Homeಮುಖಪುಟಭಾವುಕ ಅನುಭವ ನೀಡುವ 'ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ' ಸಿನಿಮಾ: ಪ್ರೀತಿ ನಾಗರಾಜ್

ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ.

- Advertisement -
- Advertisement -

ಇದು ಸಿನಿಮಾವೋ ಅಥವಾ ಹೀಗೇ ಕಣ್ಣ ಮುಂದೆ ದೃಶ್ಯವಾದ ಸ್ನೇಹಿತನೇ ಕೂತು ಹೇಳುತ್ತಿರುವ ತಮಾಷೆಯ ಕಥೆಯೋ ಎಂದು ಗೊತ್ತಾಗುವ ಹೊತ್ತಿಗೆ ನೀವು ಸಿನಿಮಾದಲ್ಲಿ ಪೂರ್ತಿ ಇಳಿದುಹೋಗಿ ಇಂಟರ್ ವೆಲ್ ಬಂದಿರುತ್ತದೆ. ಆಗ ಸಿನಿಮಾ ಹಾಲ್ ನಲ್ಲಿ ಬರುವ ಮಂದ ಬೆಳಕೂ ಕಣ್ಣಿಗೆ ಕೋರೈಸಿದಂತೆ ಅನ್ನಿಸಿ ಸುತ್ತ ಮುತ್ತ ಇರುವ ಪರಿಚಿತರ ಮುಖ ನೋಡಲು ಪ್ರಯತ್ನ ಮಾಡಿದರೆ ಕೆಲವರ ಕಣ್ಣಿನಲ್ಲಾದರೂ ನೀರು ಕಂಡು ನಿಮ್ಮ ಕಣ್ಣಲ್ಲೂ ನೀರು ಉಕ್ಕುವ ಸಾಧ್ಯತೆ ಬಹಳಷ್ಟಿದೆ. ನೋಡಲು ಸುಲಲಿತವೆನ್ನಿಸಿದರೂ ಆಳವಾದ, ಸಂಕೀರ್ಣ ಅಭಿನಯ ಸಂಚಾರಿ ವಿಜಯ್ ಅವರದ್ದು.

ಡೂಪ್ಲಿಕೇಟ್ ಬೀಗ ಮಾಡುವ ಹುಡುಗನೊಬ್ಬನಿಗೆ ಪೋಲಿಸರ ಸಹವಾಸವಾಗಿ ಅವರ ಮೆಗಾ ಪ್ಲಾನಿನ ಭಾಗವಾಗಿ ಕಳ್ಳತನಕ್ಕೆ ಇಳಿದು ನಂತರ ತನ್ನದೇ ಬದುಕಿನ ಅನಿವಾರ್ಯತೆಗಳಿಗೆ ತೆರೆದುಕೊಂಡು ಕೆಲವು ತಪ್ಪು ಅನ್ನಿಸುವಂಥ ನಿರ್ಧಾರವನ್ನು ತೆಗೆದುಕೊಳ್ಳುವ ಕಥೆ ಇದು. ಎಲ್ಲೂ ನೈತಿಕತೆಯ ಅನವಶ್ಯಕ ಪಾಠವಿಲ್ಲ. ಎಲ್ಲರೂ ಮನುಷ್ಯರೇ, ತಪ್ಪು-ಒಪ್ಪುಗಳನ್ನು ಒಳಗೊಂಡವರೇ ಎನ್ನುವುದು ಧ್ಯೇಯ ವಾಕ್ಯ ಅಂತ ನನಗೆ ಅನ್ನಿಸಿತು.

ಮೊದಮೊದಲಿಗೆ ತುಟಿ ಬಿರಿಸುವಷ್ಟೇ ತಮಾಷೆ ಅನ್ನಿಸಿದರೂ ನಂತರ ಕ್ಯಾರೆಕ್ಟರುಗಳು ಮನಸ್ಸಿನಲ್ಲಿ ಇಳಿದು ನಗುವೇ ಅಭಿವ್ಯಕ್ತಿಯ ಭಾಗವಾಗುತ್ತದೆ. ಕಥೆಯೇ ಸ್ವತಂತ್ರವಾಗಿ ನಿಲ್ಲುವುದು ಪಾತ್ರಗಳ ಮೂಲಕ ಮಾತ್ರ. ಹಾಗಾಗಿ ಸಿನಿಮಾದಲ್ಲಿ ಡ್ರೋನ್ ಶಾಟ್ ಗಳು ಹೆಚ್ಚು ಬಳಕೆಯಾಗಿದ್ದು ಬಿಟ್ಟರೆ ಹೆಚ್ಚು ಟೈಟ್ ಫ್ರೇಮುಗಳ ಬಳಕೆ ಇದೆ. ರಂಗಭೂಮಿಯ ಹಿನ್ನೆಲೆ ಇರುವ ಬಹಳ ಜನ ಇದರಲ್ಲಿ ಪಾತ್ರ ಮಾಡಿರುವುದರಿಂದ ಚಿತ್ರ ಎಲ್ಲೂ ಅರೆಬರೆ ಅನ್ನಿಸುವುದಿಲ್ಲ. ಇದಕ್ಕೆ ಉತ್ತಮ ನಟರ ಅಭಿನಯ ಇರುವುದೂ ಕೂಡ ಒಂದು ಮುಖ್ಯ ಕಾರಣ ಇರಬಹುದು. ಎಲ್ಲಿಯೂ ಸಿನಿಮಾ ಕನಸು ಅನ್ನಿಸದೆ ನಮ್ಮ ಪಕ್ಕವೇ ನಡೆದುಹೋಗುತ್ತದೆ.

