ಫಲಿತಾಂಶ ಉಲ್ಟಾಪಪ್ಟಾ ಆಗಿತ್ತು. ಈ ಸಲವೂ ಹಾಗೇಕೆ ಆಗಬಾರದು ಎಂಬ ಪ್ರಶ್ನೆ ಇಟ್ಟುಕೊಂಡೇ, ಈ ಸಲದ ಪೋಲ್ಸ್‍ಗಳ ಕುರಿತು ಒಂದು ಬರಹ ಇಲ್ಲಿದೆ…

ಬಿಜೆಪಿ ಪರವಾದ ಒಂದು ಸಣ್ಣ ಸುದ್ದಿ ಬಂದರೂ ಪಟಾಕಿ ಹೊಡೆಯುವ ‘ಮೋದಿ ಭಕ್ತರೇ’ ಎಕ್ಸಿಟ್ ಪೋಲ್ ಬಂದ ಮೇಲೂ ಅಂತಹ ಉತ್ಸಾಹ ತೋರಿಲ್ಲ! ಯಡಿಯೂರಪ್ಪ ಬಿಟ್ಟರೆ ಉಳಿದವರಿಗೆ ಈ ಎಕ್ಸಿಟ್ ಪೋಲ್ ಉತ್ಸಾಹವನ್ನೇನೂ ಕೊಟ್ಟಂತಿಲ್ಲವಲ್ಲ? ಆದರೆ, ಬಿಜೆಪಿಯೇ ಅಧಿಕಾರದಲ್ಲಿ ಇರಲಿ ಎಂದು ಬಯಸುವ ಶೇರು ಮಾರುಕಟ್ಟೆಯಲ್ಲಿ ಈ ಸಂಭ್ರಮ ಕಂಡಿದೆ.

ವಿಷಯ ಏನೆಂದರೆ, ಈ ಎಕ್ಸಿಟ್ ಪೋಲ್‍ಗಳ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೆ, ‘ಬುದ್ಧಿವಂತರು’ ನಡೆಸುವ ಸ್ಟಾಕ್ ಮಾರ್ಕೆಟ್ ಹುಚ್ಚೆದ್ದು ಕುಣಿದಿದೆ. ಅದಕ್ಕೂ ಗೊತ್ತು ಈ ಎಕ್ಸಿಟ್ ಪೋಲ್ ನಮಗಾಗಿಯೇ ಮಾಡಿದ್ದು ಎಂದು… ಮೂರು-ನಾಲ್ಕು ದಿನಗಳ ವಹಿವಾಟು ಎಂದರೆ ಅದು 20 ಲಕ್ಷ ಕೋಟಿಗಳ ದಂಧೆ!ಇದನ್ನೆಲ್ಲ ಬಿಡೋಣ… ಈಗ ನೇರವಾಗಿ ಎಕ್ಸಿಟ್ ಪೋಲ್ ಹೇಳಿದ್ದು ಸತ್ಯಕ್ಕಿಂತ ಹೇಗೆ ದೂರ ಎಂದು ನೋಡೋಣ….

ರಾಜ್ಯ ಬಿಜೆಪಿ 18-24: ಎಲ್ಲಿಂದ ಹೆಚ್ಚುವರಿ ಗಳಿಕೆ?

