Homeಮುಖಪುಟಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

ಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

- Advertisement -
- Advertisement -

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

ಖಾಲಿ ಇರುವ 25 ಲಕ್ಷ ಉದ್ಯೋಗಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಶುಕ್ರವಾರ ಚಾಲನೆ ಪಡೆದಿದೆ.

‘ಛಾತ್ರ್ ಯುವ ರೋಜ್‌‌ಗಾರ್‌ ಅಧಿಕಾರ್‌ ಮೋರ್ಚಾ’ ಸಂಘಟನೆಯ ನೇತೃತ್ವದಲ್ಲಿ ಚಳವಳಿಗೆ ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಸರ್ಕಾರವನ್ನು ಎಚ್ಚರಿಸಲು ಪ್ರಭಾವ ಬೀರಲು ಸಂಘಟಕರು ಮುಂದಾಗಿದ್ದಾರೆ. ಲಕ್ನೋದಲ್ಲಿ ಸೆ. 24ರಂದು ‘ರೋಜ್‌ಗಾರ್‌ ಅಧಿಕಾರ್‌ ಸಮ್ಮೇಳನ’ ನಡೆದಿದೆ. ಈ ಸಮ್ಮೇಳನದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರೂ ಪಾಲ್ಗೊಂಡಿದ್ದು, “ಘನತೆಯ ಜೊತೆಗೆ ಉದ್ಯೋಗ”, ಪ್ರತಿಯೊಬ್ಬ ಯುವಜನರಿಗೂ ಶಿಕ್ಷಣವೆಂಬುದು “ಮೂಲಭೂತ ಹಕ್ಕು” ಎಂದು ಬಿಜೆಪಿ ನೇತೃತ್ವದ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

ಬಿಹಾರದ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕ ಮನೋಜ್‌ ಮನ್ಜಿಲ್‌, ಸಾಮಾಜಿಕ ಚಳವಳಿಗಳನ್ನು ದಮನ ಮಾಡುವ ಉತ್ತರ ಪ್ರದೇಶದ ಸರ್ಕಾರದ ಪ್ರವೃತ್ತಿಯನ್ನು ಖಂಡಿಸಿದ್ದಾರೆ. “ದೇಶದ ಯುವಜನರ ನಿರುದ್ಯೋಗಕ್ಕೆ ಶೇ. 10ರಷ್ಟು ಕೊಡುಗೆ ಉತ್ತರ ಪ್ರದೇಶದ್ದಾಗಿದೆ. ಲಾಕ್‌ಡೌನ್‌ ಜಾರಿಯಿಂದಾಗಿ ದೊಡ್ಡ ಮಟ್ಟದ ಉದ್ಯೋಗ ನಷ್ಟ ಉಂಟಾಗಿದೆ” ಎಂದಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ರಾಷ್ಟ್ರೀಯ ಸಂಯೋಜಕಿ ಸದಫ್‌ ಜಫಾರ್‌ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ್ದು, “ಯುವಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದಿದ್ದಾರೆ.

ಮುಂದುವರಿದು, “ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಮಾರಿ ಹಣವನ್ನು ಹೊಂದಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸೆಂಟ್ರಲ್‌ ವಿಸ್ತಾ ಥರದ ಅಪ್ರಯೋಜಕ ಯೋಜನೆಗಳಿಗೆ ಹಣವನ್ನು ವಿನಿಯೋಗಿಸುತ್ತಿದೆ” ಎಂದು ಕುಟುಕಿದ್ದಾರೆ.ಆಮ್‌ ಆದ್ಮಿ ಪಾರ್ಟಿಯ ಪ್ರೊ.ಡಿ.ಎನ್‌.ಎಸ್‌.ಯಾದವ್‌ ಅವರು, ಪ್ರಜೆಗಳ ಮೂಲಭೂತ ಹಕ್ಕುಗಳ ಕುರಿತು ಬೆಳಕು ಚೆಲ್ಲಿದ್ದಾರೆ. “ಜನರಿಂದ ಆಯ್ಕೆಯಾದ ಸರ್ಕಾರವನ್ನು ನಿರುದ್ಯೋಗದ ಕುರಿತು ಪ್ರಶ್ನಿಸುವುದು ದೇಶದ ಪ್ರತಿಯೊಬ್ಬ ಯುವಜನರ ಕರ್ತವ್ಯ” ಎಂದಿದ್ದಾರೆ. “ನಿರುದ್ಯೋಗ ಕುರಿತ ಅಂಕಿ-ಅಂಶಗಳನ್ನು ಸರ್ಕಾರ ಮುಚ್ಚಿಡುತ್ತಿದೆ. ಉದ್ಯೋಗ ಸರ್ವೇ ನಡೆಸುವುದನ್ನು ಕಾರ್ಮಿಕ ಸಚಿವಾಲಯ ನಿಲ್ಲಿಸಿದೆ. ದೇಶದಲ್ಲಿ ಉದ್ಯೋಗನಾಶದ ಕುರಿತು ಕುರುಹುಗಳನ್ನು ನಾಶಪಡಿಸಲು ಸರ್ಕಾರ ಮುಂದಾಗಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಸಿದ್ಧ ವಿಮರ್ಶಕ ವೀರೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, “ನಿರುದ್ಯೋಗ ವಿರುದ್ಧದ ಚಳವಳಿ ದೇಶವನ್ನು ಕಾಪಾಡುವ ಹೋರಾಟವಾಗಿದೆ” ಎಂದು ಬಣ್ಣಿಸಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸೂರ್ಯ ಪ್ರತಾಪ್‌ ಮಾತನಾಡಿ, “ಈ ಚಳವಳಿ ಸರ್ಕಾರವನ್ನು ಬದಲಿಸುವುದಕ್ಕೆ ಸಂಬಂಧಿಸಿದ್ದಲ್ಲ. ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ್ದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ ಕೃಪೆ: ದಿ ವೈರ್‌

ಇದನ್ನೂ ಓದಿರಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...