Homeಮುಖಪುಟಭಾವುಕ ಅನುಭವ ನೀಡುವ 'ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ' ಸಿನಿಮಾ: ಪ್ರೀತಿ ನಾಗರಾಜ್

ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ.

- Advertisement -
- Advertisement -

ಇದು ಸಿನಿಮಾವೋ ಅಥವಾ ಹೀಗೇ ಕಣ್ಣ ಮುಂದೆ ದೃಶ್ಯವಾದ ಸ್ನೇಹಿತನೇ ಕೂತು ಹೇಳುತ್ತಿರುವ ತಮಾಷೆಯ ಕಥೆಯೋ ಎಂದು ಗೊತ್ತಾಗುವ ಹೊತ್ತಿಗೆ ನೀವು ಸಿನಿಮಾದಲ್ಲಿ ಪೂರ್ತಿ ಇಳಿದುಹೋಗಿ ಇಂಟರ್ ವೆಲ್ ಬಂದಿರುತ್ತದೆ. ಆಗ ಸಿನಿಮಾ ಹಾಲ್ ನಲ್ಲಿ ಬರುವ ಮಂದ ಬೆಳಕೂ ಕಣ್ಣಿಗೆ ಕೋರೈಸಿದಂತೆ ಅನ್ನಿಸಿ ಸುತ್ತ ಮುತ್ತ ಇರುವ ಪರಿಚಿತರ ಮುಖ ನೋಡಲು ಪ್ರಯತ್ನ ಮಾಡಿದರೆ ಕೆಲವರ ಕಣ್ಣಿನಲ್ಲಾದರೂ ನೀರು ಕಂಡು ನಿಮ್ಮ ಕಣ್ಣಲ್ಲೂ ನೀರು ಉಕ್ಕುವ ಸಾಧ್ಯತೆ ಬಹಳಷ್ಟಿದೆ. ನೋಡಲು ಸುಲಲಿತವೆನ್ನಿಸಿದರೂ ಆಳವಾದ, ಸಂಕೀರ್ಣ ಅಭಿನಯ ಸಂಚಾರಿ ವಿಜಯ್ ಅವರದ್ದು.

ಡೂಪ್ಲಿಕೇಟ್ ಬೀಗ ಮಾಡುವ ಹುಡುಗನೊಬ್ಬನಿಗೆ ಪೋಲಿಸರ ಸಹವಾಸವಾಗಿ ಅವರ ಮೆಗಾ ಪ್ಲಾನಿನ ಭಾಗವಾಗಿ ಕಳ್ಳತನಕ್ಕೆ ಇಳಿದು ನಂತರ ತನ್ನದೇ ಬದುಕಿನ ಅನಿವಾರ್ಯತೆಗಳಿಗೆ ತೆರೆದುಕೊಂಡು ಕೆಲವು ತಪ್ಪು ಅನ್ನಿಸುವಂಥ ನಿರ್ಧಾರವನ್ನು ತೆಗೆದುಕೊಳ್ಳುವ ಕಥೆ ಇದು. ಎಲ್ಲೂ ನೈತಿಕತೆಯ ಅನವಶ್ಯಕ ಪಾಠವಿಲ್ಲ. ಎಲ್ಲರೂ ಮನುಷ್ಯರೇ, ತಪ್ಪು-ಒಪ್ಪುಗಳನ್ನು ಒಳಗೊಂಡವರೇ ಎನ್ನುವುದು ಧ್ಯೇಯ ವಾಕ್ಯ ಅಂತ ನನಗೆ ಅನ್ನಿಸಿತು.

ಮೊದಮೊದಲಿಗೆ ತುಟಿ ಬಿರಿಸುವಷ್ಟೇ ತಮಾಷೆ ಅನ್ನಿಸಿದರೂ ನಂತರ ಕ್ಯಾರೆಕ್ಟರುಗಳು ಮನಸ್ಸಿನಲ್ಲಿ ಇಳಿದು ನಗುವೇ ಅಭಿವ್ಯಕ್ತಿಯ ಭಾಗವಾಗುತ್ತದೆ. ಕಥೆಯೇ ಸ್ವತಂತ್ರವಾಗಿ ನಿಲ್ಲುವುದು ಪಾತ್ರಗಳ ಮೂಲಕ ಮಾತ್ರ. ಹಾಗಾಗಿ ಸಿನಿಮಾದಲ್ಲಿ ಡ್ರೋನ್ ಶಾಟ್ ಗಳು ಹೆಚ್ಚು ಬಳಕೆಯಾಗಿದ್ದು ಬಿಟ್ಟರೆ ಹೆಚ್ಚು ಟೈಟ್ ಫ್ರೇಮುಗಳ ಬಳಕೆ ಇದೆ. ರಂಗಭೂಮಿಯ ಹಿನ್ನೆಲೆ ಇರುವ ಬಹಳ ಜನ ಇದರಲ್ಲಿ ಪಾತ್ರ ಮಾಡಿರುವುದರಿಂದ ಚಿತ್ರ ಎಲ್ಲೂ ಅರೆಬರೆ ಅನ್ನಿಸುವುದಿಲ್ಲ. ಇದಕ್ಕೆ ಉತ್ತಮ ನಟರ ಅಭಿನಯ ಇರುವುದೂ ಕೂಡ ಒಂದು ಮುಖ್ಯ ಕಾರಣ ಇರಬಹುದು. ಎಲ್ಲಿಯೂ ಸಿನಿಮಾ ಕನಸು ಅನ್ನಿಸದೆ ನಮ್ಮ ಪಕ್ಕವೇ ನಡೆದುಹೋಗುತ್ತದೆ.

