Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...