Homeಕರ್ನಾಟಕಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

- Advertisement -
- Advertisement -

ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟಂಬರ್‌ 27ಕ್ಕೆ ಕರೆ ನೀಡುರುವ ಭಾರತ್ ಬಂದ್‌ಗೆ ರಾಷ್ಟ್ರವ್ಯಾಪಿ ಬೆಂಬಲ ವ್ಯಕ್ತವಾಗಿದೆ. ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ ಕೂಡ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ, ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿ ಬಂದ್‌ನಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಭಾರತ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಐತರ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ರೈತ ವಿರೋಧಿ ನಿಲುವುಗಳನ್ನು ಮುಂದುವರೆಸುತ್ತಿರುವುದು ದುರಾದೃಷ್ಟಕರ” ಎಂದಿದೆ”.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

“ಸೆ. 27 ರಂದು ಹಲವು ರೈತ ಸಂಘಟನೆಗಳು ಒಗ್ಗೂಡಿ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ಗೆ ಕರೆ ನೀಡಿದ್ದು, ಸದರಿ ಕೃಷಿ ಮಸೂದೆಗಳಲ್ಲಿ ರೈತರ ಹಿತಾಸಕ್ತಿ ಯನ್ನು ಕಡೆಗಣಿಸಿ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತಹ ಹತ್ತಾರು ಅಂಶಗಳನ್ನು ಒಳಗೊಂಡಿದ್ದು ,ಈ ಕೃಷಿ ಕಾಯ್ದೆಗಳನ್ನು ಅಖಿಲ ಭಾರತ ವಕೀಲರ ಒಕ್ಕೂಟ (AILU ) ಕರ್ನಾಟಕ ರಾಜ್ಯ ಸಮಿತಿ ವಿರೋಧಿಸುತ್ತಿದ್ದು ಭಾರತ್ ಬಂದ್ ಅನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿಕೆ ನೀಡಿದೆ.

ಭಾರತ್ ಬಂದ್‌ಗೆ ಎಸ್‌ಕೆಎಂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್‌ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.

“ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್‌ ಆಗಲಿದೆ. ಬಂದ್‌‌ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಎಸ್‌ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸೆ. 27 ರಂದು ರಾಜ್ಯದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...