Homeಮುಖಪುಟಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್

ಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್

ಇಂದು (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ಈಗಾಗಲೇ ಹಲವು ಪಕ್ಷಗಳು, ಸಂಘಟನೆಗಳು ಓಗೊಟ್ಟಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಅನ್ನದಾತರ ಪರ ನಿಂತಿವೆ.

- Advertisement -
- Advertisement -

ಬೆಂಗಳೂರು: ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ಈಗಾಗಲೇ ಹಲವು ಪಕ್ಷಗಳು, ಸಂಘಟನೆಗಳು ಬೆಂಬಲಿಸಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಅನ್ನದಾತರ ಪರ ನಿಂತಿವೆ.

”ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ.

ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಠ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಅವರು ಕಿಡಿಕಾರಿದ್ದಾರೆ.

ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜನಪರ ಬಂದ್‌‌ಗೆ ಜೆಡಿಎಸ್ ಬೆಂಬಲ ಇರಲಿದೆ: ಎಚ್‌ಡಿಕೆ

‘ಜನಪರ, ರೈತ ಮತ್ತು ಶ್ರಮಿಕರ ಪರವಾದ ಯಾವುದೇ ಪ್ರತಿಭಟನೆ ಮತ್ತು ಬಂದ್‌ಗೆ ಜೆಡಿಎಸ್ ಬೆಂಬಲ ಸದಾ ಇರುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, “ಜನಹಿತದಲ್ಲಿ ನಂಬಿಕೆ ಇಟ್ಟು ನಮ್ಮ ಪಕ್ಷ ಕೆಲಸ ಮಾಡುತ್ತದೆ. ಅವರ ಹಿತಕ್ಕೆ ದಕ್ಕೆ ಎದುರಾದರೆ ಎಲ್ಲ ವೇದಿಕೆಗಳಲ್ಲೂ ದನಿ ಎತ್ತುತ್ತದೆ. ಇದರಲ್ಲಿ ಯಾವುದೇ ಮುಲಾಜಿಲ್ಲ” ಎಂದು ಸ್ಪಷ್ಟಪಡಿಸಿದರು.

ಬಂದ್ ಶಾಂತಿಯುತವಾಗಿ ನಡೆಯಲಿ ಹಾಗೂ ರೈತರು, ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸರಕಾರಗಳ ಗಮನ ಸೆಳೆಯಲಿ ಎಂದು ಎಚ್‌ಡಿಕೆ ಆಶಿಸಿದರು.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...