Homeಕರ್ನಾಟಕಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆ ರೈತ ಸಂಘಟನೆಗಳು ಸೆಪ್ಟಂಬರ್‌ 27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಕರೆಗೆ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ರಾಜ್ಯದಲ್ಲೂ ಭಾರತ್ ಬಂದ್‌ಗೆ ಬೆಂಬಲವಾಗಿ ಸೆಪ್ಟಂಬರ್‌ 27ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯ ಕ್ಯಾಮ್ಸ್‌ ಕೂಡ ಈ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

“ನಮ್ಮ ನೆಲ, ಜಲ, ಸಂಸ್ಕಾರ, ಸಂಸ್ಕೃತಿಗೆ ದಕ್ಕೆ ಉಂಟಾದಾಗ ಸಂದರ್ಭಕ್ಕನುಗುಣವಾಗಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯವರು ತಮ್ಮದೇ ಆದ ರೀತಿಯಲ್ಲಿ ಭಾಗವಹಿಸುವಿಕೆ ಹಾಗು ಬೆಂಬಲ ವ್ಯಕ್ತಪಡಿಸಿರುವುದು ತಿಳಿದಿರುವ ವಿಷಯ, ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವಂಚಿತವಾಗಿ ಮಕ್ಕಳ ನಿರಂತರ ಕಲಿಕೆಯಲ್ಲಿ ಹೆಚ್ಚಿನ ಅನ್ಯಾಯವಾಗಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗೆ ರಜೆ ಕೊಟ್ಟು ಹೋರಾಟಕ್ಕೆ ಭಾಗವಹಿಸಲು ಕಷ್ಟಸಾಧ್ಯ ಎಂಬುವ ಅಭಿಪ್ರಾಯದೊಂದಿಗೆ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು,  ಶಿಕ್ಷಕೇತರ ಸಿಬ್ಬಂದಿ, ವ್ಯವಸ್ಥಾಪಕರು ಸಾಂಕೇತಿಕ ಬೆಂಬಲ ನೀಡಲು ಕ್ಯಾಮ್ಸ್‌ ಮನವಿ ಮಾಡಿದೆ” ಎಂದಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಜೊತೆಗೆ ಸೆಪ್ಟಂಬರ್‌ 27ರ ದಿನ ಹಸಿರು ಉಡುಪು ಅಥವಾ ಹಸಿರು ಪಟ್ಟಿಯನ್ನು ಧರಿಸುವ ಮುಖಾಂತರ ಈ ಒಂದು ಹೋರಾಟಕ್ಕೆ ನೈತಿಕ ಬೆಂಬಲ ಕೊಡಬೇಕಾಗಿ ತಮ್ಮಲ್ಲಿ ಮನವಿ ಮಾಡಲಾಗಿದೆ. ನಮ್ಮ ಸಂಘಟನೆಯ ಎಲ್ಲಾ ಸದಸ್ಯರು ರೈತರ ಹೋರಾಟಕ್ಕೆ ತಾವುಗಳು ನೈತಿಕ ಬೆಂಬಲ ಕೊಟ್ಟು ಸಂಘಟನೆಯ ನಿಲುವನ್ನು ಆದರಿಸುತ್ತೀರ ಎಂದು ನಂಬಿರುತ್ತೇವೆ ಎಂದು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಅಂಗವಾಗಿ “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದರು. ಇದಕ್ಕೆ ಹಲವು ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ.


ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...