ರಂಗಾಯಣ ರಘು ಅವರ ಪಾತ್ರ ಒಂದು ಸರ್ಪ್ರೈಸ್ ಅಂಶ. ಅವರು ತೆರೆಯ ಮೇಲೆ ಕಂಡಾಗಿನಿಂದ ಇನ್ನೇನು ನಗಿಸುತ್ತಾರೆ ಈಗಲೇ ಒಂದು ಜೋಕು ಬೀಳಬಹುದು ಅಂತ ನಿರೀಕ್ಷೆ ಇಟ್ಟುಕೊಂಡರೆ ಅಚ್ಚರಿ ಆಗೋದು ಖಂಡಿತ. ಇನ್ಸ್ಪೆಕ್ಟರ್ ಪಾತ್ರ ಮಾಡಿರುವ ಅಚ್ಯುತ್ ಕುಮಾರ್ ಅವರಿಂದ ಹಿಡಿದು ದೊಡ್ಡಪ್ಪ, ಪೀಸಿ ಮೋಹನ, ವಿನಯ್ ಮಲ್ಯ (ಸ್ವತಃ ನಿರ್ದೇಶಕರೇ ಈ ರೋಲ್ ಮಾಡಿದ್ದಾರೆ) ಮಹಿಳಾ ಇನ್ಸ್ಪೆಕ್ಟರು, ಕಾನ್ಸ್ಟೇಬಲ್ಲು, ಸಣ್ಣ ಪಾತ್ರಗಳಾದ ರೈಟರು, ಅರ್ಚಕರು, ಅವರ ಮಗ, ಶಹಜಹಾನನ (ಸಂಚಾರಿ ವಿಜಯ್) ತಮ್ಮ, ಜಡ್ಜ್, ಹೀಗೆ ಹತ್ತು ಹಲವಾರು ಜನ ಹೀಗೆ ಬಂದು ಹಾಗೆ ಹೋದರೂ ಮನಸ್ಸಿನಲ್ಲಿ ನಿಲ್ಲುತ್ತಾರೆ. ಹಾಡುಗಳು ಯಾವುದೇ ಸ್ವತಂತ್ರ ನೆಲೆಯ ಮೇಲೆ ನಿಲ್ಲದೆ ಒಂದು ತೆಳುಭಾವವೊಂದಿಗೆ ಕಥೆಯೊಂದಿಗೆ ಬೆರೆತು ಹೋಗುತ್ತವೆ. ಶಹಜಹಾನ್ ಮತ್ತು ಲಾಯರ್ ನಾಯಕಿಯ ಪ್ರೇಮ ಅವಸರದಲ್ಲಿ ಕೊನೆಗಾಣುತ್ತದೆ ಎನ್ನಿಸಿದರೂ ಆ ಕಥೆ ಈ ಕಥೆಯ ಒಳಗೆ ಹೊಂದದೆ ಸಿನಿಮಾ ದಿಕ್ಕಾಪಾಲಾಗಿ ಹೋಗಬಹುದು ಎನ್ನುವ ಕಾರಣಕ್ಕೆ ಅಂತ್ಯ ’ಓಪನ್’ ಉಳಿದಿದೆ ಎನ್ನಿಸುತ್ತದೆ. ಎಲ್ಲಿಯೂ ಐಟಂ ಸಾಂಗುಗಳು, ದೇಹ ಪ್ರದರ್ಶನ ಅಥವಾ ’ಆಡಿಯೆನ್ಸ್ ಕೇಳ್ತರೆ’ ಎಂದು ಸಮರ್ಥಿಸಿಕೊಳ್ಳಬೇಕಾದ ಕೊಳಕು ಮಾರುಕಟ್ಟೆ ಸರಕುಗಳಿಲ್ಲದಿದ್ದಾಗಲೂ (ಅಥವಾ ಇಲ್ಲ ಅಂತಲೇ) ಸಿನಿಮಾ ಬೆಳಗುತ್ತದೆ.

