Homeಮುಖಪುಟಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

- Advertisement -
- Advertisement -

ಅಸ್ಸಾಂನ ಧೋಲ್ಪುರ್ ಗ್ರಾಮದಲ್ಲಿ ಗುರುವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆದಿತ್ತು. ಈ ಸಂದರ್ಭ ಬನಿಯನ್ ಮತ್ತು ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬರು ಕೋಲು ಹಿಡಿದುಕೊಂಡು ಪೊಲೀಸರನ್ನು ಬೆನ್ನಟ್ಟಿದ್ದರು. ಆದರೆ ಅವರನ್ನು ಪೊಲೀಸರು ಗುಂಡಿಟ್ಟು, ಅಮಾನವೀಯವಾಗಿ ಥಳಿಸಿ, ತುಳಿದು ಕೊಲೆ ಮಾಡಲಾಗಿದೆ. ಅವರನ್ನು 28 ವರ್ಷದ ಮೊಯಿನುಲ್ ಹಕ್ ಎಂದು ಗುರುತಿಸಲಾಗಿದೆ.

ಮೂವರು ಮಕ್ಕಳ ತಂದೆಯಾಗಿರುವ ಮೊಯಿನುಲ್ ಹಕ್, ಒಂದು ತುಂಡು ಭೂಮಿಯಲ್ಲಿ ತರಕಾರಿ ಬೆಳೆದು ಕುಟುಂಬವನ್ನು ಮುನ್ನಡೆಸುತ್ತಿದ್ದರು. ಆದರೆ ಸರ್ಕಾರ ಈ ಭೂಮಿ ಅವರದ್ದಲ್ಲ ಎಂದು ಪ್ರತಿಪಾದಿಸಿ ಅವರನ್ನು ಸ್ಥಳಾಂತರ ಮಾಡಲು ಹೊರಟಿತ್ತು. ಇದನ್ನು ವಿರೋಧಿಸಿ ಅವರು ಪೊಲೀಸರ ವಿರುದ್ದ ಪ್ರತಿಭಟಿಸಿದ್ದರು.

“ಅವರು ನನ್ನ ಮಗನನ್ನು ಕೊಂದಿದ್ದಾರೆ. ನಾವು ಬಾಂಗ್ಲಾದೇಶಿಯರೇ? ಹಾಗಾದರೆ ನಮ್ಮನ್ನು ಅಲ್ಲಿಗೆ ಕಳುಹಿಸಿ” ಎಂದು ತನ್ನ ಮಗನ ಸಾವಿನ ಬಗ್ಗೆ ಮೊಯಿನುಲ್ ಅವರ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಯಿನುಲ್ ಹಕ್ ಅವರ ಪತ್ನಿ ಮತ್ತು ತಾಯಿ ಅಸಮಾಧಾನದಿಂದ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಗೆ ಶೂಟ್‌‌ ಮಾಡಿ, ಅಮಾನವೀಯವಾಗಿ ಥಳಿಸಿದ ಅಸ್ಸಾಂ ಪೊಲೀಸ್‌‌

ಮುಯೀನುಲ್ ಅವರ ಹತ್ಯೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ಹೆಚ್ಚುತ್ತಿದ್ದಂತೆ ಅವರನ್ನು ಬಾಂಗ್ಲಾದೇಶದಿಂದ ಅತಿಕ್ರಮವಾಗಿ ದೇಶಕ್ಕೆ ಬಂದವರು ಎಂದು ಬಿಂಬಿಸಲಾಗಿತ್ತು. ಆದರೆ ಮೊಯೀನುಲ್ ಅವರ ಹೆಸರು ಎನ್‌ಆರ್‌ಸಿಯಲ್ಲಿದೆ ಎಂದು ಪತ್ರಕರ್ತರು ದೃಢೀಕರಿಸಿದ್ದು, ಅವರು ಅಕ್ರಮ ನಿವಾಸಿಯಲ್ಲ ಎಂದು ತಿಳಿಸಿದ್ದಾರೆ. ಅವರು ಆಧಾರ್ ಕಾರ್ಡ್ ಕೂಡಾ ಹೊಂದಿದ್ದರು. ಅವರ ಪೌರತ್ವ ಪ್ರಮಾಣಪತ್ರಗಳ ಹೊರತಾಗಿಯೂ ಅವರನ್ನು ಕ್ಯಾಮರಾ ಮುಂದೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪತ್ರಕರ್ತರು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ಸೋಮವಾರದಿಂದ ಸುಮಾರು 800 ಕುಟುಂಬಗಳನ್ನು ಅವರ ಮನೆಗಳಿಂದ ಹೊರಹಾಕಿ ತಾತ್ಕಾಲಿಕ ಪರಿಹಾರ ಶಿಬಿರದಲ್ಲಿ ಕೂಡಿಹಾಕಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

7 ಮತ್ತು 2 ವರ್ಷದ ಇಬ್ಬರು ಹುಡುಗರು ಮತ್ತು ಐದು ವರ್ಷದ ಹೆಣ್ಣು ಮಗುವಿನ ತಂದೆಯಾಗಿರುವ ಮುಯಿನುಲ್‌ ಹಕ್ ಅವರ ಮೃತದೇಹವನ್ನು ಸಿಪಾಜಾರ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಪರಿಹಾರ ಘೋಷಿಸುವವರೆಗೂ ಸ್ಥಳೀಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿವೆ.

