Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...