Homeಮುಖಪುಟಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ನಿಶ್ಚಲವಾಗಿದ್ದ ವ್ಯಕ್ತಿಯ ಮೇಲೆ ಫೋಟೋ ಪತ್ರಕರ್ತನೊಬ್ಬ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

- Advertisement -
- Advertisement -

ಗನ್‌ ಮತ್ತು ಲಾಠಿ ಹಿಡಿದು ಶಸ್ತ್ರಸಜ್ಜಿತರಾಗಿ, ಗಲಭೆ ವಿರೋಧಿ ಧಿರಿಸು ಧರಿಸಿದ್ದ ಪೊಲೀಸರ ಗುಂಪನ್ನು, ಕೈಯ್ಯಲ್ಲಿ ಕೋಲು ಹಿಡಿದುಕೊಂಡು ಅಟ್ಟಿಸಿಕೊಂಡು ಬಂದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಕ್ರೂರವಾಗಿ ಥಳಿಸಲಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ವ್ಯಕ್ತಿ ನೆಲಕ್ಕೆ ಉರುಳಿ ನಿಶ್ಚಲವಾದ ನಂತರವು ಪೊಲೀಸರು ಗುಂಪಾಗಿ ಬಂದು ವ್ಯಕ್ತಿಗೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಫೋಟೋ ಪತ್ರಕರ್ತನೊಬ್ಬ ವ್ಯಕ್ತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಈ ಭಯಾನಕ ದೃಶ್ಯಗಳು ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದ ರಾಜ್ಯದ ದರ್‍ರಾಂಗ್‌ ಜಿಲ್ಲೆಯ ಧೋಲ್ಪುದಲ್ಲಿ ಗುರುವಾರ ನಡೆದಿದೆ. ಪೊಲೀಸರು ಈ ಪ್ರಕ್ರಿಯೆಗಾಗಿ ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಪಿಎಂಎಲ್‌ ಪಾಲಿಟ್‌ಬ್ಯೂರೋ ಸದಸ್ಯೆ ಕವಿತಾ ಕೃಷ್ಣನ್ ಅವರು, “ಒಬ್ಬ ಏಕಾಂಗಿ ವ್ಯಕ್ತಿ ಕೋಲು ಹಿಡಿದುಕೊಂಡು ಓಡುತ್ತ ಬಂದಾಗ ಎದೆಗೆ ಗುಂಡು ಹಾರಿಸಲು ಯಾವ ಪ್ರೋಟೋಕಾಲ್ ಆದೇಶಿಸುತ್ತದೆ. ಬಹುಶಃ ಸತ್ತು ನೆಲಕ್ಕೆ ಬಿದ್ದಿರುವ ಮನುಷ್ಯನ ದೇಹದ ಮೇಲೆ ರಕ್ತಪಿಪಾಸುವಿನಂತೆ ದ್ವೇಷದಿಂದ ಪದೇ ಪದೇ ಜಿಗಿಯುವ, ಕ್ಯಾಮರಾದೊಂದಿಗಿರುವ ನಾಗರಿಕ ಉಡುಪು ಧರಿಸಿದ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಘಟನೆಯನ್ನು ಖಂಡಿಸಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇದು ಯಾವ ನರಕ? ಈ ಹತ್ಯೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಈಗಲೇ ಕ್ರಮ ಕೈಗೊಳ್ಳಿ. ನತದೃಷ್ಟ ವ್ಯಕ್ತಿಯನ್ನು ಬಂಧಿಸಬಹುದಿತ್ತು. ಅವರನ್ನು ಕೊಲ್ಲಲು ಪೊಲೀಸರಿಗೆ ಅಧಿಕಾರವಿಲ್ಲ. ಒಂದು ಸಮಾಜವಾಗಿ ನಮಗೆ ಅವಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋಲ್ಪುದಲ್ಲಿ ನಡೆದ ಅತಿಕ್ರಮಣ ವಿರೋಧಿ ಪ್ರಕ್ರಿಯೆಯಲ್ಲಿ ಒಂಬತ್ತು ಪೊಲೀಸರು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಕೆಲವು ಮಾಧ್ಯಮಗಳು, “ತಮ್ಮ ಮನೆಗಳನ್ನು ತೆರವುಗೊಳಿಸುತ್ತಿದ್ದ ಪೊಲೀಸರ ವಿರುದ್ದ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ತಾರಕಕ್ಕೇರಿ, ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಸದ್ದಾಂ ಹುಸೇನ್ ಮತ್ತು ಶೇಖ್ ಫರೀದ್ ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿ, ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ವರದಿ ಮಾಡಿವೆ.

ಸೋಮವಾರ ಕೂಡಾ ಅತಿಕ್ರಮಣ ವಿರೋಧಿ ಪ್ರಕ್ರಿಯೆಯ ಕಾರ್ಯಾಚರಣೆಯಲ್ಲಿ ಸುಮಾರು 800 ಕುಟುಂಬಗಳನ್ನು ಹೊರಹಾಕಲಾಗಿದೆ. ಸ್ಥಳೀಯರು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಬಲಪ್ರಯೋಗಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

“ನಮ್ಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಪರಿಸ್ಥಿತಿ ಸಾಮಾನ್ಯವಾಗಿದೆ” ಎಂದು ಇಂದಿನ ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

‘‘ಘರ್ಷನೆಯ ಪರಿಸ್ಥಿತಿಯಿಂದಾಗಿ ನಾವು ಹೊರಹಾಕುವಿಕೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ನಾವು ನಂತರ ಮೌಲ್ಯಮಾಪನ ಮಾಡುತ್ತೇವೆ. ಇಲ್ಲಿಂದ ಈಗಲೇ ಹಿಂದಿರುಗುತ್ತಿದ್ದೇವೆ” ಎಂದು ಘರ್ಷಣೆಯ ಸ್ಥಳದಲ್ಲಿದ್ದ ಹಾಜರಿದ್ದ ಸುಶಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಆದರೆ ಸ್ಥಳೀಯರನ್ನು ಹೊಡೆದುರುಳಿಸಿದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಪ್ರದೇಶವು ದೊಡ್ಡದಾಗಿದ್ದು, ನಾನು ಇನ್ನೊಂದು ಬದಿಯಲ್ಲಿದ್ದೆ. ಈ ಬಗ್ಗೆ ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಸೋಮವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ನಂತರ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “800 ಮನೆಗಳನ್ನು ತೆರವುಗೊಳಿಸುವ ಮೂಲಕ 4500 ಬಿಘಾಗಳನ್ನು ತೆರವುಗೊಳಿಸಿದ್ದಕ್ಕಾಗಿ ದರ್ರಾಂಗ್ ಜಿಲ್ಲಾಡಳಿತ ಮತ್ತು ಅಸ್ಸಾಂ ಪೊಲೀಸರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...