Homeಕರ್ನಾಟಕಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆ ರೈತ ಸಂಘಟನೆಗಳು ಸೆಪ್ಟಂಬರ್‌ 27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಕರೆಗೆ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ರಾಜ್ಯದಲ್ಲೂ ಭಾರತ್ ಬಂದ್‌ಗೆ ಬೆಂಬಲವಾಗಿ ಸೆಪ್ಟಂಬರ್‌ 27ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯ ಕ್ಯಾಮ್ಸ್‌ ಕೂಡ ಈ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

“ನಮ್ಮ ನೆಲ, ಜಲ, ಸಂಸ್ಕಾರ, ಸಂಸ್ಕೃತಿಗೆ ದಕ್ಕೆ ಉಂಟಾದಾಗ ಸಂದರ್ಭಕ್ಕನುಗುಣವಾಗಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯವರು ತಮ್ಮದೇ ಆದ ರೀತಿಯಲ್ಲಿ ಭಾಗವಹಿಸುವಿಕೆ ಹಾಗು ಬೆಂಬಲ ವ್ಯಕ್ತಪಡಿಸಿರುವುದು ತಿಳಿದಿರುವ ವಿಷಯ, ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವಂಚಿತವಾಗಿ ಮಕ್ಕಳ ನಿರಂತರ ಕಲಿಕೆಯಲ್ಲಿ ಹೆಚ್ಚಿನ ಅನ್ಯಾಯವಾಗಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗೆ ರಜೆ ಕೊಟ್ಟು ಹೋರಾಟಕ್ಕೆ ಭಾಗವಹಿಸಲು ಕಷ್ಟಸಾಧ್ಯ ಎಂಬುವ ಅಭಿಪ್ರಾಯದೊಂದಿಗೆ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು,  ಶಿಕ್ಷಕೇತರ ಸಿಬ್ಬಂದಿ, ವ್ಯವಸ್ಥಾಪಕರು ಸಾಂಕೇತಿಕ ಬೆಂಬಲ ನೀಡಲು ಕ್ಯಾಮ್ಸ್‌ ಮನವಿ ಮಾಡಿದೆ” ಎಂದಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಜೊತೆಗೆ ಸೆಪ್ಟಂಬರ್‌ 27ರ ದಿನ ಹಸಿರು ಉಡುಪು ಅಥವಾ ಹಸಿರು ಪಟ್ಟಿಯನ್ನು ಧರಿಸುವ ಮುಖಾಂತರ ಈ ಒಂದು ಹೋರಾಟಕ್ಕೆ ನೈತಿಕ ಬೆಂಬಲ ಕೊಡಬೇಕಾಗಿ ತಮ್ಮಲ್ಲಿ ಮನವಿ ಮಾಡಲಾಗಿದೆ. ನಮ್ಮ ಸಂಘಟನೆಯ ಎಲ್ಲಾ ಸದಸ್ಯರು ರೈತರ ಹೋರಾಟಕ್ಕೆ ತಾವುಗಳು ನೈತಿಕ ಬೆಂಬಲ ಕೊಟ್ಟು ಸಂಘಟನೆಯ ನಿಲುವನ್ನು ಆದರಿಸುತ್ತೀರ ಎಂದು ನಂಬಿರುತ್ತೇವೆ ಎಂದು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಅಂಗವಾಗಿ “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದರು. ಇದಕ್ಕೆ ಹಲವು ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ.


ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...