Homeಮುಖಪುಟಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮಾತನಾಡಿದ್ದಾರೆ. ಇದು ಸಾಂವಿಧಾನಿಕವಾಗಿ ಎಷ್ಟು ಸರಿ ಎಂಬ ಕುರಿತು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌, ಜಸ್ಟೀಸ್ ನಾಗಮೋಹನದಾಸ್‌ ಅವರು ‘ನಾನುಗೌರಿ,ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಭಾಷಣ ಮಾಡಿದ್ದಾರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಭಾತ್ಯಾಗ ಮಾಡಿ, ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರ ಭಾಷಣ ನಿಗದಿಯಾಗಿದೆ.ಇದನ್ನೂ ನೋಡಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸ್ಪೀಕರ್‌ ಕರೆಸಿ ವಿಧಾನಸಭೆಯಲ್ಲಿ ಮಾತನಾಡಿಸುತ್ತಿರುವ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮಕುಮಾರ್‌ ಹಾಗೂ ಜಸ್ಟೀಸ್‌ ನಾಗಮೋಹನ ದಾಸ್‌ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಮಾರಕ: ಪ್ರೊ.ರವಿವರ್ಮಕುಮಾರ್‌

“ಭಾರತದ ಒಕ್ಕೂಟ  ವ್ಯವಸ್ಥೆಯಲ್ಲಿ ವಿಧಾನಸಭೆಗಿಂತ ಲೋಕಸಭೆ ಶ್ರೇಷ್ಠವಾದದ್ದೇನಲ್ಲ. ಸಂವಿಧಾನಿಕ ಹುದ್ದೆಗಳಾದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು ಖಂಡಿತವಾಗಿಯೂ  ದೇಶದ ಮುಖ್ಯಸ್ಥರಾಗಿರುತ್ತಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರು ಹೇಳುವಂತಹದ್ದನ್ನು ಲೋಕಸಭಾ ಸ್ಪೀಕರ್‌ ಹೇಳಲು ಬರುವುದಿಲ್ಲ. ಆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಒಕ್ಕೂಟ ವ್ಯವಸ್ಥೆಗೆ ಮಾರಕ” ಎಂದು ಪ್ರೊ.ರವಿವರ್ಮಕುಮಾರ್‌ ಅಭಿಪ್ರಾಯಪಟ್ಟರು.

“ಒಕ್ಕೂಟ ವ್ಯವಸ್ಥೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ನಿರ್ದಿಷ್ಟ ಸ್ಥಾನಮಾನಗಳಿವೆ. ಯಾವುದು ಮತ್ತೊಂದಕ್ಕಿಂತ ಶ್ರೇಷ್ಠ ಅಲ್ಲ. ವಿಧಾನಸಭೆ ಮಾಡಿದ ಕಾನೂನನ್ನು ಲೋಕಸಭೆಯಲ್ಲಿ ಅಪೀಲ್‌ ಮಾಡಲು ಆಗುವುದಿಲ್ಲ. ಇಡೀ ದೇಶದ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ಲೋಕಸಭೆಗಿದೆ. ರಾಜ್ಯ ಮಟ್ಟದಲ್ಲಿ ಶಾಸನ ರಚಿಸುವ ಅಧಿಕಾರ ವಿಧಾನಸಭೆಗಿದೆ. ವಿಧಾನಸಭೆಗೆ ಇರುವ ಅಧಿಕಾರ, ಲೋಕಸಭೆಗೆ ಇರುವುದಿಲ್ಲ. ಆದ್ದರಿಂದ ಲೋಕಸಭೆಯ ಸ್ಪೀಕರ್‌ ಅವರನ್ನು ಕರೆಸಿ ಅಧಿವೇಶನ ನಡೆಸಲಾಗದು. ಅದರಲ್ಲೂ ಮೇಲ್ಮನೆಯನ್ನು ‘ಹಿರಿಯರ ಸದನ’ ಎಂದು ಕರೆಯಲಾಗುತ್ತದೆ. ಅಲ್ಲಿ ಪ್ರತಿಭಾನ್ವಿತರಿರುತ್ತಾರೆ, ವೃತ್ತಿಗಳ, ಕ್ಷೇತ್ರಗಳ ಪ್ರತಿನಿಧಿಗಳು ಇರುತ್ತಾರೆ. ಅಲ್ಲಿಗೆ ಲೋಕಸಭೆ ಸ್ಪೀಕರ್‌ ಅವರನ್ನು ಕರೆಸುವುದು ಗಂಭೀರವಾದ ಲೋಪ” ಎನ್ನುತ್ತಾರೆ ರವಿವರ್ಮಕುಮಾರ್‌.

