Homeಮುಖಪುಟಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ....

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರನ್ನು ಗುರುತಿಸಲು, ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕ್ಲಬ್‌ಹೌಸ್‌ನಲ್ಲಿ ಅನುಭವ ಮಂಟಪ ಕ್ಲಬ್‌ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರ ಅಭ್ಯಂತರವೇನಾದರೂ ಇದೆಯೇ?’ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಭಾರತದ ದೇಶದಲ್ಲಿ ಐದಾರು ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಯಾರು ಮುಖ್ಯಮಂತ್ರಿ ಎಂಬುದಕ್ಕಿಂತ ದಲಿತರ ಪರವಾಗಿ ಕೆಲಸ ಮಾಡುವವರು ಮುಖ್ಯವಾಗುತ್ತಾರೆ. ಮೊದಲನೇ ಬಾರಿಗೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಖರ್ಚು ಮಾಡಲು ಮುಂದಾಗಿದ್ದು ನಮ್ಮ ನೇತೃತ್ವದ ಸರ್ಕಾರ” ಎಂದು ತಿಳಿಸಿದರು.

ಬಜೆಟ್‌ನಲ್ಲಿ ಶೇ. 24ರಷ್ಟು ಹಣವನ್ನು ಎಸ್‌ಸಿಪಿ, ಟಿಎಸ್‌ಪಿಗೆ ಹಣ ಖರ್ಚು ಮಾಡಬೇಕು ಎಂದು ನಾವು ಕಾನೂನು ಮಾಡಿದೆವು. ಒಂದು ವರ್ಷಕ್ಕೆ ಮೂವತ್ತು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ಕೆಲಸವನ್ನು ನಾನು ಕೊನೆಯ ಬಜೆಟ್‌ ಮಂಡಿಸಿದಾಗ ಮಾಡಿದ್ದೇನೆ. ಸುಪ್ರೀಂ ಕೋರ್ಟ್‌ ಬಡ್ತಿ ರದ್ದು ಮಾಡಿದಾಗ ಅಹಿಂಸಾ ಸಂಘಟನೆಯ ತೀವ್ರ ವಿರೋಧದ ನಡುವೆಯೂ ಕಾನೂನು ರೂಪಿಸಿ ದಲಿತರಿಗೆ ರಕ್ಷಣೆ ನೀಡಿದ್ದು ನಮ್ಮ ಸರ್ಕಾರ. ದಲಿತರಿಗೆ ಮೊದಲ ಬಾರಿಗೆ ಇಡೀ ದೇಶದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ದಲಿತರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯವಿದೆ ಹೊರತು ಬೇರೆ ಪಕ್ಷಗಳಲ್ಲಿ ಅಲ್ಲ. ಈಗ ಪಂಜಾಬ್‌ನಲ್ಲಿ ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆಂಧ್ರದಲ್ಲಿ ಸಂಜೀವಯ್ಯನವರು ಮುಖ್ಯಮಂತ್ರಿ ಆಗಿದ್ದರು. ಹೀಗೆ ಬೇರೆ ಬೇರೆ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದರು.

 ‘ಕರಾವಳಿಯಲ್ಲಿ ಕೋಮುಗಲಭೆ ತಡೆಯುವಲ್ಲಿ ಹಿನ್ನಡೆಯಾಯಿತು’

‘ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಒಂದು ಹುಡುಗ, ಒಂದು ಹುಡುಗಿ ಒಂದು ಕಡೆ ನಿಂತು ಮಾತನಾಡುತ್ತಿದ್ದರೆ, ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಸುದ್ದಿ ಮುಟ್ಟಿಸಿ ಆ ಜೋಡಿಗಳಿಗೆ ತೊಂದರೆ ನೀಡುವ ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಪ್ರವೃತ್ತಿಯ ಕಡಿವಾಣಕ್ಕೆ ಕಠಿಣ ಕ್ರಮ ಜರುಗಿಸದಿರುವುದೂ ಇದಕ್ಕೆ ಕಾರಣವೇ?’ ಎಂದು ಶ್ರೀನಿವಾಸ ಕಾರ್ಕಳ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ಕರಾವಳಿ ಭಾಗವು ಕೋಮುವಾದದ ಪ್ರಯೋಗಾಲಯ ಎಂಬುದು ಸತ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರಾವಳಿಯಲ್ಲಿ ಕೋಮುಗಲಭೆಗಳನ್ನು ತಡೆಯುವಲ್ಲಿ ಹಿನ್ನಡೆಯಾಯಿತು ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಹಾಗೆಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಕುರಿತು ಯಾವುದೇ ಭಯವೇನೂ ಇಲ್ಲ ಎಂದರು.

