Homeಕರ್ನಾಟಕರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಕ್ಷಮೆ ಕೇಳಿದ ಯಕ್ಷಗಾನ ಕಲಾವಿದ

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ರೈತ ನಾಯಕರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ.

ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು ಅಪ್ಪಟ ಮೋದಿ ಅಭಿಮಾನಿ ಎಂಬುದು ಆತನ ಫೇಸ್‌ಬುಕ್‌ ಪೋಸ್ಟ್‌ಗಳಿಂದಲೇ ಸಾಬೀತಾಗುತ್ತದೆ. ಈ ಕಲಾವಿದ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ರೈತರ ಕ್ಷಮೆ ಕೇಳಿದ್ದಾನಾದರೂ, ರೈತ ಹೋರಾಟದ ಕುರಿತಾದ ಈ ಬಿಜೆಪಿ ಬೆಂಬಲಿಗನ ಹೇಳಿಕೆಗಳು ಮಾತ್ರ ಉದ್ದೇಶ ಪೂರ್ವಕ ಎಂಬುದು ಸ್ಪಷ್ಟ.

ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ಅವರೆಲ್ಲರು ನಕಲಿಗಳು, ಒಂದು ವೇಳೆ ರೈತರು ರಸ್ತೆಯಲ್ಲಿ ಕುಳಿತಿದ್ದರೆ ನಮಗೆ ತಿನ್ನಲು ಅಕ್ಕಿ ಎಲ್ಲಿಂದ ಸಿಗುತ್ತಿತ್ತು? ನಿಜವಾದ ರೈತರು ಇನ್ನೂ ಗದ್ದೆಯಲ್ಲೇ ಇದ್ದಾರೆ. ಈಗ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವುದು ತಂತಿಯ ಮೇಲೆ ನಡೆಯುವ ಮಂಗನಂತಹ ವ್ಯಕ್ತಿಯಲ್ಲ. ಬದಲಿಗೆ ಸಿಂಹದಂತಹ ವ್ಯಕ್ತಿ ಅಧಿಕಾರದಲ್ಲಿದ್ದಾರೆ. ನೀವು 6 ತಿಂಗಳಲ್ಲ 6 ವರ್ಷ ಹೋರಾಟ ನಡೆಸಿದರೂ ಪ್ರಯೋಜನವಿಲ್ಲ. ಕೃಷಿ ಕಾಯ್ದೆಯಿಂದ ರೈತರಿಗೆ ದಲ್ಲಾಳಿಗಳ ಕಾಟ ಇಲ್ಲದಂತಾಗುತ್ತದೆ. ರೈತ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿ ಕೊಡುತ್ತದೆ. ಇಂತಹ ಕಾಯ್ದೆಯನ್ನು ವಿರೋಧಿಸುತ್ತಿರುವವರು ನಿಜವಾದ ರೈತರಲ್ಲ. ಅವರೆಲ್ಲ ನಕಲಿ ರೈತರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ರೈತರ ಕುರಿತಾದ ದಿನೇಶ್‌ ಅವರ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ ರಾಜ್ಯದ ರೈತ ಸಂಘಟನೆಗಳ ನಾಯಕರು ಹಾಗೂ ರೈತಪರರು ಹಾಸ್ಯ ಕಲಾವಿದನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.

ದಿನೇಶ್‌ ರೈತರ ಕುರಿತು ವ್ಯಂಗ್ಯವಾಡಿದ್ದ ಸಂದರ್ಭದ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ನೆಟ್ಟಿಗ ಫೈಜಲ್‌ ಪೆರಾಜೆ, “ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವವರು ನಕಲಿ ರೈತರು : ದಿನೇಶ್ ಕೋಡಪದವು ದಿನೇಶ್ ಕೋಡಪದವು ಅನ್ನುವ ಕಲಾವಿದರೊಬ್ಬರು ಯಕ್ಷರಂಗದಲ್ಲಿ ರಾಜಕೀಯ ಪಕ್ಷವೊಂದರ ಪ್ರಚಾರ ಮಾಡಿ ‘ರೈತರನ್ನೇ’ ಅವಮಾನಿಸಿದ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.

ರೈತ ಚಳವಳಿಯ ಬಗ್ಗೆ ನಡೆಸುತ್ತಿರುವ ಅಪಪ್ರಚಾರಕ್ಕೆ ಯಕ್ಷಗಾನ ಕಲೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಆ ಮೂಲಕ ಯಕ್ಷಗಾನವನ್ನೂ ಕೆಡಿಸುವ ಹುನ್ನಾರ ನಡೆಯುತ್ತಿದೆ’ ಎಂದು ಕರ್ನಾಟಕ ಪ್ರಾಂತ ಪ್ರದೇಶ ರೈತ ಸಂಘದ ಉಪಾಧ್ಯಕ್ಷ ಯಾದವ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, “ಯಕ್ಷಗಾನದ ಬಗ್ಗೆ ಗೌರವ ಇದೆ. ಆದರೆ, ಜೀವನದ ಅನುಭವ ಇಲ್ಲದವರು ಕಲೆಯ ಮೂಲಕ ಅನ್ನದಾತರನ್ನೇ ಹೀಯಾಳಿಸುವುದು ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತ ಪಡಿಸಿದ್ದರು.

ಇದಾದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿರುವ ದಿನೇಶ್‌, “ಯಾವುದೇ ರಾಜಕೀಯ ಅಥವಾ ಯಾರನ್ನಾದರೂ ನೋಯಿಸುವ ಉದ್ದೇಶದಿಂದ ಯಕ್ಷಗಾನದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಕಲಾವಿದನಾಗಿ ಸಾಂದರ್ಭಿಕವಾಗಿ ನನ್ನ ಸಹ ಕಲಾವಿದನೊಂದಿಗೆ ಸಂಭಾಷಣೆ ನಡೆಸಿದ್ದೇನೆ. ರೈತರನ್ನಾಗಲಿ ಅಥವಾ ರೈತ ಹೋರಾಟವನ್ನಾಗಲಿ ಅಪಹಾಸ್ಯ ಮಾಡುವ ಉದ್ದೇಶ ನನ್ನದಾಗಿರಲಿಲ್ಲ” ಎಂದಿದ್ದಾರೆ. ಮುಂದುವರೆದು ಮಾತನಾಡಿರುವ ಅವರು, “ನನ್ನನ್ನು ಒಳಗೊಂಡಂತೆ ಸುಮಾರು 2 ಸಾವಿರ ಮಂದಿ ಯಕ್ಷಗಾನ ಕಲಾವಿದರು ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಮ್ಮ ಅನ್ನದಾತರು ನನ್ನ ಹೇಳಿಕೆಯಿಂದ ರೈತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...