Homeಮುಖಪುಟನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ನಾಳೆ ಭಾರತ್ ಬಂದ್: ನೀವು ತಿಳಿದಿರಬೇಕಾದ 10 ಅಂಶಗಳು

ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10 ತಿಂಗಳು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಹೋರಾಟ ತೀವ್ರಗೊಳಿಸಲು ಸೆ.27ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿದ್ದು ಕರ್ನಾಟಕದಲ್ಲಿಯೂ ಬಂದ್ ನಡೆಸಲು ರೈತರಿಗೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿವೆ.

1. ಬಂದ್ ಬೆಂಬಲಿಸಿದ ಸಂಘಟನೆಗಳು

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ರಾಜ್ಯದಲ್ಲಿ ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ದಸಸಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕಾರ್ಮಿಕ ಸಂಘಟನೆಗಳ ಯೂನಿಯನ್, ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ದಲಿತ ಹಕ್ಕುಗಳ ಸಮಿತಿ, ಕಾಂಗ್ರೆಸ್, ಎಸ್.ಡಿ.ಪಿ.ಐ, CITU, RYFI, ಭೂಮಿ‌ ಮತ್ತು ವಸತಿ ಹೋರಾಟ ಸಮಿತಿ, ದಲಿತ ಹಿತರಕ್ಷಣಾ ಒಕ್ಕೂಟ, ಬಿಎಸ್ಪಿ, ಸಿಪಿಐಎಂಎಲ್(ರೆಡ್ ಸ್ಟಾರ್), ಆಮ್ ಆದ್ಮಿ ಪಕ್ಷ, ಅಖಿಲ ಭಾರತ ವಕೀಲರ ಒಕ್ಕೂಟ, ಖಾಸಗಿ ಶಾಲೆಗಳ ಆಡಳಿತ ಮಂಡಳಿ  ಮತ್ತು ಎಪಿಎಂಸಿ ವರ್ತಕರ ಸಂಘಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.

2. ನೈತಿಕ ಬೆಂಬಲ ಘೋಷಿಸಿದ ಸಂಘಟನೆಗಳು

ಅಲ್ಲದೆ, ಹೋಟೆಲ್‌ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ವಕೀಲರ ಸಂಘಗಳು ಭಾರತ್‌ ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

3. ಸಾರಿಗೆ ಸೌಲಭ್ಯಗಳು ಕಾರ್ಯಾಚರಣೆ ಮಾಡಲಿವೆ

ಆದರೆ, ಕೊರೊನಾ, ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವುದಿಲ್ಲ. ಲಾರಿಗಳು, ಆಟೋ, ಟ್ಯಾಕ್ಸಿ, ಓಲಾ, ಉಬರ್‌ಗಳು ರಸ್ತೆಗಿಳಿಯಲಿವೆ. ನೈತಿಕವಾಗಿ ಬಂದ್‌ಗೆ ಬೆಂಬಲವಿದೆ ಎಂದು ಸಂಘಟನೆಗಳು ತಿಳಿಸಿವೆ.

4. ಬಸ್‌ ಸಂಚಾರ

ಇನ್ನು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲುಗಳ ಸಂಚಾರ ಇರಲಿದೆ. ಸರ್ಕಾರಿ ಸಂಸ್ಥೆಗಳು, ಬ್ಯಾಂಕುಗಳು, ಶಾಲಾ-ಕಾಲೇಜುಗಳು ತೆರೆದಿರುತ್ತವೆ.

5. ಹೆದ್ದಾರಿ ತಡೆ

ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿಯೂ ವಿವಿಧ ಹೆದ್ದಾರಿಗಳು ತಡೆಯಲು ಸಂಘಟನೆಗಳು ಮುಂದಾಗಿವೆ. ಆದರೆ, ಬೆಂಗಳೂರಿನಲ್ಲಿ ರಸ್ತೆ ತಡೆಗೆ ಅವಕಾಶ ಕೊಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ.

6. ಮೌರ್ಯ ಸರ್ಕಲ್ ಬಳಿ ಧರಣಿ

ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ದಿನವೀಡಿ ಧರಣಿ ನಡೆಯಲಿದೆ.

7. ಟೌನ್‌ ಹಾಲ್‌ನಿಂದ ಮೆರವಣಿಗೆ

ಸೋಮವಾರ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್​ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ ವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದಿಂದ ರೈತರನ್ನು ಬೆಂಬಲಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

8. ಬದಲಿ ಮಾರ್ಗ ಸೂಚನೆ

ರೈತರ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌, ಫ್ರೀಡಂ ಪಾರ್ಕ್‌, ಆನಂದ್‌ ರಾವ್ ಸರ್ಕಲ್‌ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

9. ಕಪ್ಪು ಪಟ್ಟಿ ಧರಿಸಿ ಬೆಂಬಲ

ಬಹಳಷ್ಟು ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಬಂದ್ ಬೆಂಬಲಿಸಲು ನಿರ್ಧರಿಸಿದ್ದಾರೆ.

10. ಸಾಹಿತಿ, ಹೋರಾಟಗಾರರ ಬೆಂಬಲ

‘ಇದು ಕೇವಲ ರೈತರ ಬೇಡಿಕೆಯಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದಿರುವ ಸಾಹಿತಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...