HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...