Homeಮುಖಪುಟಭಾವುಕ ಅನುಭವ ನೀಡುವ 'ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ' ಸಿನಿಮಾ: ಪ್ರೀತಿ ನಾಗರಾಜ್

ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ.

- Advertisement -
- Advertisement -

ಇದು ಸಿನಿಮಾವೋ ಅಥವಾ ಹೀಗೇ ಕಣ್ಣ ಮುಂದೆ ದೃಶ್ಯವಾದ ಸ್ನೇಹಿತನೇ ಕೂತು ಹೇಳುತ್ತಿರುವ ತಮಾಷೆಯ ಕಥೆಯೋ ಎಂದು ಗೊತ್ತಾಗುವ ಹೊತ್ತಿಗೆ ನೀವು ಸಿನಿಮಾದಲ್ಲಿ ಪೂರ್ತಿ ಇಳಿದುಹೋಗಿ ಇಂಟರ್ ವೆಲ್ ಬಂದಿರುತ್ತದೆ. ಆಗ ಸಿನಿಮಾ ಹಾಲ್ ನಲ್ಲಿ ಬರುವ ಮಂದ ಬೆಳಕೂ ಕಣ್ಣಿಗೆ ಕೋರೈಸಿದಂತೆ ಅನ್ನಿಸಿ ಸುತ್ತ ಮುತ್ತ ಇರುವ ಪರಿಚಿತರ ಮುಖ ನೋಡಲು ಪ್ರಯತ್ನ ಮಾಡಿದರೆ ಕೆಲವರ ಕಣ್ಣಿನಲ್ಲಾದರೂ ನೀರು ಕಂಡು ನಿಮ್ಮ ಕಣ್ಣಲ್ಲೂ ನೀರು ಉಕ್ಕುವ ಸಾಧ್ಯತೆ ಬಹಳಷ್ಟಿದೆ. ನೋಡಲು ಸುಲಲಿತವೆನ್ನಿಸಿದರೂ ಆಳವಾದ, ಸಂಕೀರ್ಣ ಅಭಿನಯ ಸಂಚಾರಿ ವಿಜಯ್ ಅವರದ್ದು.

ಡೂಪ್ಲಿಕೇಟ್ ಬೀಗ ಮಾಡುವ ಹುಡುಗನೊಬ್ಬನಿಗೆ ಪೋಲಿಸರ ಸಹವಾಸವಾಗಿ ಅವರ ಮೆಗಾ ಪ್ಲಾನಿನ ಭಾಗವಾಗಿ ಕಳ್ಳತನಕ್ಕೆ ಇಳಿದು ನಂತರ ತನ್ನದೇ ಬದುಕಿನ ಅನಿವಾರ್ಯತೆಗಳಿಗೆ ತೆರೆದುಕೊಂಡು ಕೆಲವು ತಪ್ಪು ಅನ್ನಿಸುವಂಥ ನಿರ್ಧಾರವನ್ನು ತೆಗೆದುಕೊಳ್ಳುವ ಕಥೆ ಇದು. ಎಲ್ಲೂ ನೈತಿಕತೆಯ ಅನವಶ್ಯಕ ಪಾಠವಿಲ್ಲ. ಎಲ್ಲರೂ ಮನುಷ್ಯರೇ, ತಪ್ಪು-ಒಪ್ಪುಗಳನ್ನು ಒಳಗೊಂಡವರೇ ಎನ್ನುವುದು ಧ್ಯೇಯ ವಾಕ್ಯ ಅಂತ ನನಗೆ ಅನ್ನಿಸಿತು.

ಮೊದಮೊದಲಿಗೆ ತುಟಿ ಬಿರಿಸುವಷ್ಟೇ ತಮಾಷೆ ಅನ್ನಿಸಿದರೂ ನಂತರ ಕ್ಯಾರೆಕ್ಟರುಗಳು ಮನಸ್ಸಿನಲ್ಲಿ ಇಳಿದು ನಗುವೇ ಅಭಿವ್ಯಕ್ತಿಯ ಭಾಗವಾಗುತ್ತದೆ. ಕಥೆಯೇ ಸ್ವತಂತ್ರವಾಗಿ ನಿಲ್ಲುವುದು ಪಾತ್ರಗಳ ಮೂಲಕ ಮಾತ್ರ. ಹಾಗಾಗಿ ಸಿನಿಮಾದಲ್ಲಿ ಡ್ರೋನ್ ಶಾಟ್ ಗಳು ಹೆಚ್ಚು ಬಳಕೆಯಾಗಿದ್ದು ಬಿಟ್ಟರೆ ಹೆಚ್ಚು ಟೈಟ್ ಫ್ರೇಮುಗಳ ಬಳಕೆ ಇದೆ. ರಂಗಭೂಮಿಯ ಹಿನ್ನೆಲೆ ಇರುವ ಬಹಳ ಜನ ಇದರಲ್ಲಿ ಪಾತ್ರ ಮಾಡಿರುವುದರಿಂದ ಚಿತ್ರ ಎಲ್ಲೂ ಅರೆಬರೆ ಅನ್ನಿಸುವುದಿಲ್ಲ. ಇದಕ್ಕೆ ಉತ್ತಮ ನಟರ ಅಭಿನಯ ಇರುವುದೂ ಕೂಡ ಒಂದು ಮುಖ್ಯ ಕಾರಣ ಇರಬಹುದು. ಎಲ್ಲಿಯೂ ಸಿನಿಮಾ ಕನಸು ಅನ್ನಿಸದೆ ನಮ್ಮ ಪಕ್ಕವೇ ನಡೆದುಹೋಗುತ್ತದೆ.

