Homeಮುಖಪುಟಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ನಿಶ್ಚಲವಾಗಿದ್ದ ವ್ಯಕ್ತಿಯ ಮೇಲೆ ಫೋಟೋ ಪತ್ರಕರ್ತನೊಬ್ಬ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

- Advertisement -
- Advertisement -

ಗನ್‌ ಮತ್ತು ಲಾಠಿ ಹಿಡಿದು ಶಸ್ತ್ರಸಜ್ಜಿತರಾಗಿ, ಗಲಭೆ ವಿರೋಧಿ ಧಿರಿಸು ಧರಿಸಿದ್ದ ಪೊಲೀಸರ ಗುಂಪನ್ನು, ಕೈಯ್ಯಲ್ಲಿ ಕೋಲು ಹಿಡಿದುಕೊಂಡು ಅಟ್ಟಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಕ್ರೂರವಾಗಿ ಥಳಿಸಲಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ವ್ಯಕ್ತಿ ನೆಲಕ್ಕೆ ಉರುಳಿ ನಿಶ್ಚಲವಾದ ನಂತರವು ಪೊಲೀಸರು ಗುಂಪಾಗಿ ಬಂದು ವ್ಯಕ್ತಿಗೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಫೋಟೋ ಪತ್ರಕರ್ತನೊಬ್ಬ ವ್ಯಕ್ತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಈ ಭಯಾನಕ ದೃಶ್ಯಗಳು ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದ ರಾಜ್ಯದ ದರ್‍ರಾಂಗ್‌ ಜಿಲ್ಲೆಯ ಧೋಲ್ಪುದಲ್ಲಿ ಗುರುವಾರ ನಡೆದಿದೆ. ಪೊಲೀಸರು ಈ ಪ್ರಕ್ರಿಯೆಗಾಗಿ ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂಎಲ್‌ ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಅವರು, “ಒಬ್ಬ ಏಕಾಂಗಿ ವ್ಯಕ್ತಿ ಕೋಲು ಹಿಡಿದುಕೊಂಡು ಓಡುತ್ತ ಬಂದಾಗ ಎದೆಗೆ ಗುಂಡು ಹಾರಿಸಲು ಯಾವ ಪ್ರೋಟೋಕಾಲ್ ಆದೇಶಿಸುತ್ತದೆ. ಬಹುಶಃ ಸತ್ತು ನೆಲಕ್ಕೆ ಬಿದ್ದಿರುವ ಮನುಷ್ಯನ ದೇಹದ ಮೇಲೆ ರಕ್ತಪಿಪಾಸುವಿನಂತೆ ದ್ವೇಷದಿಂದ ಪದೇ ಪದೇ ಜಿಗಿಯುವ, ಕ್ಯಾಮರಾದೊಂದಿಗಿರುವ ನಾಗರಿಕ ಉಡುಪು ಧರಿಸಿದ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಘಟನೆಯನ್ನು ಖಂಡಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇದು ಯಾವ ನರಕ? ಈ ಹತ್ಯೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಈಗಲೇ ಕ್ರಮ ಕೈಗೊಳ್ಳಿ. ನತದೃಷ್ಟ ವ್ಯಕ್ತಿಯನ್ನು ಬಂಧಿಸಬಹುದಿತ್ತು. ಅವರನ್ನು ಕೊಲ್ಲಲು ಪೊಲೀಸರಿಗೆ ಅಧಿಕಾರವಿಲ್ಲ. ಒಂದು ಸಮಾಜವಾಗಿ ನಮಗೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋಲ್ಪುದಲ್ಲಿ ನಡೆದ ಅತಿಕ್ರಮಣ ವಿರೋಧಿ ಪ್ರಕ್ರಿಯೆಯಲ್ಲಿ ಒಂಬತ್ತು ಪೊಲೀಸರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಕೆಲವು ಮಾಧ್ಯಮಗಳು, “ತಮ್ಮ ಮನೆಗಳನ್ನು ತೆರವುಗೊಳಿಸುತ್ತಿದ್ದ ಪೊಲೀಸರ ವಿರುದ್ದ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ತಾರಕಕ್ಕೇರಿ, ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಸದ್ದಾಂ ಹುಸೇನ್ ಮತ್ತು ಶೇಖ್ ಫರೀದ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿ, ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ವರದಿ ಮಾಡಿವೆ.

ಸೋಮವಾರ ಕೂಡಾ ಅತಿಕ್ರಮಣ ವಿರೋಧಿ ಪ್ರಕ್ರಿಯೆಯ ಕಾರ್ಯಾಚರಣೆಯಲ್ಲಿ ಸುಮಾರು 800 ಕುಟುಂಬಗಳನ್ನು ಹೊರಹಾಕಲಾಗಿದೆ. ಸ್ಥಳೀಯರು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಬಲಪ್ರಯೋಗಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

“ನಮ್ಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಪರಿಸ್ಥಿತಿ ಸಾಮಾನ್ಯವಾಗಿದೆ” ಎಂದು ಇಂದಿನ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

‘‘ಘರ್ಷನೆಯ ಪರಿಸ್ಥಿತಿಯಿಂದಾಗಿ ನಾವು ಹೊರಹಾಕುವಿಕೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ನಾವು ನಂತರ ಮೌಲ್ಯಮಾಪನ ಮಾಡುತ್ತೇವೆ. ಇಲ್ಲಿಂದ ಈಗಲೇ ಹಿಂದಿರುಗುತ್ತಿದ್ದೇವೆ” ಎಂದು ಘರ್ಷಣೆಯ ಸ್ಥಳದಲ್ಲಿದ್ದ ಹಾಜರಿದ್ದ ಸುಶಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದರೆ ಸ್ಥಳೀಯರನ್ನು ಹೊಡೆದುರುಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಪ್ರದೇಶವು ದೊಡ್ಡದಾಗಿದ್ದು, ನಾನು ಇನ್ನೊಂದು ಬದಿಯಲ್ಲಿದ್ದೆ. ಈ ಬಗ್ಗೆ ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಸೋಮವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ನಂತರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “800 ಮನೆಗಳನ್ನು ತೆರವುಗೊಳಿಸುವ ಮೂಲಕ 4500 ಬಿಘಾಗಳನ್ನು ತೆರವುಗೊಳಿಸಿದ್ದಕ್ಕಾಗಿ ದರ್ರಾಂಗ್ ಜಿಲ್ಲಾಡಳಿತ ಮತ್ತು ಅಸ್ಸಾಂ ಪೊಲೀಸರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...