ಕರ್ನಾಟಕದಲ್ಲಿ 28ರಲ್ಲಿ ಬಿಜೆಪಿ 18-24ರವರೆಗೂ ಸೀಟು ಗೆಲ್ಲುವುದಂತೆ! ಇದು ಬಿಜೆಪಿಯ ಕಾರ್ಯಕರ್ತರಿಗೇ ‘ಭಯ’ ಹುಟ್ಟಿಸುವ ನ್ಯೂಸ್! ಎಲ್ಲಿಂದ ಅವರು ಗೆಲ್ಲುತ್ತಾರೆ? ಕಳೆದ ಸಲ 17 ಗೆದ್ದಿದ್ದರು. ಈಗ ಅದಕ್ಕಿಂತ ಹೆಚ್ಚುವರಿಯಾಗಿ ಗೆಲ್ಲಬಹುದಾದ 3-5 ಕ್ಷೇತ್ರ ಇವೆಯಾ? ಇದುವರೆಗಿನ ಅಂದಾಜಿನಂತೆ ಕೆಲವು ಬಿಜೆಪಿ ಎಂಪಿಗಳು ಸೋಲಬಹುದು. ಈ ಸೋತ ಕ್ಷೇತ್ರಗಳನ್ನು ಕವರ್ ಮಾಡಿಕೊಂಡು 20-23 ತಲುಪಲು ಬಿಜೆಪಿ ಹೊಸ ಕ್ಷೇತ್ರಗಳನ್ನು ಗೆಲ್ಲಬೇಕಲ್ಲ? ಇನ್ನೊಂದು ವಿಷಯ, ಸಮೀಕ್ಷೆ ಮಾಡಿದ ಸಂಸ್ಥೆ ಮತ್ತು ಅದರ ಸಹಭಾಗಿಯಾಗಿ ಅದನ್ನು ಪ್ರಕಟಿಸಿದ ಚಾನೆಲ್‍ಗಳ ಪ್ರಕಾರ, 2014ರ ಲೆಕ್ಕದಲ್ಲಿ ಇಲ್ಲಿ 17 ಬಿಜೆಪಿ ಸಂಸದರು ಇದ್ದಾರೆ! ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಸೋತ ಮೇಲೆ ಬಿಜೆಪಿ ಸಂಸದರ ಸಂಖ್ಯೆ 16… ಈ ಪ್ರಾಥಮಿಕ ಅಂಕಿಸಂಖ್ಯೆಯ ತಿಳುವಳಿಕೆ ಇಲ್ಲದವರು ಅದೆಂತಹಾ ಸಮೀಕ್ಷೆ ಮಾಡಿದರು… ಅದನ್ನು ಫ್ಯಾಕ್ತುವಲ್ ಎರರ್ ಅಂದುಕೊಳ್ಳಲೂ ಆಗಲ್ಲ. ಏಕೆಂದರೆ, ಇಲ್ಲಿ ಮೈತ್ರಿಯ ಪರಿಣಾಮವಾಗಿಯೇ ಬಳ್ಳಾರಿಯಲ್ಲಿ ದೊಡ್ಡ ಲೀಡ್ ಬಂದಿದ್ದು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಮತ್ತು ನಿತ್ಯ ಸಿಎಂ ಆಕಾಂಕ್ಷಿ ಯಡಿಯೂರಪ್ಪನವರ ಸ್ವಂತ ಕ್ಷೇತ್ರದಲ್ಲಿ ಅವರ ಮಗ ಜೆಡಿಎಸ್ ವಿರುದ್ಧ ಕೇವಲ 50 ಸಾವಿರ ಓಟುಗಳಿಂದ ಗೆದ್ದರಲ್ಲವೇ? ಅದು ಮೈತ್ರಿಯ ಎಫೆಕ್ಟ್ ಅಲ್ಲವೇ?

ಎಕ್ಸಿಟ್ ಪೋಲ್ಸ್ ಪ್ರಕಾರ, ಸದ್ಯ ಇಲ್ಲಿ ಮೈತ್ರಿಯ ಪ್ರಭಾವ ಇಲ್ಲ, ಓಕೆ ಎನ್ನೋಣ… ಬಿಜೆಪಿಗೆ ಹೆಚ್ಚುವರಿ ಸೀಟು ಗೆಲ್ಲಲು ಕಾರಣವಾದ ಅಂಶವೂ ನಮಗೆ ಕಾಣುತ್ತಿಲ್ಲವಲ್ಲ?