ಬಜರಂಗದಳದ ಮಾಜಿ ಮುಖಂಡ ಸುನಿಲ್‌ ಬಜಿಲಕೇರಿಯವರು ಮಾತನಾಡಿ, “ವಿನಾಯಕ ಬಾಳಿಗ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದರು. ವಿನಾಯಕ ಬಾಳಿಗ ಪ್ರಕರಣಕ್ಕೆ ನ್ಯಾಯ ದೊರಕಿಸಿದರೆ ಕಾಂಗ್ರೆಸ್‌ಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಜನರು ಬೆಂಬಲ ನೀಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕರಾವಳಿ ಭಾಗದ ಜನರು ಹೆಚ್ಚಿನ ಉದ್ಯೋಗ ಪಡೆಯುವರು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸ್ಮರಿಸುವರು” ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಕಾಂಗ್ರೆಸ್ ಯಾವುದೇ ಸಮುದಾಯದ ವಿರುದ್ಧವೂ ಇಲ್ಲ, ಪರವೂ ಇಲ್ಲ. ಯಾರಿಗೆ ಅನ್ಯಾಯವಾದರೂ ಕಾಂಗ್ರೆಸ್ ಪ್ರಶ್ನಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಎಲ್ಲರಿಗೂ ಉದ್ಯೋಗ ಕೊಡಬೇಕಲ್ಲವೇ? ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ನಡೆಸಲು ಅವಕಾಶ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದರು.

ನಾನು ಎಡಪಂಥೀಯ, ಹೀಗಾಗಿ ಅವರು ದ್ವೇಷಿಸುತ್ತಾರೆ

‘ನೀವು ಮುಖ್ಯಮಂತ್ರಿಯಾದಾಗಿನಿಂದಲೂ ನಿಮ್ಮ ಮೇಲೆ ಬಲಪಂಥೀಯರು ದ್ವೇಷ ಕಾರುವುದು ನಡೆಯುತ್ತಿದೆ. ನಿಮ್ಮನ್ನು ಈ ಪರಿಯಾಗಿ ದ್ವೇಷಿಸಲು ಕಾರಣವೇನು?” ಎಂದು ಹರ್ಷಕುಮಾರ್‌ ಕುಗ್ವೆಯವರು ಕೇಳಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, “ಇದು ಬಹಳ ಸರಳವಾಗಿದೆ. ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು. ಪರಸ್ಪರ ಪ್ರೀತಿಸುವುದೇ ಮನುಷ್ಯತ್ವ.ಪರಸ್ವರ ಗೌರವಿಸುವುದೇ ಮನುಷ್ಯತ್ವ. ಮನುಷ್ಯತ್ವ ಇರದಿರುವವರು ದ್ವೇಷಿಸುತ್ತಾರೆ. ಹೀಗಾಗಿ ದ್ವೇಷ ಮಾಡುವವರನ್ನು ನಾನು ಪ್ರೀತಿಸುತ್ತೇನೆ” ಎಂದರು.

ಹಲವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ನಾಯಕರು ಆರ್‌‌ಎಸ್‌ಎಸ್‌ ಕೈಗೊಂಬೆಗಳಾಗಿದ್ದಾರೆ ಎಂದರು. ‘ಎನ್‌ಇಪಿ’ ಶಿಕ್ಷಣ ವ್ಯವಸ್ಥೆಗೆ ಮಾರಕ. ಅದು ನಾಗಪುರ ಎಜುಕೇಷನ್‌ ಪಾಲಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಟೀಕಿಸಿದರು.

‘ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ವಸತಿ ನಿರ್ಮಾಣ ಯೋಜನೆ ಪ್ರಗತಿಯನ್ನು ಸಾಧಿಸಿಲ್ಲ’ ಎಂದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಪ್ರಸಾರವಾಯಿತು. ಸುಮಾರು 1500 ಮಂದಿ ಕ್ಲಬ್‌ಹೌಸ್‌ನಲ್ಲಿ ಸಿದ್ದರಾಮಯ್ಯನವರ ಮಾತುಗಳನ್ನು ಆಲಿಸಿದರು. ಸಾವಿರಾರು ಜನರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಮಾತುಗಳನ್ನು ಆಲಿಸಿದರು.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...