ರಂಗಾಯಣ ರಘು ಅವರ ಪಾತ್ರ ಒಂದು ಸರ್ಪ್ರೈಸ್ ಅಂಶ. ಅವರು ತೆರೆಯ ಮೇಲೆ ಕಂಡಾಗಿನಿಂದ ಇನ್ನೇನು ನಗಿಸುತ್ತಾರೆ ಈಗಲೇ ಒಂದು ಜೋಕು ಬೀಳಬಹುದು ಅಂತ ನಿರೀಕ್ಷೆ ಇಟ್ಟುಕೊಂಡರೆ ಅಚ್ಚರಿ ಆಗೋದು ಖಂಡಿತ. ಇನ್ಸ್ಪೆಕ್ಟರ್ ಪಾತ್ರ ಮಾಡಿರುವ ಅಚ್ಯುತ್ ಕುಮಾರ್ ಅವರಿಂದ ಹಿಡಿದು ದೊಡ್ಡಪ್ಪ, ಪೀಸಿ ಮೋಹನ, ವಿನಯ್ ಮಲ್ಯ (ಸ್ವತಃ ನಿರ್ದೇಶಕರೇ ಈ ರೋಲ್ ಮಾಡಿದ್ದಾರೆ) ಮಹಿಳಾ ಇನ್ಸ್ಪೆಕ್ಟರು, ಕಾನ್ಸ್ಟೇಬಲ್ಲು, ಸಣ್ಣ ಪಾತ್ರಗಳಾದ ರೈಟರು, ಅರ್ಚಕರು, ಅವರ ಮಗ, ಶಹಜಹಾನನ (ಸಂಚಾರಿ ವಿಜಯ್) ತಮ್ಮ, ಜಡ್ಜ್, ಹೀಗೆ ಹತ್ತು ಹಲವಾರು ಜನ ಹೀಗೆ ಬಂದು ಹಾಗೆ ಹೋದರೂ ಮನಸ್ಸಿನಲ್ಲಿ ನಿಲ್ಲುತ್ತಾರೆ. ಹಾಡುಗಳು ಯಾವುದೇ ಸ್ವತಂತ್ರ ನೆಲೆಯ ಮೇಲೆ ನಿಲ್ಲದೆ ಒಂದು ತೆಳುಭಾವವೊಂದಿಗೆ ಕಥೆಯೊಂದಿಗೆ ಬೆರೆತು ಹೋಗುತ್ತವೆ. ಶಹಜಹಾನ್ ಮತ್ತು ಲಾಯರ್ ನಾಯಕಿಯ ಪ್ರೇಮ ಅವಸರದಲ್ಲಿ ಕೊನೆಗಾಣುತ್ತದೆ ಎನ್ನಿಸಿದರೂ ಆ ಕಥೆ ಈ ಕಥೆಯ ಒಳಗೆ ಹೊಂದದೆ ಸಿನಿಮಾ ದಿಕ್ಕಾಪಾಲಾಗಿ ಹೋಗಬಹುದು ಎನ್ನುವ ಕಾರಣಕ್ಕೆ ಅಂತ್ಯ ’ಓಪನ್’ ಉಳಿದಿದೆ ಎನ್ನಿಸುತ್ತದೆ. ಎಲ್ಲಿಯೂ ಐಟಂ ಸಾಂಗುಗಳು, ದೇಹ ಪ್ರದರ್ಶನ ಅಥವಾ ’ಆಡಿಯೆನ್ಸ್ ಕೇಳ್ತರೆ’ ಎಂದು ಸಮರ್ಥಿಸಿಕೊಳ್ಳಬೇಕಾದ ಕೊಳಕು ಮಾರುಕಟ್ಟೆ ಸರಕುಗಳಿಲ್ಲದಿದ್ದಾಗಲೂ (ಅಥವಾ ಇಲ್ಲ ಅಂತಲೇ) ಸಿನಿಮಾ ಬೆಳಗುತ್ತದೆ.