ಆಶ್ಚರ್ಯಗಳು, ಪ್ರಶ್ನೆಗಳು, ಸಂಶಯಗಳು
ಹೀಗಾಗಿ, ಈಗ ಪ್ರಕಟವಾಗಿರುವ ಎಕ್ಸಿಟ್ ಪೋಲ್ಸ್‍ಗಳ ಮೆಥಡಾಲಜಿಯ ಬಗ್ಗೆಯೇ ಒಂದು ಸಂಶಯ ಶುರುವಾಗಿದೆ… ಹಾಗಂತ, ಇದೇನೂ ಮೊದಲಲ್ಲ, ಹಲವಾರು ರಾಜ್ಯ ವಿಧಾನಸಭೆಗಳ ಚುನಾವಣೆಗಳ ಸಂದರ್ಭದಲ್ಲೂ ಈ ಸಮೀಕ್ಷೆಗಳು ನೆಗೆದು ಬಿದ್ದಿವೆ. ಹಾಗಿದ್ದರೂ, ಇವು ಮತ್ತೆ ಮತ್ತೆ ‘ತಾವು ಅಕ್ಯುರೇಟ್’ ಎಂದು ನಮ್ಮ ಮುಂದೆ ಬರುತ್ತಿವೆ. ಅಷ್ಟಕ್ಕೂ, ಯಾರಿದು ಸಿ-ವೋಟರ್? ಯಾವುದಿದು ನೆಲ್ಸನ್? ಟುಡೆಸ್ ಚಾಣಕ್ಯದ ಹಿನ್ನೆಲೆಯೇನು? ಈ ಕುರಿತಾಗಿ ಯಾವುದೂ ಪಾರದರ್ಶಕವಾಗೇ ಇಲ್ಲ. ಈ ಎಲ್ಲ ಬಿಸಿನೆಸ್ ಕಂಪನಿಗಳು (ದಂಧೆಕೋರರು) ನಮ್ಮ ಮುಂದೆ ಹಾಜರಾಗುವುದು ಚಾನೆಲ್‍ಗಳ ಮೂಲಕ! ಈ ಚಾನೆಲ್‍ಗಳೇ ಈಗ ಎಕ್ಸಿಟ್ ಪೋಲ್ಸ್ ದಂಧೆಯ ಸಾರ್ವಜನಿಕ ಮುಖಗಳು….

ದಲ್ಲಾಳಿಗಳು ಅನ್ನಬಾರದೇಕೆ? ನಿನ್ನೆ ಎಕ್ಸಿಟ್ ಪೋಲ್ ಪ್ರಕಟವಾದ ನಂತರ ಸ್ಟಾಕ್ ಮಾರ್ಕೆಟಿನಲ್ಲಿ ಸಂಭ್ರಮ! ಅದಾನಿ ಕಂಪನಿಗಳ ಶೇರು ವಹಿವಾಟಿನಲ್ಲಿ ಶೇ.13ರಷ್ಟು ಹೆಚ್ಚಳ!

ಎನ್‍ಡಿಎಗೆ ಅತಿ ಹೆಚ್ಚು ಸೀಟು 345 ಇದ್ದರೆ, ಉಳಿದ ಬಹುತೇಕ ಸಂಸ್ಥೆಗಳು 300ಕ್ಕೂ ಹೆಚ್ಚು ನೀಡಿವೆ. ಎನ್‍ಡಿಎಗೆ 240-260 ರ ಸಂಖ್ಯೆಯನ್ನು ಎರಡೇ ಎರಡು ಕಂಪನಿ ನೀಡಿವೆ… ಸರಾಸರಿ 300 ದಾಟದೇ ಇರುತ್ತಾ?
ಇವುಗಳಲ್ಲಿ ನಿರ್ದಿಷ್ಟ ಪಕ್ಷದ ಪರವಾಗಿ ಸಮೀಕ್ಷೆಯನ್ನು ರೂಪಿಸಿಕೊಡುವುದಕ್ಕಾಗಿ ಸಿಕ್ಕಿ ಹಾಕಿಕೊಂಡಿದ್ದ ಸಿ-ವೋಟರ್ ಇದೆ.

