Homeಕರೋನಾ ತಲ್ಲಣಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

ಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

- Advertisement -
- Advertisement -

ಹಿಮಾಲಯದ ಹಳ್ಳಿಗಳ ಜನರಿಗೆ ಲಸಿಕೆ ನೀಡುವುದು ಒಂದು ಸಾಹಸದ ಕೆಲಸವಾಗಿ ಮಾರ್ಪಟ್ಟಿದೆ. ಹಿಮಾಚಲ ಪ್ರದೇಶದ ಮಲಾನಾ ಗ್ರಾಮಕ್ಕೆ ಭೇಟಿ ನೀಡಿ, ಲಸಿಕೆ ನೀಡಲು ಹೊರಟಿದ್ದ ಆರೋಗ್ಯ ಕಾರ್ಯಕರ್ತರ ತಂಡ ಸುಮಾರು ಮೂರು ಗಂಟೆಗಳ ಕಾಲ ಬೆಟ್ಟ ಗುಡ್ಡಗಳನ್ನು ಹತ್ತಿ ಇಳಿದು ಸಾಹಸ ಮಾಡಿದೆ.

ಮಲಾನಾ ಗ್ರಾಮಕ್ಕೆ ಇದ್ದ ರಸ್ತೆ ಭೂಕುಸಿತದಿಂದ ನಾಶವಾಗಿರುವ ಕಾರಣ ಇಂತಹ ಸಾಹಸಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿತ್ತು. ಮೂರು ಗಂಟೆಗಳ ಸಾಹಸದ ಬಳಿಕ ಹಳ್ಳಿಗೆ ತೆರಳಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಡಿದಾದ ಭೂಪ್ರದೇಶದ ಹೊರತಾಗಿಯೂ, ಹಿಮಾಚಲ ಪ್ರದೇಶದ ಮಲಾನಾ ಗ್ರಾಮವೂ, ಎಲ್ಲಾ ವಯಸ್ಕರು ಒಂದು ಡೋಸ್ ಲಸಿಕೆ ಪಡೆದ ಭಾರತದ ಮೊದಲ ಗ್ರಾಮವಾಗಿದೆ.

ಹಿಮಾಚಲ ಪ್ರದೇಶದ ಕಡಿದಾದ ಭೌಗೋಳಿಕತೆಯಿಂದಾಗ ದೂರವಿರುವ ಹಳ್ಳಿಗಳನ್ನು ತಲುಪಲು ಗಂಟೆಗಟ್ಟಲೆ ಅಥವಾ ಇಡೀ ದಿನ ನಡೆದು ಹೋಗುವುದು ಆರೋಗ್ಯ ಕಾರ್ಯಕರ್ತರಿಗೆ ಒಂದು ಸವಾಲಾಗಿದೆ. ಇದರ ಜೊತೆಗೆ ಧಾರ್ಮಿಕ ನಂಬಿಕೆಗಳು ಕೂಡ ಲಸಿಕೆ ನೀಡುವಲ್ಲಿ ಸವಾಲಾಗಿದೆ ಎನ್ನಲಾಗಿದೆ.

 ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಸೆಪ್ಟೆಂಬರ್ 14 ರಂದು, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅತುಲ್ ಗುಪ್ತಾ ನೇತೃತ್ವದ ಐವರ ತಂಡವು ಎರಡನೇ ಲಸಿಕೆ ಡೋಸ್‌ಗಳನ್ನು ನೀಡಲು ಮಲಾನಾಗೆ ಹೊರಟಿತ್ತು. ಭೂಕುಸಿತದಿಂದ ರಸ್ತೆ ಹಾಳಾಗದ್ದ ಕಾರಣ ವಾಹನಗಳನ್ನು ಬಿಟ್ಟು, ಲಸಿಕೆ ಪೆಟ್ಟಿಗೆಗಳನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಬೆಟ್ಟ ಗುಡ್ಡಗಳನ್ನು ಹತ್ತಿ, ಇಳಿದು, ನದಿಯನ್ನು ದಾಟಿ ಹಳ್ಳಿಗೆ ಸೇರಿದೆ.

ಇತ್ತ, ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.


ಇದನ್ನೂ ಓದಿ: ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...