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ. ನಿರ್ದೇಶಕ ಅರವಿಂದ ಕುಪ್ಲೀಕರ್, ಸಿನಿಮಾ ಛಾಯಾಗ್ರಾಹಕ ಅದ್ವೈತ ಗುರುಮೂರ್ತಿ, ಚಟುವಟಿಕೆಯ ಸಂಕಲನ ಮಾಡಿರುವ ಸುರೇಶ್ ಆರ್ಮುಗಂ, ವಾಸು ದೀಕ್ಷಿತ್ ಅವರ ಸಂಗೀತ ಇವೆಲ್ಲವೂ ಸಿನಿಮಾವನ್ನು ಒಂದು ಚಂದದ ಅನುಭವವನ್ನಾಗಿಸಿವೆ.

ಇದರಲ್ಲಿ ಹೀಗೆ ಬೇಸಗೆಯ ದಿನದಲ್ಲಿ ಸಿಗುವ ಹದ ಸಿಹಿ ಹದ ತಂಪು ಎಳನೀರಿನ ಹಾಗೆ ಸೊಗಡಿನಿಂದ ನಟಿಸಿರುವ ಸಂಚಾರಿ ವಿಜಯ್ ನಮ್ಮ ನಡುವೆ ಇಲ್ಲ ಅನ್ನುವುದು ಸಿನಿಮಾದ ಉದ್ದಕ್ಕೂ ಒಂದು ಬಗೆಯಲ್ಲಿ ಅಂಗಾಲಿಗೆ ಒತ್ತಿದ ಮುಳ್ಳಿನ ಹಾಗೆ ಹೆಜ್ಜೆ ಇಟ್ಟಾಗಲೆಲ್ಲಾ ನೆನಪಾಗುವ ಒಂದು ತೀವ್ರ ನೋವು. ಎಂಥಾ ನಟ, ಎಂಥಾ ಭವಿಷ್ಯದ ಕನಸು ಕಾಣುತ್ತಿದ್ದ ಪ್ರತಿಭಾವಂತ… ಹೀಗೆ ಹೋಗಿಬಿಟ್ಟರಲ್ಲಾ ಎನ್ನುವುದು ಚಿತ್ರರಂಗಕ್ಕೆ ನಿಜಕ್ಕೂ ತುಂಬಲಾಗದ ನಷ್ಟವೇ.

ನನ್ನ ಮಟ್ಟಿಗೆ ಈ ಸಿನಿಮಾ ಒಂದು ಭಾವುಕ ಅನುಭವ. ಈ ಸಿನಿಮಾದ ನಿರ್ದೇಶಕ ಅರವಿಂದ ನನ್ನ ಎಳೆಯ ಸ್ನೇಹಿತ. ಬೆಂಗಳೂರಿನ ರಂಗಭೂಮಿಯ ದಿನಗಳಲ್ಲಿ ಬಿ ಜಯಶ್ರೀ ಅವರ ಸ್ಪಂದನ ತಂಡಕ್ಕೆ ನಾನು ಸೇರಲು ಹೋದಾಗ ಅರವಿಂದ ಚಿಕ್ಕವನಾದರೂ ಅತ್ಯಂತ ಜವಾಬ್ದಾರಿ ಹೊಂದಿದವನೂ, ಜೊತೆಗೆ ಮಹಾ ಕೀಟಲೆ ಸ್ವಭಾವದ ಹುಡುಗನಾಗಿದ್ದ. ರಂಗಭೂಮಿಯಲ್ಲಿ ತೀವ್ರ ತೊಡಗುವಿಕೆ, ಅಂದಿನ ಎಳೆಯರಲ್ಲಿ ಆಗಲೇ ಮರೆಯಾಗುತ್ತಿದ್ದ ರಂಗಭೂಮಿಯ ಆಕರ್ಷಣೆ ಟೀವಿ ಸಿನಿಮಾದ ಕಡೆ ಸೆಳೆಯುತ್ತಿದ್ದಾಗಲೂ ರಂಗವನ್ನು ಬಿಟ್ಟು ಕದಲದೆ ಧ್ಯಾನಸ್ಥ ರೀತಿಯಲ್ಲಿ ತೊಡಗಿಕೊಂಡು ನಂತರ ತನ್ನ ದಾರಿಯನ್ನು ಟೀವಿಯಲ್ಲಿ, ನಂತರ ಸಿನಿಮಾ ಅಭ್ಯಾಸದಲ್ಲಿ ನಂತರ ಸಿನಿಮಾದಲ್ಲಿ ಶೋಧಿಸಿದವ. ಇಂಥಾ ಅರವಿಂದ ಎಲ್ಲಿ ಹೆಜ್ಜೆ ಇಟ್ಟರೂ ನನ್ನಂಥ ಹಲವರಿಗೆ ಅದು ಸಂಭ್ರಮ. ಈ ವಿಷಯದಲ್ಲಿ ನಾನು ಪಕ್ಷಪಾತಿ.

