Homeಕರ್ನಾಟಕಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊರೊನಾ ಎರಡನೆ ಅಲೆಯ ಲಾಕ್‌ಡೌನ್‌ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಮಿಕರಿಗೆ ಸೇರಬೇಕಾಗಿದ್ದ ರೇಷನ್ ಕಿಟ್‌ಗಳನ್ನು ಬಿಜೆಪಿ ನಾಯಕರುಗಳು ಮತ್ತು ಅವರ ಸಂಬಂಧಿಕರ ಮನೆಗೆ ಸಾಗಾಟ ಮಾಡಿದ್ದಲ್ಲದೆ, ಅವಧಿ ಮುಗಿದಿರುವ ರೇಷನ್‌ ಕಿಟ್ಟುಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದಾರೆ ಎಂದು ಬೆಳಗಾವಿಯ ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅಲ್ಲದೇ ರೇಷನ್‌ ಕಿಟ್‌ ಸಂಗ್ರಹ ಮಾಡಿಟ್ಟ ಗೋದಾಮಿಗೆ ಕಳೆದ ವಾರ ದಾಳಿ ನಡೆಸಿ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಲಾಕ್‌ಡೌನ್‌‌‌ ಘೋಷಣೆಯಾದ ನಂತರ, ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆಯು ರಾಜ್ಯದಾದ್ಯಂತ ರೇಷನ್‌ ಕಿಟ್‌ ಹಂಚಿಕೆ ಮಾಡಿತ್ತು. ಅದರಂತೆ ಬೆಳಗಾವಿಗೂ ರೇಷನ್‌ ಕಿಟ್‌ ತಲುಪಿತ್ತಾದರೂ ಮೂರು ತಿಂಗಳು ಕಳೆದರೂ ವಿತರಣೆ ಆಗದೆ ಸುಮಾರು 15-20 ಸಾವಿರದಷ್ಟು ಕಿಟ್‌ಗಳು ಬೆಳಗಾವಿಯ ಪಿಬಿ ನಗರದ ಸಾಯಿ ಭವನದಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಬಿಜೆಪಿ ಶಾಸಕಿ

ಈ ನಡುವೆ, ಪಾಲಿಕೆ ಚುನಾವಣೆ ಘೋಷಣೆಯಾದಾಗ ಮತದಾರರಿಗೆ ರೇಷನ್‌ ಕಿಟ್‌ ಆಮಿಷವನ್ನು ತೋರಿಸಲಾಗಿತ್ತು. ಅದಾಗಿ ಚುನಾವಣೆ ಮುಗಿಯುತ್ತಿದ್ದಂತೆ ಈ ರೇಷನ್‌ ಕಿಟ್ಟುಗಳನ್ನು ಬಿಜೆಪಿಯ ಶಾಸಕರ ಆಪ್ತರ ಮನೆಗಳು, ಕೌನ್ಸಿಲರ್‌ಗಳ ಆಪ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ದಾಸ್ತಾನು ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಆದರೆ ಈ ಮಧ್ಯೆ, ಅಕ್ರಮವಾಗಿ ದಾಸ್ತಾನು ಮಾಡಿಟ್ಟ ರೇಷನ್‌ ಕಿಟ್‌ಗಳ ಅವಧಿ ಮುಗಿದಿದ್ದು ಕೂಡಾ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆಯೆ ವಿತರಣೆ ಆಗಬೇಕಿದ್ದ ರೇಷನ್‌ ಕಿಟ್‌ ಅನ್ನು, ಸ್ಥಳೀಯ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ವಿತರಿಸದೆ ಹಾಗೆ ಇಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್‌ ಮತ್ತು ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಅಕ್ರಮವನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ. ಆದರೆ ಮನವಿ ನೀಡಿ ಇಷ್ಟು ದಿನ ಕಳೆದರೂ ಇರುವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಸರಳಾ ಸಾತ್ಪುತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾರ್ಮಿಕ ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿಚಾರಿಸಲು ನಾನುಗೌರಿ.ಕಾಂ ಬೆಳಗಾವಿ ಕಾರ್ಮಿಕ ಇಲಾಖೆಯ ಉಪ ಆಯುಕ್ತರಾಗಿರುವ ವೆಂಕಟೇಶ್‌ ಎ. ಶಿಂಧಿಹಟಿ ಅವರಿಗೆ ಕರೆ ಮಾಡಿದ್ದು ಅವರು ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

ಇಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಜೀವ ಬೆದರಿಕೆ ಕೂಡಾ ಒಡ್ಡಿದ್ದಾರೆ ಎಂದು ದೂರಲಾಗಿದೆ. ಅಕ್ರಮಗಳನ್ನು ಮೊಬೈಲಿನಲ್ಲಿ ಸೆರೆಹಿಡಿಯಲು ತೆರಳಿದ್ದ, ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ದುಂಡಾವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಐದಾರು ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಸರಳಾ ಸಾತ್ಪುತೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಕಚೇರಿಯಲ್ಲೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಕಾರ್ಯಕರ್ತ; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...