Homeಅಂತರಾಷ್ಟ್ರೀಯಮೋದಿ ಯುಎಸ್‌ ಭೇಟಿ - ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

ಮೋದಿ ಯುಎಸ್‌ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

- Advertisement -
- Advertisement -

ಪ್ರಧಾನಿ ಮೋದಿ ಅವರು ಮೂರು ದಿನದ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಶ್ವೇತಭವನದ ಓವಲ್ ಕಚೇರಿಯಲ್ಲಿ 20 ನಿಮಿಷಗಳ ಕಾಲ ಶುಕ್ರವಾರದಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯಲ್ಲಿ ಉಭಯ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಬಗ್ಗೆ ನಾಯಕರಿಬ್ಬರು ಮಾತನಾಡಿದ್ದಾರೆ. ಆದರೆ ವಿಶೇಷವೇನೆಂದರೆ, ಇಬ್ಬರು ನಾಯಕರು ಪರ್ತಕರ್ತರಿಂದ ಯಾವುದೆ ಪ್ರಶ್ನೆಗಳನ್ನು ಎದುರುಗೊಳ್ಳಲಿಲ್ಲ ಹಾಗೂ ಇದನ್ನು ಮೊದಲೆ ತೀರ್ಮಾನಿಸಲಾಗಿತ್ತು ಎಂದು ದಿವೈರ್‌ ವರದಿ ಮಾಡಿದೆ.

ದಿ ವೈರ್‌ ತನ್ನ ವರದಿಯಲ್ಲಿ, “ಮಾಧ್ಯಮಗಳ ಮುಂದೆ ಶ್ವೇತಭವನದ ಓವಲ್ ಕಚೇರಿಯಲ್ಲಿ 20 ನಿಮಿಷಗಳ ಕಾಲ ಜಂಟಿ ಮಾತುಕತೆಯಿತ್ತು. ಮಾತುಕತೆಯ ಕೊನೆಯಲ್ಲಿ ಯಾವುದೇ ನಾಯಕರು ಯಾವುದೇ ಪ್ರಶ್ನೆಗಳನ್ನು ತೆಗೆದುಕೊಳ್ಳಲಿಲ್ಲ, ಇದನ್ನು ಮೊದಲೆ ತೀರ್ಮಾನಿಸಲಾಗಿತ್ತು” ಎಂದು ಹೇಳಿದೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಪ್ರಧಾನಿ ಮೋದಿ ಅವರು, 2015 ರಲ್ಲಿ ಲಂಡನ್‌ನಲ್ಲಿ ಯುಕೆ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ಭೇಟಿಯಾದಾಗ ಪತ್ರಕರ್ತರು ಪ್ರಶ್ನಿಸಿದ್ದರು. ಅದರ ನಂತರ ಮೋದಿ ಯಾವುದೆ ಪತ್ರಿಕಾಗೋಷ್ಠಿಗೆ ಒಪ್ಪಿಕೊಂಡಿಲ್ಲ” ಎಂದು ದಿ ವೈರ್‌ ಹೇಳಿದೆ.

ಈ ಮಾತುಕತೆಗೂ ಮೊದಲು ಜೋ ಬಿಡೆನ್ ಅವರು, ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಹೇಳಿದ್ದಾರೆ.

ಮಾತುಕತೆಗೆ ಶುರು ಮಾಡುವುದಕ್ಕಿಂತ ಮುಂಚೆಯೆ ಶುಭಾಶಯ ವಿನಿಮಯ ಮಾಡಿಕೊಂಡ ಬಿಡನ್, “ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮವಾಗಿ ನಡೆದುಕೊಳ್ಳುತ್ತವೆ. ನಿಮ್ಮ ಅನುಮತಿಯೊಂದಿಗೆ ಹೇಳುವುದಾದರೆ… ನೀವು ಅವರಿಗೆ(ಮಾಧ್ಯಮ) ಉತ್ತರಿಸುವ ಅಗತ್ಯವೆ ಇರುವುದಿಲ್ಲ, ಯಾಕೆಂದರೆ ಅವರು ನಿಮಗೆ ಪ್ರಶ್ನೆಯೆ ಕೇಳುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...