ಅತಿಕ್ರಮಣ ಮಾಡುವಂತಿಲ್ಲ: ಜಸ್ಟೀಸ್ ದಾಸ್‌

ಜಸ್ಟೀಸ್‌ ನಾಗಮೋಹನ ದಾಸ್‌ ಅವರು ಮಾತನಾಡಿ, “ರಾಷ್ಟ್ರಪತಿಗಳು ಉಭಯ ಸದನಗಳಲ್ಲಿ ಮಾತನಾಡಬಹುದು. ಅಲ್ಲದೆ ಅಖಿಲ ಭಾರತ ಮುಖ್ಯಮಂತ್ರಿಗಳ ಸಮಾವೇಶ, ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶಗಳು ನಡೆಯುತ್ತವೆ. ಹೀಗಿರುವಾಗ ಕೆಲವೊಂದು ವಿಚಾರಗಳಲ್ಲಿ ಲೋಕಸಭಾ ಸ್ಪೀಕರ್‌ ಕೆಲವು ಸಲಹೆ ನೀಡುವುದು ಸ್ವಾಗತಾರ್ಹ. ಆದರೆ ವಿಧಾನಸಭೆ, ವಿಧಾನ ಪರಿಷತ್‌ನ ಸ್ವಾತಂತ್ರದಲ್ಲಿ ಅವರು ಅತಿಕ್ರಮಣ ಮಾಡುವಂತಿಲ್ಲ” ಎಂದರು.

“ವಿಧಾನಸಭೆಯು ಎಷ್ಟು ಸಮಯ, ಎಷ್ಟು ದಿನ ನಡೆಯಬೇಕು, ಯಾವ ಅಜೆಂಡಾವನ್ನೇ ಎತ್ತಿಕೊಳ್ಳಬೇಕು ಎಂದು ಸೂಚಿಸಿದ್ದಲ್ಲದೆ ಸಿಸಿ ಕ್ಯಾಮೆರಾದಲ್ಲಿ ಅಧಿವೇಶನವನ್ನು ರೆಕಾರ್ಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹಿಂದೊಮ್ಮೆ ಆದೇಶಿಸಿತ್ತು. ಆಗ ಅಂದಿನ ಲೋಕಸಭೆ ಸ್ಪೀಕರ್‌, ಎಲ್ಲ ಸ್ಪೀಕರ್‌ಗಳ ಅಧಿವೇಶನ ಮಾಡಿ, ‘ಇದು ನಮ್ಮ ಸ್ವಾತಂತ್ರದ ಮೇಲೆ ನ್ಯಾಯಾಂಗದ ಅತಿಕ್ರಮಣ’ ಎಂದು ಸಭೆ ನಡೆಸಿದ್ದರು. ಸುಪ್ರೀಂಕೋರ್ಟ್‌ ಇದನ್ನು ಮಾಡಬಾರದು ಎಂದು ತೀರ್ಮಾನಿಸಲಾಗಿತ್ತು” ಎನ್ನುತ್ತಾರೆ ಜಸ್ಟೀಸ್ ದಾಸ್.