ಪುಣ್ಯಕ್ಕೆ ‘ಪ್ರಜಾವಾಣಿ’ಯಾದರೂ, ಸಮೀಕ್ಷೆಗಳು ನಿಜವಾದ ನಿದರ್ಶನಗಳು ಕಡಿಮೆ’ ಎಂದು ಮುಖಪುಟದ ಟೈಟಲ್ಲಿನಲ್ಲಿ ಹಾಕಿದೆ…

Statistics ಎಂಬ ಆಟ!
Probability ಅನ್ನೋ ಜೂಜು!

ಈಗ ಮತ್ತೆ ನಿನ್ನೆಯ ಎಕ್ಸಿಟ್ ಪೋಲ್‍ಗೆ ಬರೋಣ. ಅವು ಹತ್ತಿರಕ್ಕೆ ಸಮೀಪ ಇರಬಹುದು, ಸರಿ ಒಪ್ಪೋಣ. ಆದರೆ ಅದನ್ನೆಲ್ಲ ವೈಜ್ಞಾನಿಕ, ಗಣಿತಶಾಸ್ತ್ರೀಯ ಮಾನದಂಡ, ಅಲ್ಗೋರಿಥಮ್‍ಗಳ ನೆರವಿನಿಂದ ಮಾಡಲಾಗಿದೆ ಎಂದು ಬೊಬ್ಬೆ ಹೊಡೆಯಲಾಗುತ್ತಿದೆ. ಈ ಎಕ್ಸಿಟ್ ಪೋಲ್‍ಗಳಿಗೆ ಮಹಾ ಯಶಸ್ಸು ಅಂತಾ ಸಿಕ್ಕಿದ್ದರೆ, ಅದು 2014ರ ಚುನಾವಣೆಯಲ್ಲಿ… ನಿಖರ ಸಂಖ್ಯೆ ಹೇಳಲಾಗದಿದ್ದರೂ, ಈ ಸಲ ಮೋದಿ ಸರ್ಕಾರವೇ ಅಂತಾ ಜನರೇ ಹೇಳುತ್ತಿದ್ದರು. (ಹಾಗೆ ಅವರನ್ನು ಮಾಧ್ಯಮಗಳು, ಸುಶಿಕ್ಷಿತರು ನಂಬಿಸಿದ್ದರು!)… ಜನರು ಹೇಳಿದ್ದನ್ನೇ ಈ ಪೋಲ್‍ಗಳು ಹೇಳಿದ್ದವು.

ಆದರೆ, 2004 ಮತ್ತು 2009ರ ಲೋಕಸಭಾ ಚುನಾವಣೆಗಳಲ್ಲಿ ಈ ಸಂಸ್ಥೆಗಳು ಬಿಜೆಪಿ ಪರವಾಗಿಯೇ ಸಮೀಕ್ಷೆ ‘ರೂಪಿಸಿದ್ದವು’ ಮತ್ತು ಇದೇ ಚಾನೆಲ್‍ಗಳು ತುತ್ತೂರಿ ಊದಿದ್ದವು. ‘ಗ್ರೇಟ್ ಲೀಡರ್’ ವಾಜಪೇಯಿ 2004ರಲ್ಲಿ ಮಕಾಡೆ ಮಲಗಿದರು. 2009ರಲ್ಲಿ ಮನಮೋಹನಸಿಂಗ್‍ರನ್ನು ಜರಿದು, ಅವಮಾನ ಮಾಡಿದ ಮೇಲೂ, ಈ ಸಲ ಎನ್‍ಡಿಎ ಎಂದು ಹೇಳಿದ್ದ ಸಮೀಕ್ಷೆಗಳು ಬಕ್ಕಬರಲು ಮಲಗಿದ್ದವು!
ಈ ದೇಶದಲ್ಲಿ ಈಗ ಸಮೀಕ್ಷೆಯೂ ಒಂದು ದಂಧೆಯಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...