Homeಕರ್ನಾಟಕಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

’ಸುಳ್ಳಿನ ಕಂತೆಗಳನ್ನು ಸೃಷ್ಟಿ ಮಾಡಿ ಮುಗ್ಧ ಜನರ ತಲೆಗೆ ತುಂಬುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕ ಸಾಥ್, ಸಬ್ ಕ ವಿಕಾಸ್ ಎನ್ನುತ್ತಾರೆ, ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

’ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು ಮಾಡಿದ್ದುಣ್ಣೋ ಮಹರಾಯ’ ಎಂದು ಯಡಿಯೂರಪ್ಪ ಅವರನ್ನು ಟೀಕಿಸಿದ್ದಾರೆ.

’ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ, ಬಡವರಿಗೆ ಉಚಿತವಾಗಿ ತಲಾ 7 ಕೆ.ಜಿ ಅಕ್ಕಿ ನೀಡಿದ್ದು ನಮ್ಮ ಸರ್ಕಾರ. ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗಲು ಬಿಜೆಪಿ ಸರ್ಕಾರಕ್ಕೆ ಮನಸಿಲ್ಲ. ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಾರೆ. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ನೀಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಗುಲಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಕಟ್ಟೆಚ್ಚರ, ರಾಜ್ಯದಲ್ಲಿ 2 ದಿನ ಮಳೆ

’ಆರ್‌ಎಸ್‌ಎಸ್‌ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ. ಇಷ್ಟೇ ಅವರ ದೇಶಭಕ್ತಿ. ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವ ಹಾಗೆ ನಾಟಕವಾಡಲು ಆರಂಭಿಸಿದ್ದಾರೆ” ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

’ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬಾ ಬಟ್ಟೆ ಮತ್ತು ಹೊಟ್ಟೆ ತುಂಬಾ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‌ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ’ ಎಂದಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...