ರಂಗಾಯಣ ರಘು ಅವರ ಪಾತ್ರ ಒಂದು ಸರ್ಪ್ರೈಸ್ ಅಂಶ. ಅವರು ತೆರೆಯ ಮೇಲೆ ಕಂಡಾಗಿನಿಂದ ಇನ್ನೇನು ನಗಿಸುತ್ತಾರೆ ಈಗಲೇ ಒಂದು ಜೋಕು ಬೀಳಬಹುದು ಅಂತ ನಿರೀಕ್ಷೆ ಇಟ್ಟುಕೊಂಡರೆ ಅಚ್ಚರಿ ಆಗೋದು ಖಂಡಿತ. ಇನ್ಸ್ಪೆಕ್ಟರ್ ಪಾತ್ರ ಮಾಡಿರುವ ಅಚ್ಯುತ್ ಕುಮಾರ್ ಅವರಿಂದ ಹಿಡಿದು ದೊಡ್ಡಪ್ಪ, ಪೀಸಿ ಮೋಹನ, ವಿನಯ್ ಮಲ್ಯ (ಸ್ವತಃ ನಿರ್ದೇಶಕರೇ ಈ ರೋಲ್ ಮಾಡಿದ್ದಾರೆ) ಮಹಿಳಾ ಇನ್ಸ್ಪೆಕ್ಟರು, ಕಾನ್ಸ್ಟೇಬಲ್ಲು, ಸಣ್ಣ ಪಾತ್ರಗಳಾದ ರೈಟರು, ಅರ್ಚಕರು, ಅವರ ಮಗ, ಶಹಜಹಾನನ (ಸಂಚಾರಿ ವಿಜಯ್) ತಮ್ಮ, ಜಡ್ಜ್, ಹೀಗೆ ಹತ್ತು ಹಲವಾರು ಜನ ಹೀಗೆ ಬಂದು ಹಾಗೆ ಹೋದರೂ ಮನಸ್ಸಿನಲ್ಲಿ ನಿಲ್ಲುತ್ತಾರೆ. ಹಾಡುಗಳು ಯಾವುದೇ ಸ್ವತಂತ್ರ ನೆಲೆಯ ಮೇಲೆ ನಿಲ್ಲದೆ ಒಂದು ತೆಳುಭಾವವೊಂದಿಗೆ ಕಥೆಯೊಂದಿಗೆ ಬೆರೆತು ಹೋಗುತ್ತವೆ. ಶಹಜಹಾನ್ ಮತ್ತು ಲಾಯರ್ ನಾಯಕಿಯ ಪ್ರೇಮ ಅವಸರದಲ್ಲಿ ಕೊನೆಗಾಣುತ್ತದೆ ಎನ್ನಿಸಿದರೂ ಆ ಕಥೆ ಈ ಕಥೆಯ ಒಳಗೆ ಹೊಂದದೆ ಸಿನಿಮಾ ದಿಕ್ಕಾಪಾಲಾಗಿ ಹೋಗಬಹುದು ಎನ್ನುವ ಕಾರಣಕ್ಕೆ ಅಂತ್ಯ ’ಓಪನ್’ ಉಳಿದಿದೆ ಎನ್ನಿಸುತ್ತದೆ. ಎಲ್ಲಿಯೂ ಐಟಂ ಸಾಂಗುಗಳು, ದೇಹ ಪ್ರದರ್ಶನ ಅಥವಾ ’ಆಡಿಯೆನ್ಸ್ ಕೇಳ್ತರೆ’ ಎಂದು ಸಮರ್ಥಿಸಿಕೊಳ್ಳಬೇಕಾದ ಕೊಳಕು ಮಾರುಕಟ್ಟೆ ಸರಕುಗಳಿಲ್ಲದಿದ್ದಾಗಲೂ (ಅಥವಾ ಇಲ್ಲ ಅಂತಲೇ) ಸಿನಿಮಾ ಬೆಳಗುತ್ತದೆ.

