Homeಕರ್ನಾಟಕಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆ ರೈತ ಸಂಘಟನೆಗಳು ಸೆಪ್ಟಂಬರ್‌ 27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಕರೆಗೆ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ರಾಜ್ಯದಲ್ಲೂ ಭಾರತ್ ಬಂದ್‌ಗೆ ಬೆಂಬಲವಾಗಿ ಸೆಪ್ಟಂಬರ್‌ 27ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯ ಕ್ಯಾಮ್ಸ್‌ ಕೂಡ ಈ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

“ನಮ್ಮ ನೆಲ, ಜಲ, ಸಂಸ್ಕಾರ, ಸಂಸ್ಕೃತಿಗೆ ದಕ್ಕೆ ಉಂಟಾದಾಗ ಸಂದರ್ಭಕ್ಕನುಗುಣವಾಗಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯವರು ತಮ್ಮದೇ ಆದ ರೀತಿಯಲ್ಲಿ ಭಾಗವಹಿಸುವಿಕೆ ಹಾಗು ಬೆಂಬಲ ವ್ಯಕ್ತಪಡಿಸಿರುವುದು ತಿಳಿದಿರುವ ವಿಷಯ, ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವಂಚಿತವಾಗಿ ಮಕ್ಕಳ ನಿರಂತರ ಕಲಿಕೆಯಲ್ಲಿ ಹೆಚ್ಚಿನ ಅನ್ಯಾಯವಾಗಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗೆ ರಜೆ ಕೊಟ್ಟು ಹೋರಾಟಕ್ಕೆ ಭಾಗವಹಿಸಲು ಕಷ್ಟಸಾಧ್ಯ ಎಂಬುವ ಅಭಿಪ್ರಾಯದೊಂದಿಗೆ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು,  ಶಿಕ್ಷಕೇತರ ಸಿಬ್ಬಂದಿ, ವ್ಯವಸ್ಥಾಪಕರು ಸಾಂಕೇತಿಕ ಬೆಂಬಲ ನೀಡಲು ಕ್ಯಾಮ್ಸ್‌ ಮನವಿ ಮಾಡಿದೆ” ಎಂದಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಜೊತೆಗೆ ಸೆಪ್ಟಂಬರ್‌ 27ರ ದಿನ ಹಸಿರು ಉಡುಪು ಅಥವಾ ಹಸಿರು ಪಟ್ಟಿಯನ್ನು ಧರಿಸುವ ಮುಖಾಂತರ ಈ ಒಂದು ಹೋರಾಟಕ್ಕೆ ನೈತಿಕ ಬೆಂಬಲ ಕೊಡಬೇಕಾಗಿ ತಮ್ಮಲ್ಲಿ ಮನವಿ ಮಾಡಲಾಗಿದೆ. ನಮ್ಮ ಸಂಘಟನೆಯ ಎಲ್ಲಾ ಸದಸ್ಯರು ರೈತರ ಹೋರಾಟಕ್ಕೆ ತಾವುಗಳು ನೈತಿಕ ಬೆಂಬಲ ಕೊಟ್ಟು ಸಂಘಟನೆಯ ನಿಲುವನ್ನು ಆದರಿಸುತ್ತೀರ ಎಂದು ನಂಬಿರುತ್ತೇವೆ ಎಂದು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಅಂಗವಾಗಿ “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದರು. ಇದಕ್ಕೆ ಹಲವು ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ.


ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...