ಗೋರುಖುಟಿ ಮತ್ತು ಧೋಲ್ಪುರ್ 1, 2 ಮತ್ತು 3 ಒಟ್ಟು ನಾಲ್ಕು ಪ್ರದೇಶಗಳಿಂದ ಗ್ರಾಮಸ್ಥರನ್ನು ಪೋಲಿಸರು ಹೊರಹಾಕಿದ್ದಾರೆ. ಮೊಯಿನುಲ್ ಹಕ್ ಅವರ ಹತ್ಯೆಯ ಘಟನೆಯು ಧೋಲ್ಪುರ-3 ನೇ ಗ್ರಾಮದಲ್ಲಿ ನಡೆದಿದೆ. ಪ್ರದೇಶಗಳನ್ನು ಖಾಲಿ ಮಾಡುವ ಬಗ್ಗೆಗಿನ ನೋಟಿಸ್‌ ಅನ್ನು ಬುಧವಾರ ರಾತ್ರಿ ನೀಡಲಾಗಿದ್ದು, ಗುರುವಾರ ಬೆಳಿಗ್ಗೆ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಆರಂಭವಾಗಿದೆ. ವರದಿಗಳ ಪ್ರಕಾರ ಎರಡು ಮಸೀದಿಗಳನ್ನು ಈಗಾಗಲೆ ನೆಲಸಮ ಮಾಡಲಾಗಿದೆ.

ಗುರುವಾರ ನಡೆದ ಹಿಂಸಾಚಾರದ ಕುರಿತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪೊಲೀಸರ ಜೊತೆಗೆ ಹಲ್ಲೆ ನಡೆಸಿದ್ದ ಛಾಯಾಚಿತ್ರಗಾಹಕ ಬಿಜಯ್ ಬೋನಿಯಾ ಬಂಧನಕ್ಕೆ ಒಳಗಾಗಿದ್ದಾರೆ. ಸ್ಥಳೀಯ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ದಾಳಿಯನ್ನು ವಿರೋಧಿಸಿ, ‘ಅಖಿಲ ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟ’ (AAMSU) ಅಸ್ಸಾಂನ ಹಲವಾರು ಭಾಗಗಳಲ್ಲಿ ಪ್ರತಿಟನೆ ನಡೆಸಿದೆ. ಜೊತೆಗೆ ದಾರ್‍ರಾಂಗ್ ಜಿಲ್ಲೆಯಲ್ಲಿ ಮುಂಜಾನೆಯಿಂದ ಮುಸ್ಸಂಜೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೂಡಾ ದರ್ರಾಂಗ್ ಜಿಲ್ಲಾ ಕೇಂದ್ರವಾದ ಮಂಗಳದೈನಲ್ಲಿ ಪ್ರತಿಭಟನೆ ನಡೆಸಿದೆ. ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಸೇರಿದಂತೆ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಅಸ್ಸಾಂ ರಾಜ್ಯವು ಪ್ರಭುತ್ವ ಪ್ರಾಯೋಜಿತ ಬೆಂಕಿಯಲ್ಲಿದೆ. ನಾನು ರಾಜ್ಯದ ನಮ್ಮ ಸಹೋದರ ಸಹೋದರಿಯರ ಪರವಾಗಿ ನಿಲ್ಲುತ್ತೇನೆ. ಭಾರತದ ಯಾವುದೇ ಮಕ್ಕಳು ಈ ಕ್ರೂರತೆಗೆ ಅರ್ಹರಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಈ ಎಲ್ಲದರ ನಡುವೆ, ಅಸ್ಸಾಂ ಸಿಎಂ ಹಿಮಾಂತ ಅವರು ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ನೀವು ಒಂದು ವೀಡಿಯೊದಿಂದ ರಾಜ್ಯ ಸರ್ಕಾರವನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. 1983 ರಿಂದ ಆ ಪ್ರದೇಶವು ಕೊಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲದಿದ್ದರೆ, ಸಾಮಾನ್ಯವಾಗಿ ಜನರು ದೇವಾಲಯದ ಭೂಮಿಯನ್ನು ಅತಿಕ್ರಮಿಸುವುದಿಲ್ಲ. ನಾನು ಅಲ್ಲಿನ ಅತಿಕ್ರಮಣಗಳನ್ನು ನೋಡಿದ್ದೇನೆ. ಶಾಂತಿಯುತ ಎತ್ತಂಗಡಿಗೆ ಒಪ್ಪಿಕೊಳ್ಳಲಾಗಿತ್ತು, ಆದರೆ ಅವರನ್ನು ಪ್ರಚೋದಿಸಿದವರು ಯಾರು?” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...