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ. ನಿರ್ದೇಶಕ ಅರವಿಂದ ಕುಪ್ಲೀಕರ್, ಸಿನಿಮಾ ಛಾಯಾಗ್ರಾಹಕ ಅದ್ವೈತ ಗುರುಮೂರ್ತಿ, ಚಟುವಟಿಕೆಯ ಸಂಕಲನ ಮಾಡಿರುವ ಸುರೇಶ್ ಆರ್ಮುಗಂ, ವಾಸು ದೀಕ್ಷಿತ್ ಅವರ ಸಂಗೀತ ಇವೆಲ್ಲವೂ ಸಿನಿಮಾವನ್ನು ಒಂದು ಚಂದದ ಅನುಭವವನ್ನಾಗಿಸಿವೆ.

ಇದರಲ್ಲಿ ಹೀಗೆ ಬೇಸಗೆಯ ದಿನದಲ್ಲಿ ಸಿಗುವ ಹದ ಸಿಹಿ ಹದ ತಂಪು ಎಳನೀರಿನ ಹಾಗೆ ಸೊಗಡಿನಿಂದ ನಟಿಸಿರುವ ಸಂಚಾರಿ ವಿಜಯ್ ನಮ್ಮ ನಡುವೆ ಇಲ್ಲ ಅನ್ನುವುದು ಸಿನಿಮಾದ ಉದ್ದಕ್ಕೂ ಒಂದು ಬಗೆಯಲ್ಲಿ ಅಂಗಾಲಿಗೆ ಒತ್ತಿದ ಮುಳ್ಳಿನ ಹಾಗೆ ಹೆಜ್ಜೆ ಇಟ್ಟಾಗಲೆಲ್ಲಾ ನೆನಪಾಗುವ ಒಂದು ತೀವ್ರ ನೋವು. ಎಂಥಾ ನಟ, ಎಂಥಾ ಭವಿಷ್ಯದ ಕನಸು ಕಾಣುತ್ತಿದ್ದ ಪ್ರತಿಭಾವಂತ… ಹೀಗೆ ಹೋಗಿಬಿಟ್ಟರಲ್ಲಾ ಎನ್ನುವುದು ಚಿತ್ರರಂಗಕ್ಕೆ ನಿಜಕ್ಕೂ ತುಂಬಲಾಗದ ನಷ್ಟವೇ.

ನನ್ನ ಮಟ್ಟಿಗೆ ಈ ಸಿನಿಮಾ ಒಂದು ಭಾವುಕ ಅನುಭವ. ಈ ಸಿನಿಮಾದ ನಿರ್ದೇಶಕ ಅರವಿಂದ ನನ್ನ ಎಳೆಯ ಸ್ನೇಹಿತ. ಬೆಂಗಳೂರಿನ ರಂಗಭೂಮಿಯ ದಿನಗಳಲ್ಲಿ ಬಿ ಜಯಶ್ರೀ ಅವರ ಸ್ಪಂದನ ತಂಡಕ್ಕೆ ನಾನು ಸೇರಲು ಹೋದಾಗ ಅರವಿಂದ ಚಿಕ್ಕವನಾದರೂ ಅತ್ಯಂತ ಜವಾಬ್ದಾರಿ ಹೊಂದಿದವನೂ, ಜೊತೆಗೆ ಮಹಾ ಕೀಟಲೆ ಸ್ವಭಾವದ ಹುಡುಗನಾಗಿದ್ದ. ರಂಗಭೂಮಿಯಲ್ಲಿ ತೀವ್ರ ತೊಡಗುವಿಕೆ, ಅಂದಿನ ಎಳೆಯರಲ್ಲಿ ಆಗಲೇ ಮರೆಯಾಗುತ್ತಿದ್ದ ರಂಗಭೂಮಿಯ ಆಕರ್ಷಣೆ ಟೀವಿ ಸಿನಿಮಾದ ಕಡೆ ಸೆಳೆಯುತ್ತಿದ್ದಾಗಲೂ ರಂಗವನ್ನು ಬಿಟ್ಟು ಕದಲದೆ ಧ್ಯಾನಸ್ಥ ರೀತಿಯಲ್ಲಿ ತೊಡಗಿಕೊಂಡು ನಂತರ ತನ್ನ ದಾರಿಯನ್ನು ಟೀವಿಯಲ್ಲಿ, ನಂತರ ಸಿನಿಮಾ ಅಭ್ಯಾಸದಲ್ಲಿ ನಂತರ ಸಿನಿಮಾದಲ್ಲಿ ಶೋಧಿಸಿದವ. ಇಂಥಾ ಅರವಿಂದ ಎಲ್ಲಿ ಹೆಜ್ಜೆ ಇಟ್ಟರೂ ನನ್ನಂಥ ಹಲವರಿಗೆ ಅದು ಸಂಭ್ರಮ. ಈ ವಿಷಯದಲ್ಲಿ ನಾನು ಪಕ್ಷಪಾತಿ.

