Homeಮುಖಪುಟಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗಾಂಧಿ ತತ್ವದ ಅಗತ್ಯತೆಗಳನ್ನು ಸ್ಮರಿಸಿದ್ದಾರೆ.

“ಅಹಿಂಸೆ, ಸಹಿಷ್ಣುತೆ, ವೈವಿಧ್ಯತೆ” ಕುರಿತು ಮಾತನಾಡಿರುವ ಬೈಡನ್‌, “ಎರಡೂ ದೇಶಗಳು ಜೊತೆಯಾಗಿ ನಡೆದು ಗಟ್ಟಿಯಾಗಬೇಕಿದೆ” ಎಂದು ತಿಳಿಸಿದ್ದಾರೆ.

ಬೈಡನ್‌ ಅವರ ಹೇಳಿಕೆಯಿಂದಾಗಿ ಮೋದಿಯವರೊಂದಿಗೆ ಅಮೆರಿಕ ದೇಶವು ಪ್ರಜಾಪ್ರಭುತ್ವದ ಅಗತ್ಯತೆ ಕುರಿತು ಎರಡನೇ ಬಾರಿಗೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದಂತಾಗಿದೆ. “ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಂಸ್ಥೆಗಳನ್ನು ರಕ್ಷಿಸುವುದು ಅತ್ಯಗತ್ಯ” ಎಂದು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಹೇಳಿದ್ದರು.

ಭಾರತದಲ್ಲಿ ಮುಸ್ಲಿಂ ವಿರೋಧಿ ಧೋರಣೆಯ ಏರಿಕೆ ಮತ್ತು ಭಿನ್ನಾಭಿಪ್ರಾಯಗಳ ಮೇಲೆ ಕಡಿವಾಣ ಹಾಕುವ ಪ್ರವೃತ್ತಿಯ ಹಿನ್ನೆಲೆಯಲ್ಲಿ ವಿದೇಶಗಳು ತೋರುತ್ತಿರುವ ಕಾಳಜಿಯನ್ನು ಇಂತಹ ಬೆಳವಣಿಗೆಗಳು ತೋರುತ್ತವೆ.

“ಐತಿಹಾಸಿಕ ಭೇಟಿಯಲ್ಲಿ ಮಾನವ ಹಕ್ಕುಗಳ ಬಗ್ಗೆ ಮೋದಿಯವರಿಗೆ ಕಮಲಾ ಹ್ಯಾರೀಸ್‌ ಒತ್ತಿ ಹೇಳಿದರು” ಎಂದು ‘ಲಾಸ್‌ ಏಂಜೆಲ್ಸ್‌ ಟೈಮ್ಸ್‌’ನ ವರದಿಯ ತಲೆಬರಹವಿದೆ.

ಅಮೆರಿಕದ ನಾಯಕತ್ವ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಅವರು ಭಾರತದ ಪ್ರಧಾನಿ ಮೋದಿಯವರನ್ನು ವೈಟ್‌ ಹೌಸ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿಯಾದರು. ಎರಡು ವರ್ಷಗಳ ಬಳಿಕ ಮೋದಿ ಅಮೆರಿಕಕ್ಕೆ ಭೇಟಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಿನ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರನ್ನು ಹೌಸ್‌ ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಶುಕ್ರವಾರದ ಭೇಟಿಯಲ್ಲಿ ಎರಡೂ ದೇಶದ ನಾಯಕರು ಒಟ್ಟಿಗೆ ಮುನ್ನಡೆಯುವ ಮಾತುಕತೆ ನಡೆಸಿದರು.

“ಎರಡು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಿಗೆ ಸಾಗಬೇಕಿದೆ. ಇದು ಇಡೀ ಜಗತ್ತಿಗೆ ಸಹಕಾರಿಯಾಗಲಿದೆ” ಎಂದು ಅವರು ಹೇಳಿದ್ದಾರೆ. ಕೋವಿಡ್‌‌ ಬಿಕ್ಕಟ್ಟನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಒಂದಾಗಿ ಎದುರಿಸುವ ಕುರಿತು ಮಾತನಾಡಿದರು.

ಕೋವಿಡ್‌-19, ಹವಾಮಾನ್ಯ ವೈಪರಿತ್ಯ, ಇಂಡೋ-ಫೆಸಿಪಿಕ್‌ ಇತ್ಯಾದಿ ವಿಷಯಗಳ ಕುರಿತು ಮಾತನಾಡಿದರು.

“ನಮ್ಮ ಪಾಲುದಾರಿಕೆ ನಾವು ಮಾಡಬೇಕೆಂದಿರುವುದಕ್ಕಿಂತ ಮಹತ್ವದ್ದಾಗಿದೆ. ನಾವು ಯಾರೆಂಬುದರ ಕುರಿತಾದ್ದಾಗಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ವೈವಿಧ್ಯತೆಯನ್ನು ಕಾಪಾಡುವ ಹೊಣೆಗಾರಿಯದ್ದಾಗಿದೆ. ಪ್ರತಿದಿನವೂ ಅಮೆರಿಕವನ್ನು ಬಲಿಷ್ಠ ಮಾಡುತ್ತಿರುವ 40 ಲಕ್ಷ ಅನಿವಾಸಿ ಭಾರತೀಯರೊಂದಿಗಿನ ಕೌಟುಂಬಿಕ ಬಾಂಧವ್ಯವಾಗಿದೆ” ಎಂದಿದ್ದಾರೆ.

ಸೌಹಾರ್ದತೆಯ ಅಗತ್ಯತೆಯ ಕುರಿತು ಹೇಳುತ್ತಾ ಮುಂದಿನ ವಾರ ಬರುವ ಗಾಂಧಿ ಜಯಂತಿಯನ್ನು ಬೈಡನ್‌ ಉಲ್ಲೇಖಿಸುತ್ತಾರೆ. “ಮುಂದಿನ ವಾರ ಇಡೀ ಜಗತ್ತು ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಗಾಂಧೀಜಿಯರ ಸಂದೇಶಗಳಾದ ಅಹಿಂಸೆ, ಗೌರವ, ಸಹಿಷ್ಣುತೆಯನ್ನು ನೆನೆಯುವುದು ಇಂದೆಂದಿಗಿಂತಲೂ ಇಂದು ಮುಖ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...