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ. ನಿರ್ದೇಶಕ ಅರವಿಂದ ಕುಪ್ಲೀಕರ್, ಸಿನಿಮಾ ಛಾಯಾಗ್ರಾಹಕ ಅದ್ವೈತ ಗುರುಮೂರ್ತಿ, ಚಟುವಟಿಕೆಯ ಸಂಕಲನ ಮಾಡಿರುವ ಸುರೇಶ್ ಆರ್ಮುಗಂ, ವಾಸು ದೀಕ್ಷಿತ್ ಅವರ ಸಂಗೀತ ಇವೆಲ್ಲವೂ ಸಿನಿಮಾವನ್ನು ಒಂದು ಚಂದದ ಅನುಭವವನ್ನಾಗಿಸಿವೆ.

ಇದರಲ್ಲಿ ಹೀಗೆ ಬೇಸಗೆಯ ದಿನದಲ್ಲಿ ಸಿಗುವ ಹದ ಸಿಹಿ ಹದ ತಂಪು ಎಳನೀರಿನ ಹಾಗೆ ಸೊಗಡಿನಿಂದ ನಟಿಸಿರುವ ಸಂಚಾರಿ ವಿಜಯ್ ನಮ್ಮ ನಡುವೆ ಇಲ್ಲ ಅನ್ನುವುದು ಸಿನಿಮಾದ ಉದ್ದಕ್ಕೂ ಒಂದು ಬಗೆಯಲ್ಲಿ ಅಂಗಾಲಿಗೆ ಒತ್ತಿದ ಮುಳ್ಳಿನ ಹಾಗೆ ಹೆಜ್ಜೆ ಇಟ್ಟಾಗಲೆಲ್ಲಾ ನೆನಪಾಗುವ ಒಂದು ತೀವ್ರ ನೋವು. ಎಂಥಾ ನಟ, ಎಂಥಾ ಭವಿಷ್ಯದ ಕನಸು ಕಾಣುತ್ತಿದ್ದ ಪ್ರತಿಭಾವಂತ… ಹೀಗೆ ಹೋಗಿಬಿಟ್ಟರಲ್ಲಾ ಎನ್ನುವುದು ಚಿತ್ರರಂಗಕ್ಕೆ ನಿಜಕ್ಕೂ ತುಂಬಲಾಗದ ನಷ್ಟವೇ.

ನನ್ನ ಮಟ್ಟಿಗೆ ಈ ಸಿನಿಮಾ ಒಂದು ಭಾವುಕ ಅನುಭವ. ಈ ಸಿನಿಮಾದ ನಿರ್ದೇಶಕ ಅರವಿಂದ ನನ್ನ ಎಳೆಯ ಸ್ನೇಹಿತ. ಬೆಂಗಳೂರಿನ ರಂಗಭೂಮಿಯ ದಿನಗಳಲ್ಲಿ ಬಿ ಜಯಶ್ರೀ ಅವರ ಸ್ಪಂದನ ತಂಡಕ್ಕೆ ನಾನು ಸೇರಲು ಹೋದಾಗ ಅರವಿಂದ ಚಿಕ್ಕವನಾದರೂ ಅತ್ಯಂತ ಜವಾಬ್ದಾರಿ ಹೊಂದಿದವನೂ, ಜೊತೆಗೆ ಮಹಾ ಕೀಟಲೆ ಸ್ವಭಾವದ ಹುಡುಗನಾಗಿದ್ದ. ರಂಗಭೂಮಿಯಲ್ಲಿ ತೀವ್ರ ತೊಡಗುವಿಕೆ, ಅಂದಿನ ಎಳೆಯರಲ್ಲಿ ಆಗಲೇ ಮರೆಯಾಗುತ್ತಿದ್ದ ರಂಗಭೂಮಿಯ ಆಕರ್ಷಣೆ ಟೀವಿ ಸಿನಿಮಾದ ಕಡೆ ಸೆಳೆಯುತ್ತಿದ್ದಾಗಲೂ ರಂಗವನ್ನು ಬಿಟ್ಟು ಕದಲದೆ ಧ್ಯಾನಸ್ಥ ರೀತಿಯಲ್ಲಿ ತೊಡಗಿಕೊಂಡು ನಂತರ ತನ್ನ ದಾರಿಯನ್ನು ಟೀವಿಯಲ್ಲಿ, ನಂತರ ಸಿನಿಮಾ ಅಭ್ಯಾಸದಲ್ಲಿ ನಂತರ ಸಿನಿಮಾದಲ್ಲಿ ಶೋಧಿಸಿದವ. ಇಂಥಾ ಅರವಿಂದ ಎಲ್ಲಿ ಹೆಜ್ಜೆ ಇಟ್ಟರೂ ನನ್ನಂಥ ಹಲವರಿಗೆ ಅದು ಸಂಭ್ರಮ. ಈ ವಿಷಯದಲ್ಲಿ ನಾನು ಪಕ್ಷಪಾತಿ.

