Homeಚಳವಳಿಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಹಲವು ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ಸೂಚಿಸಿವೆ. ಅವುಗಳ ಪಟ್ಟಿ ಇಲ್ಲಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್‌ಗೆ  ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಎಡಪಕ್ಷಗಳು ಈಗಾಗಲೇ ಬೆಂಬಲವನ್ನು ಘೋಷಿಸಿವೆ.

ವೈಎಸ್ಆರ್ ಕಾಂಗ್ರೆಸ್

ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರೈತರು ಕರೆ ನೀಡಿರುವ ಸೆಪ್ಟೆಂಬರ್ 27 ಭಾರತ್ ಬಂದ್‌ಗೆ ಬೆಂಬನ ನೀಡಿದೆ. ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ಶನಿವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರೈತರ ಪ್ರತಿಭಟನೆಗೆ ಸಂಪೂರ್ನ ಬೆಂಬಲ ನೀಡಿದೆ. ಜೊತೆಗೆ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಖಾಸಗೀಕರಣ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ಕಾಂಗ್ರೆಸ್

ಭಾರತ್ ಬಂದ್‌ಗೆ ತನ್ನ ಬೆಂಬಲ ನೀಡಿರುವ ಕಾಂಗ್ರೆಸ್, ಪ್ರತಿಭಟನಾಕಾರರೊಂದಿಗೆ ಸರ್ಕಾರ ಚರ್ಚೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದೆ.

“ಶಾಂತಿಯುತ” ಮುಷ್ಕರಕ್ಕೆ ಕರೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್, ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಗಳು ನೀಡಿದ ಭಾರತ್ ಬಂದ್‌ಗೆ ಪಕ್ಷ ಮತ್ತು ಅದರ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ. ಪ್ರತಿ ರೈತನಿಗೂ ಎಮ್‌ಎಸ್‌ಪಿಯನ್ನು ಕಾನೂನುಬದ್ಧ ಹಕ್ಕಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷ

ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಹ ಬೆಂಬಲ ನೀಡಿದೆ. ರೈತರಿಗೆ ಒಗ್ಗಟ್ಟಿನ ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಪಕ್ಷವು ಬೆಂಬಲವನ್ನು ಘೋಷಿಸಿದೆ ಎಂದು ಎಎಪಿ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವು ರೈತರ ದೆಹಲಿ ಚಲೋ ಆರಂಭವಾದಾಗಿನಿಂದ ರೈತರಿಗೆ ಬೆಂಬಲವಾಗಿ ನಿಂತಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ತೆಲುಗು ದೇಶಂ ಪಕ್ಷ ಮತ್ತು ಎಡಪಕ್ಷಗಳು

ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (ಸಿಪಿಐ) ಕಚೇರಿಯಲ್ಲಿ ಎಡ ಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಯಿಂದ ಸಭೆ ನಡೆದಿದೆ.

ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದ್ದರು.

ಜಂಟಿ ಹೇಳಿಕೆಯಲ್ಲಿ, ಎಡಪಕ್ಷಗಳಾದ ಸಿಪಿಐ, ಸಿಪಿಐ (ಎಂ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನಿಸ್ಟ್)-ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವಂತೆ ಜನರನ್ನು ಕೋರಿದೆ.

ಆರ್‌ಜೆಡಿ ನಾಯಕ ತೇಜಶ್ವಿ ಯಾದವ್

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸೆಪ್ಟೆಂಬರ್ 27 ರಂದು ಭಾರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಗೆ ಬೆಂಬಲ ನೀಡಿದ್ದಾರೆ.

ಕೇರಳ ಸರ್ಕಾರ: ಎಲ್‌ಡಿಎಫ್ 

ಕೇರಳದ ಆಡಳಿತಾರೂಢ ಎಲ್‌ಡಿಎಫ್ ಕೂಡ ರೈತರಿಗೆ ಬೆಂಬಲ ಸೂಚಿಸಲು, ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತಿರುವನಂತಪುರಂನಲ್ಲಿ ಆಡಳಿತ ಪಕ್ಷದ ಮೈತ್ರಿಕೂಟದ ನಾಯಕರ ಸಭೆಯ ನಂತರ ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ ವಿಜಯರಾಘವನ್ ಬೆಂಬಲ ಘೋಷಿಸಿರುವುದಾಗಿ ಹೇಳಿದ್ದಾರೆ.

“ಪ್ರತಿಭಟನೆಯಲ್ಲಿ ಐದು ಲಕ್ಷ ಜನರು ಭಾಗವಹಿಸಲಿದ್ದಾರೆ. ಸಾರಿಗೆ ನೌಕರರು, ಬ್ಯಾಂಕ್ ಉದ್ಯೋಗಿಗಳು ಮತ್ತು ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಹೆಚ್ಚು ಸಂಘಟನೆಗಳು ಎಲ್‌ಡಿಎಫ್ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡಿವೆ” ಎಂದು ವಿಜಯರಾಘವನ್ ಹೇಳಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) 

“ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ತನ್ನ ಒಗ್ಗಟ್ಟನ್ನು ಘೋಷಿಸುತ್ತದೆ” ಎಂದು SDPI ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಕ್ಷವು ಆರಂಭದಿಂದಲೂ ರೈತರ ಆಂದೋಲನವನ್ನು ಬೆಂಬಲಿಸುತ್ತಿದೆ ಮತ್ತು ಕೃಷಿ ಕಾಯಿದೆಗಳ ವಿರುದ್ಧ ದೇಶದಾದ್ಯಂತ ನೂರಾರು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್)

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷವೂ ಭಾರತ ಬಂದ್ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ. ಕರ್ನಾಟಕದ ಐದು ಎಡ ಪಕ್ಷಗಳು ಮತ್ತು ಎರಡು ಪ್ರಜಾತಾಂತ್ರಿಕ ಪಕ್ಷಗಳು ಹೋರಾಟಕ್ಕೆ ಬೆಂಬಲ ಘೋಷಣೆ ಮಾಡಿ, ರಾಜ್ಯದಾದ್ಯಂತ ಸೆ.24ರಂದು ಸೌಹಾರ್ದ ಪ್ರದರ್ಶನ ನಡೆಸಿವೆ.

ಸ್ವರಾಜ್ ಇಂಡಿಯಾ

ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ ಪಕ್ಷವೂ ರೈತ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ

ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ಅವರ ಕರ್ನಾಟಕ ರಾಷ್ಟ್ರ ಸಮಿತಿಯು ಭಾರತ್ ಬಂದ್‌ಗೆ ಬೆಂಬಲ ನೀಡಿದೆ.

ಬ್ಯಾಂಕ್ ಅಧಿಕಾರಿಗಳ ಸಂಘ

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಅಲ್‌ಬಿಒಸಿ) ಸೋಮವಾರ ನಡೆಯಲಿರುವ ಭಾರತ್ ಬಂದ್‌ಗೆ ತನ್ನ ಬೆಂಬಲವನ್ನು ನೀಡಿದೆ. ರೈತರ ಬೇಡಿಕೆಗಳ ಕುರಿತು ಒಕ್ಕೂಟ ಸರ್ಕಾರ ಸಂವಾದ ನಡೆಸಬೇಕು ಮತ್ತು   ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದೆ.

ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಜನಪರ ಸಂಘಟನೆಗಳು ಸೇರಿದಂತೆ ಹಲವು ವಿವಿಧ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೈತರ ಕರೆಗೆ ಸಂಪೂರ್ಣ ಬೆಂಬಲ ಜೈ ಜವಾನ್ ಜೈ ಕಿಸಾನ್

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...