Homeಮುಖಪುಟಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

- Advertisement -
- Advertisement -

ಅಸ್ಸಾಂನ ದರ್‍ರಾಂಗ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಮೃತಪಟ್ಟ ವ್ಯಕ್ತಿಯ ಮೇಲೆ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ ಫೋಟೊ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಗುರುವಾರ ಸಂಜೆ ತಿಳಿಸಿದ್ದಾರೆ. ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಘಟನೆ ನಡೆದಿದ್ದು, ಅದಕ್ಕಾಗಿ ಪೊಲೀಸರು ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಿನ್ನೆಯ ಘಟನೆಯಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು, ಪೊಲೀಸರನ್ನು ಅಟ್ಟಿಸಿಕೊಂಡು ಬಂದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡು ಬೀಳುತ್ತಿದ್ದಂತೆ ನೆಲಕ್ಕೆ ಉರುಳಿದ ಪ್ರತಿಭಟನಾಕಾರನ ಮೇಲೆ ಪೊಲೀಸರು ಗುಂಪಾಗಿ ತೆರಳಿ ತೀವ್ರವಾಗಿ ಥಳಿಸಿದ್ದರು. ಈ ವೇಳೆ ಅಲ್ಲಿಯೆ ಇದ್ದ ಫೋಟೋ ಜರ್ನಲಿಸ್ಟ್‌‌ ಕೂಡಾ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ ಅಸ್ಸಾಂ ಪೊಲೀಸ್‌‌

 

ಅಸ್ಸಾಂ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪತ್ರಕರ್ತ ಬಿಜೋಯ್ ಬೋನಿಯಾ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡ ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಫೋಟೋ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

“ಎಲ್ಲೆಲ್ಲಿ SOP ಗಳು [ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು] ಮತ್ತು ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ವಿಡಿಯೊ ನೋಡಿದ ನಂತರ ನಾನು ಹೇಳಬಹುದಾದ ಏಕೈಕ ವಿಷಯವೆಂದರೆ, ಪತ್ರಕರ್ತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಪತ್ರಕರ್ತನ ಬಂಧನವಾಗಿದೆ ಎಂದು ಅಸ್ಸಾಂ ಡಿಜಿಪಿ ಟ್ವೀಟ್ ಮಾಡಿದ್ದಾರೆ. “ಪ್ರಸ್ತುತ ಸಿಪಜ್ಹಾರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ವೈರಲ್ ವಿಡಿಯೋದಲ್ಲಿ ಗಾಯಗೊಂಡ ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಕ್ಯಾಮರಾಮ್ಯಾನ್ ಅನ್ನು ಬಂಧಿಸಲಾಗಿದೆ. ಸಿಎಂ ಹಿಮಂತ ಬಿಸ್ವಾ ಅವರ ಆದೇಶದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಕೇಳಿದ್ದೇನೆ. ಕ್ಯಾಮರಾಮನ್ ಬಿಜೋಯ್ ಬೋನಿಯಾ ಅಸ್ಸಾಂ ಸಿಐಡಿಯ ವಶದಲ್ಲಿದ್ದಾನೆ” ಎಂದು ಹೇಳಿದ್ದಾರೆ.

ಹಲ್ಲೆ ನಡೆಸಿರುವ ವ್ಯಕ್ತಿ ಸರ್ಕಾರಿ ಛಾಯಾಗ್ರಾಹಕ ಎಂದು ಎನ್‌ಡಿಟಿವಿ ದೃಢಪಡಿಸಿದೆ. ಆತ ಸ್ಥಳದಲ್ಲಿದ್ದು, ಘರ್ಷನೆಯನ್ನು ಚಿತ್ರೀಕರಿಸುತ್ತಿದ್ದ ಎಂದು ಅದು ಹೇಳಿದೆ. ಆತನನ್ನು ಗುರುತಿಸಿರುವ ಇತರ ಕೆಲವು ಮಾಧ್ಯಮಗಳು, ಆತ ದರ್ರಾಂಗ್ ಜಿಲ್ಲಾಡಳಿತದ ಛಾಯಾಗ್ರಾಹಕ ಎಂದು ಹೇಳಿವೆ.

ಗುವಾಹಟಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಹತ್ಯೆ ಮತ್ತು ಘಟನೆಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shame on these police and Media persons who are killing the poor innocent civilians. This is nothing but hitlerism and goonda Raj. This must stop and justice should be given to the poor citizens of Assam.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...