ಈ ಚಿತ್ರ ನನಗಂತೂ ಹೊಸ ಭರವಸೆಯ ನಿರ್ದೇಶಕರನ್ನು, ತಂಡವನ್ನು ಕೊಟ್ಟಿದೆ ಎನ್ನಿಸುತ್ತದೆ. ಎಲ್ಲರಿಗೂ ಶುಭವಾಗಲಿ. ನಿಮ್ಮ ನೋವಿನ ನಡುವೆಯೂ ನಮ್ಮನ್ನು ನಗಿಸಿದ್ದೀರಿ. ನಿಮ್ಮ ಮುಂದಿನ ಹೆಜ್ಜೆ ಸುಗಮವಾಗಿ ಸಾಗಲಿ. ಕನ್ನಡ ಪ್ರೇಕ್ಷಕರಿಗೆ ಉತ್ತಮ ಚಿತ್ರಗಳನ್ನು ನೀವು ಕೊಡುವಂತಾಗಲಿ. ಜನ ಮತ್ತೆ ಬೆಳ್ಳಿ ತೆರೆಯತ್ತ ಬರುವಂತಾಗಲಿ.

***

PS: ಮನಸ್ಸಿಗೆ ಕಚುಗುಳಿ ಕೊಟ್ಟ ಇನ್ನೊಂದು ಅಂಶ. ಶಹಜಹಾನನ ಲೂನಾ. ಬೆನ್ನು ಬಗ್ಗಿಸಿ ಭರ್ರ್ರ್ರ್ರ್ ಎಂದು ಲಾರಿ ಹೋದ ಹಾಗೆ ಹೋಗುವ ಇಂದಿನ ಬೈಕುಗಳಿಗೂ ಇರದ ಚಾರ್ಮ್ ಅಂದಿನ ದಿನದ ಲೂನಾಕ್ಕೆ ಇತ್ತು. ಓದುವ ಹುಡುಗರಿಗೆ ಲೂನಾ ಸಿಕ್ಕರೆ ಟ್ಯೂಷನ್‌ಗೆ ಹೋಗುತ್ತಾರೆಂತಲೂ, ಓದದ ಹುಡುಗರಿಗೆ ಈ ಗಾಡಿ ಸಿಕ್ಕರೆ ಹುಡುಗಿಯರ ಹಿಂದೆ ತಿರುಗುತ್ತಾರೆಂತಲೂ ಅರ್ಥ ಆಗುತ್ತಿತ್ತು. ಇನ್ನು ಹುಡುಗಿಯರು ಲೂನಾ ಹಿಡಿದರೆ ಏನೆಂದು ಅರ್ಥ ಎನ್ನುವುದನ್ನ ಅಂದಿನ ಹುಡುಗರು ಹೇಳ್ಬೇಕು.

ಸಿನಿಮಾಕ್ಕೆ ಬಹಳ ಉತ್ತಮ ಸಬ್ ಟೈಟಲಿಂಗ್ ಆಗಿದೆ. ಇದು ಒಂದು ಸಿನಿಮಾ ಕರ್ನಾಟಕದ ಗಡಿ ದಾಟಿ ಹೋಗಲು ಎಷ್ಟು ಮುಖ್ಯ ಎನ್ನುವುದನ್ನು ನಿರ್ದೇಶಕರು ನಿರ್ಮಾಪಕರು ಅರಿತುಕೊಂಡರೆ ಉತ್ತಮ ಕನ್ನಡ ಸಿನಿಮಾಗಳು ರಾಜ್ಯದಿಂದ ಹೊರಗೆ ಹೋಗಿ ವಿಜೃಂಭಿಸಬಲ್ಲವು.

  • ಪ್ರೀತಿ ನಾಗರಾಜ್

(ಬರಹಗಾರರಾದ ಪ್ರೀತಿ ನಾಗರಾಜ್‌ರವರು ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಹಾಗೂ ಸಿಎನ್‌ಬಿಸಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿರುವ ಇವರಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ.)


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...