“ಕೇಂದ್ರ ಪಟ್ಟಿ, ರಾಜ್ಯ ಪಟ್ಟಿ, ಸಮವರ್ತ ಪಟ್ಟಿಯನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಕೇಂದ್ರ ಪಟ್ಟಿಯಲ್ಲಿ ಇರುವ ವಿಚಾರಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಕಾನೂನು ರೂಪಿಸಬಹುದು. ಆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ. ರಾಜ್ಯ ಸರ್ಕಾರದ ಪಟ್ಟಿಯಲ್ಲಿ ಯಾವ ವಿಷಯಗಳಲ್ಲಿ ಕಾನೂನು ಮಾಡಬಹುದು ಎಂದು ತಿಳಿಸಲಾಗಿದೆ. ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಸಮವರ್ತಿ ಪಟ್ಟಿ ಎಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿ ಮಾಡುವ ಕಾನೂನುಗಳಾಗಿವೆ. ಎಪಿಎಂಸಿ ಕಾಯ್ದೆ ರಾಜ್ಯ ಪಟ್ಟಿಯಲ್ಲಿದೆ, ಕೃಷಿ ಸಂಬಂಧಿತ ಕಾಯ್ದೆಗಳು ರಾಜ್ಯ ಪಟ್ಟಿಯಲ್ಲಿದೆ. ಇವುಗಳನ್ನು ಕೇಂದ್ರ ಸರ್ಕಾರ ಬಿಲ್‌ಗಳನ್ನು ಪಾಸ್‌ ಮಾಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗಿದೆ” ಎಂದು ತಿಳಿಸಿದರು.

ಪತ್ರಕರ್ತ ಪಿ.ಸಾಯಿನಾಥ್‌ ಅವರನ್ನು ಪಾರ್ಲಿಮೆಂಟ್‌ ಸದಸ್ಯರು, ಒಮ್ಮೆ ಪಾರ್ಲಿಮೆಂಟ್‌ ಹಾಲ್‌ಗೆ ಕರೆಸಿ ಉಪನ್ಯಾಸ ಕೊಡಿ ಎಂದಿದ್ದರು. ಹೋಗಿದ್ದ ಸಾಯಿನಾಥ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ನಮ್ಮ ಪ್ರಧಾನಿಯವರು ಬೇರೆ ದೇಶದ ಪಾರ್ಲಿಮೆಂಟ್‌ ಸದಸ್ಯರ ಮುಂದೆ ಭಾಷಣ ಮಾಡುತ್ತಾರೆ, ಬೇರೆ ದೇಶದವರು ಬಂದು ನಮ್ಮ ದೇಶದವರ ಮುಂದೆ ಉಪನ್ಯಾಸ ನೀಡುತ್ತಾರೆ. ಈ ರೀತಿಯಲ್ಲಿ ಕಾರ್ಯಕ್ರಮ ನಡೆಸಿದರೆ ಲೋಪವಾಗದು. ಆದರೆ ಇಲ್ಲಿನ ‘ಬಿಸಿನೆಸ್‌ ಆಫ್‌ ದಿ ಹೌಸ್‌’ನಲ್ಲಿ ಲೋಕಸಭೆಯ ಸ್ಪೀಕರ್‌ ತಲೆಹಾಕುವಂತಿಲ್ಲ. ವಿಧಾನಸಭೆ, ವಿಧಾನ ಪರಿಷತ್‌ನ ನಡಾವಳಿಗಳ ಒಳಗೆ ಪ್ರವೇಶಿಸದಿದ್ದರೆ ಅದು ಸ್ವಾಗತಾರ್ಹ. ಜೊತೆಗೆ ವಿರೋಧ ಪಕ್ಷಗಳ ಒಪ್ಪಿಗೆ ಅಗತ್ಯವಿರುತ್ತದೆ ಎನ್ನುತ್ತಾರೆ ಜಸ್ಟೀಸ್‌ ನಾಗಮೋಹನ ದಾಸ್‌.

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ, ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...