Homeಮುಖಪುಟಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

- Advertisement -
- Advertisement -

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

“ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏಳು ವರ್ಷ ಆಯಿತು. ಹದಿನಾಲ್ಕು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡಬೇಕಿತ್ತು. ನಾನು ನಿಮ್ಮಲ್ಲಿ ಸರ್ಕಾರದ ಉದ್ಯೋಗವನ್ನು ಕೊಡಿ ಎಂದು ಕೇಳುತ್ತಿಲ್ಲ. ಖಾಸಗಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಅವಕಾಶ ಸರ್ಕಾರಕ್ಕೆ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಜನ, ನಮ್ಮ ಯುವಕರು, ಪದವಿ ಪಡೆದವರು ಉದ್ಯೋಗವಿಲ್ಲದೆ ಹಳ್ಳಿಗಳಲ್ಲಿ ನರೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸರ್ಕಾರ ಆರ್ಥಿಕವಾಗಿ ಸಹಾಯವನ್ನು ಕೊಡಬೇಕಾಗಿದೆ. ಆದರೆ ಬಂಡವಾಳಶಾಹಿಗಳಿಗೆ ಮಾತ್ರ ಅನೇಕ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ನಗರಗಳಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದ್ದವರಿಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ಸರ್ಕಾರ ಇಂತಹ ವಿಚಾರಗಳಲ್ಲಿ ಯಾವ ದಿಕ್ಕಿನಲ್ಲಿ ಹೋಗಬೇಕು? ಉದ್ಯೋಗಗಳನ್ನು ಸೃಷ್ಟಿ ಮಾಡಲಿಕ್ಕೆ, ಕೈಗಾರಿಕೆಗಳನ್ನು ತರಲಿಕ್ಕೆ, ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳನ್ನು ಜನರಿಗೆ ಕೊಡಲಿಕ್ಕೆ ಯಾವೆಲ್ಲ ರೀತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ನಿಮ್ಮ ಸಲಹೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನಲ್ಲಿ ತಿಳಿಸಿರಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಬಿಕ್ಕಟ್ಟೆಂದು ಘೋಷಿಸಿ ಬಿಡಗಾಸೂ ನೀಡಿಲ್ಲ: ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್‌ ಅವರು ಮೂರನೇ ಕಂತಿನಲ್ಲಿ ‘ಕೋವಿಡ್‌ ಪರಿಹಾರ’ ಕುರಿತು ಪ್ರಸ್ತಾಪಿಸಿದ್ದರು. “ಮಳೆ ಹೆಚ್ಚಾದಾಗ, ಭೂಕಂಪವಾದಾಗ ಯಾವುದೇ ಸಂದರ್ಭಗಳಲ್ಲಿ ಸರ್ಕಾರ ಪರಿಹಾರಗಳನ್ನು ಘೋಷಣೆ ಮಾಡಿದೆ. ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸರ್ಕಾರ ಬಿಡುಗಾಸು ಪರಿಹಾರ ನೀಡಿಲ್ಲ. ಕೋವಿಡ್‌ನಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ. ಸರ್ಕಾರವೇ ನಂಬರ್‌ ಬಿಡುಗಡೆ ಮಾಡಿದೆ. ಒಬ್ಬರಿಗೂ ಪರಿಹಾರ ನೀಡಿಲ್ಲ” ಎಂದು ಟೀಕಿಸಿದ್ದರು.

ಎರಡನೇ ಕಂತಿನಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡುತ್ತಾ, “ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದಿದ್ದರು.

ಮೊದಲ ಕಂತಿನಲ್ಲಿ ‘ಎನ್‌ಇಪಿಯನ್ನು ನಾಗಪುರ ಎಜುಕೇಷನ್‌ ಪಾಲಿಸಿ’ ಎಂದು ವಿಶ್ಲೇಷಿಸಿದ್ದರು.


ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...