Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...