ಈ ಚಿತ್ರ ನನಗಂತೂ ಹೊಸ ಭರವಸೆಯ ನಿರ್ದೇಶಕರನ್ನು, ತಂಡವನ್ನು ಕೊಟ್ಟಿದೆ ಎನ್ನಿಸುತ್ತದೆ. ಎಲ್ಲರಿಗೂ ಶುಭವಾಗಲಿ. ನಿಮ್ಮ ನೋವಿನ ನಡುವೆಯೂ ನಮ್ಮನ್ನು ನಗಿಸಿದ್ದೀರಿ. ನಿಮ್ಮ ಮುಂದಿನ ಹೆಜ್ಜೆ ಸುಗಮವಾಗಿ ಸಾಗಲಿ. ಕನ್ನಡ ಪ್ರೇಕ್ಷಕರಿಗೆ ಉತ್ತಮ ಚಿತ್ರಗಳನ್ನು ನೀವು ಕೊಡುವಂತಾಗಲಿ. ಜನ ಮತ್ತೆ ಬೆಳ್ಳಿ ತೆರೆಯತ್ತ ಬರುವಂತಾಗಲಿ.

***

PS: ಮನಸ್ಸಿಗೆ ಕಚುಗುಳಿ ಕೊಟ್ಟ ಇನ್ನೊಂದು ಅಂಶ. ಶಹಜಹಾನನ ಲೂನಾ. ಬೆನ್ನು ಬಗ್ಗಿಸಿ ಭರ್ರ್ರ್ರ್ರ್ ಎಂದು ಲಾರಿ ಹೋದ ಹಾಗೆ ಹೋಗುವ ಇಂದಿನ ಬೈಕುಗಳಿಗೂ ಇರದ ಚಾರ್ಮ್ ಅಂದಿನ ದಿನದ ಲೂನಾಕ್ಕೆ ಇತ್ತು. ಓದುವ ಹುಡುಗರಿಗೆ ಲೂನಾ ಸಿಕ್ಕರೆ ಟ್ಯೂಷನ್‌ಗೆ ಹೋಗುತ್ತಾರೆಂತಲೂ, ಓದದ ಹುಡುಗರಿಗೆ ಈ ಗಾಡಿ ಸಿಕ್ಕರೆ ಹುಡುಗಿಯರ ಹಿಂದೆ ತಿರುಗುತ್ತಾರೆಂತಲೂ ಅರ್ಥ ಆಗುತ್ತಿತ್ತು. ಇನ್ನು ಹುಡುಗಿಯರು ಲೂನಾ ಹಿಡಿದರೆ ಏನೆಂದು ಅರ್ಥ ಎನ್ನುವುದನ್ನ ಅಂದಿನ ಹುಡುಗರು ಹೇಳ್ಬೇಕು.

ಸಿನಿಮಾಕ್ಕೆ ಬಹಳ ಉತ್ತಮ ಸಬ್ ಟೈಟಲಿಂಗ್ ಆಗಿದೆ. ಇದು ಒಂದು ಸಿನಿಮಾ ಕರ್ನಾಟಕದ ಗಡಿ ದಾಟಿ ಹೋಗಲು ಎಷ್ಟು ಮುಖ್ಯ ಎನ್ನುವುದನ್ನು ನಿರ್ದೇಶಕರು ನಿರ್ಮಾಪಕರು ಅರಿತುಕೊಂಡರೆ ಉತ್ತಮ ಕನ್ನಡ ಸಿನಿಮಾಗಳು ರಾಜ್ಯದಿಂದ ಹೊರಗೆ ಹೋಗಿ ವಿಜೃಂಭಿಸಬಲ್ಲವು.

  • ಪ್ರೀತಿ ನಾಗರಾಜ್

(ಬರಹಗಾರರಾದ ಪ್ರೀತಿ ನಾಗರಾಜ್‌ರವರು ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಹಾಗೂ ಸಿಎನ್‌ಬಿಸಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿರುವ ಇವರಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ.)


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...