HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...