ಈ ಚಿತ್ರ ನನಗಂತೂ ಹೊಸ ಭರವಸೆಯ ನಿರ್ದೇಶಕರನ್ನು, ತಂಡವನ್ನು ಕೊಟ್ಟಿದೆ ಎನ್ನಿಸುತ್ತದೆ. ಎಲ್ಲರಿಗೂ ಶುಭವಾಗಲಿ. ನಿಮ್ಮ ನೋವಿನ ನಡುವೆಯೂ ನಮ್ಮನ್ನು ನಗಿಸಿದ್ದೀರಿ. ನಿಮ್ಮ ಮುಂದಿನ ಹೆಜ್ಜೆ ಸುಗಮವಾಗಿ ಸಾಗಲಿ. ಕನ್ನಡ ಪ್ರೇಕ್ಷಕರಿಗೆ ಉತ್ತಮ ಚಿತ್ರಗಳನ್ನು ನೀವು ಕೊಡುವಂತಾಗಲಿ. ಜನ ಮತ್ತೆ ಬೆಳ್ಳಿ ತೆರೆಯತ್ತ ಬರುವಂತಾಗಲಿ.

***

PS: ಮನಸ್ಸಿಗೆ ಕಚುಗುಳಿ ಕೊಟ್ಟ ಇನ್ನೊಂದು ಅಂಶ. ಶಹಜಹಾನನ ಲೂನಾ. ಬೆನ್ನು ಬಗ್ಗಿಸಿ ಭರ್ರ್ರ್ರ್ರ್ ಎಂದು ಲಾರಿ ಹೋದ ಹಾಗೆ ಹೋಗುವ ಇಂದಿನ ಬೈಕುಗಳಿಗೂ ಇರದ ಚಾರ್ಮ್ ಅಂದಿನ ದಿನದ ಲೂನಾಕ್ಕೆ ಇತ್ತು. ಓದುವ ಹುಡುಗರಿಗೆ ಲೂನಾ ಸಿಕ್ಕರೆ ಟ್ಯೂಷನ್‌ಗೆ ಹೋಗುತ್ತಾರೆಂತಲೂ, ಓದದ ಹುಡುಗರಿಗೆ ಈ ಗಾಡಿ ಸಿಕ್ಕರೆ ಹುಡುಗಿಯರ ಹಿಂದೆ ತಿರುಗುತ್ತಾರೆಂತಲೂ ಅರ್ಥ ಆಗುತ್ತಿತ್ತು. ಇನ್ನು ಹುಡುಗಿಯರು ಲೂನಾ ಹಿಡಿದರೆ ಏನೆಂದು ಅರ್ಥ ಎನ್ನುವುದನ್ನ ಅಂದಿನ ಹುಡುಗರು ಹೇಳ್ಬೇಕು.

ಸಿನಿಮಾಕ್ಕೆ ಬಹಳ ಉತ್ತಮ ಸಬ್ ಟೈಟಲಿಂಗ್ ಆಗಿದೆ. ಇದು ಒಂದು ಸಿನಿಮಾ ಕರ್ನಾಟಕದ ಗಡಿ ದಾಟಿ ಹೋಗಲು ಎಷ್ಟು ಮುಖ್ಯ ಎನ್ನುವುದನ್ನು ನಿರ್ದೇಶಕರು ನಿರ್ಮಾಪಕರು ಅರಿತುಕೊಂಡರೆ ಉತ್ತಮ ಕನ್ನಡ ಸಿನಿಮಾಗಳು ರಾಜ್ಯದಿಂದ ಹೊರಗೆ ಹೋಗಿ ವಿಜೃಂಭಿಸಬಲ್ಲವು.

  • ಪ್ರೀತಿ ನಾಗರಾಜ್

(ಬರಹಗಾರರಾದ ಪ್ರೀತಿ ನಾಗರಾಜ್‌ರವರು ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಹಾಗೂ ಸಿಎನ್‌ಬಿಸಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿರುವ ಇವರಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ.)


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...