Homeಮುಖಪುಟಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

- Advertisement -
- Advertisement -

ಅಸ್ಸಾಂನ ದರ್‍ರಾಂಗ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಮೃತಪಟ್ಟ ವ್ಯಕ್ತಿಯ ಮೇಲೆ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ ಫೋಟೊ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಗುರುವಾರ ಸಂಜೆ ತಿಳಿಸಿದ್ದಾರೆ. ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಘಟನೆ ನಡೆದಿದ್ದು, ಅದಕ್ಕಾಗಿ ಪೊಲೀಸರು ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಿನ್ನೆಯ ಘಟನೆಯಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು, ಪೊಲೀಸರನ್ನು ಅಟ್ಟಿಸಿಕೊಂಡು ಬಂದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡು ಬೀಳುತ್ತಿದ್ದಂತೆ ನೆಲಕ್ಕೆ ಉರುಳಿದ ಪ್ರತಿಭಟನಾಕಾರನ ಮೇಲೆ ಪೊಲೀಸರು ಗುಂಪಾಗಿ ತೆರಳಿ ತೀವ್ರವಾಗಿ ಥಳಿಸಿದ್ದರು. ಈ ವೇಳೆ ಅಲ್ಲಿಯೆ ಇದ್ದ ಫೋಟೋ ಜರ್ನಲಿಸ್ಟ್‌‌ ಕೂಡಾ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ ಅಸ್ಸಾಂ ಪೊಲೀಸ್‌‌

 

ಅಸ್ಸಾಂ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪತ್ರಕರ್ತ ಬಿಜೋಯ್ ಬೋನಿಯಾ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡ ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಫೋಟೋ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

“ಎಲ್ಲೆಲ್ಲಿ SOP ಗಳು [ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು] ಮತ್ತು ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ವಿಡಿಯೊ ನೋಡಿದ ನಂತರ ನಾನು ಹೇಳಬಹುದಾದ ಏಕೈಕ ವಿಷಯವೆಂದರೆ, ಪತ್ರಕರ್ತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಪತ್ರಕರ್ತನ ಬಂಧನವಾಗಿದೆ ಎಂದು ಅಸ್ಸಾಂ ಡಿಜಿಪಿ ಟ್ವೀಟ್ ಮಾಡಿದ್ದಾರೆ. “ಪ್ರಸ್ತುತ ಸಿಪಜ್ಹಾರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ವೈರಲ್ ವಿಡಿಯೋದಲ್ಲಿ ಗಾಯಗೊಂಡ ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಕ್ಯಾಮರಾಮ್ಯಾನ್ ಅನ್ನು ಬಂಧಿಸಲಾಗಿದೆ. ಸಿಎಂ ಹಿಮಂತ ಬಿಸ್ವಾ ಅವರ ಆದೇಶದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಕೇಳಿದ್ದೇನೆ. ಕ್ಯಾಮರಾಮನ್ ಬಿಜೋಯ್ ಬೋನಿಯಾ ಅಸ್ಸಾಂ ಸಿಐಡಿಯ ವಶದಲ್ಲಿದ್ದಾನೆ” ಎಂದು ಹೇಳಿದ್ದಾರೆ.

ಹಲ್ಲೆ ನಡೆಸಿರುವ ವ್ಯಕ್ತಿ ಸರ್ಕಾರಿ ಛಾಯಾಗ್ರಾಹಕ ಎಂದು ಎನ್‌ಡಿಟಿವಿ ದೃಢಪಡಿಸಿದೆ. ಆತ ಸ್ಥಳದಲ್ಲಿದ್ದು, ಘರ್ಷನೆಯನ್ನು ಚಿತ್ರೀಕರಿಸುತ್ತಿದ್ದ ಎಂದು ಅದು ಹೇಳಿದೆ. ಆತನನ್ನು ಗುರುತಿಸಿರುವ ಇತರ ಕೆಲವು ಮಾಧ್ಯಮಗಳು, ಆತ ದರ್ರಾಂಗ್ ಜಿಲ್ಲಾಡಳಿತದ ಛಾಯಾಗ್ರಾಹಕ ಎಂದು ಹೇಳಿವೆ.

ಗುವಾಹಟಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಹತ್ಯೆ ಮತ್ತು ಘಟನೆಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shame on these police and Media persons who are killing the poor innocent civilians. This is nothing but hitlerism and goonda Raj. This must stop and justice should be given to the poor citizens of Assam.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...