Homeಕರ್ನಾಟಕರೈತರ ಆಕ್ರೋಶ ಸ್ಫೋಟ - ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತ ವಿರೋಧಿ ಧೋರಣೆ ವಿರುದ್ಧ ಸಿಡಿದೆದ್ದ ಕರ್ನಾಟಕ... ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಕ್ತವಾಗಿರುವ ಆಕ್ರೋಶ ನೋಡಿರಿ...

- Advertisement -
- Advertisement -

ರೈತರು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕನ್ನಡ ನಾಡು ಸ್ಪಂದಿಸಿದೆ. ವಿವಿಧ ಸಂಘಟನೆಗಳು ರಸ್ತೆತಡೆ, ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಕೊಪ್ಪಳದಲ್ಲಿ ಪ್ರತಿಭಟನೆ

***

ಸಂಯುಕ್ತ ಕಿಸಾನ್ ಮೋರ್ಚಾ-ಶಿವಮೊಗ್ಗದಲ್ಲಿ ಬೈಕ್ ರ್‍ಯಾಲಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು, ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಬೈಕ್ ರ್‍ಯಾಲಿ ಹೊರಟು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.
***
ರಸ್ತೆಗೆ ಅಡ್ಡ ಮಲಗಿ ಪ್ರತಿಭಟನೆ
https://twitter.com/naanugauri/status/1442351259906830336
ಮೈಸೂರಿನಲ್ಲಿ ಭಾರತ್ ಬಂದ್ ಅಂಗವಾಗಿ ಬಸ್ ಸಂಚಾರ ಮಾಡದಂತೆ ತಡೆದ ಪ್ರತಿಭಟನಾಕಾರರು..

***

ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ!

ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ಮಾಡಲಾಯಿತು. ಭಾರತ್ ಬಂದ್ ಅಂಗವಾಗಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

***

ಚಿಕ್ಕಬಳ್ಳಾಪುರ ವರದಿ

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ ಅಂಗವಾಗಿ ಅಂಗಡಿ ಮುಂಗಟ್ಟುಗಳನ್ನು ರೈತರು ಮುಚ್ಚಿಸಿದರು.

***

ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಭಾರತ್ ಬಂದ್ ಬೆಂಬಲಿಸಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಲಾಯಿತು. ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳು ಪಾಲ್ಗೊಂಡಿದ್ದವು.

***

ಅಂಗಡಿಗಳನ್ನು ಮುಚ್ಚಿಸಿದ ಹೋರಾಟಗಾರರು

https://twitter.com/naanugauri/status/1442350363491794948

ಹಾಸನದಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಿ ಬಂದ್ ಆಚರಿಸಲಾಯಿತು.
***

ಅಂಬಾನಿ- ಅದಾನಿ ಸ್ಟಾಲ್‌!

ಕೋಲಾರದಲ್ಲಿ ಅಂಬಾನಿ – ಅದಾನಿ ಸ್ಟಾಲ್ ತೆಗೆದು ರೈತರು ಪ್ರತಿಭಟಿಸಿದರು. ಮುಂಜಾನೆ 6 ಗಂಟೆಯಲ್ಲೇ ಪ್ರತಿಭಟನೆ ಆರಂಭವಾಗಿತ್ತು.

***

ಪೊಲೀಸರೊಂದಿಗೆ ಜಟಾಪಟಿ

https://twitter.com/naanugauri/status/1442355063666536450

ಯಾದಗಿರಿಯಲ್ಲಿ ಬಸ್ ತಡೆದು ರೈತರು ಪ್ರತಿಭಟಿಸಿದರು. ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

***

ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ಕಲಬುರಗಿ ವರದಿ

ಕಲಬುರಗಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಭಾರತ್ ಬಂದ್ ಆಚರಣೆ

***

ತುಮಕೂರಿನಲ್ಲಿ ಬೃಹತ್‌ ಮೆರವಣಿಗೆ

ತುಮಕೂರಿನಲ್ಲಿ ಬೃಹತ್ ಮೆರವಣಿಗೆ, ಪ್ರತಿಭಟನೆ ನಡೆಯಿತು. ಭಾರತ್ ಬಂದ್ ಯಶಸ್ವಿಯಾಯಿತು.

ಬಾಗಲಕೋಟೆ ವರದಿ

ಬಾಗಲಕೋಟೆಯಲ್ಲಿ ಬಸ್ ತಡೆದು ಪ್ರತಭಟನೆ, ಭಾರತ್ ಬಂದ್ ಬೆಂಬಲಿಸಿದ ರೈತರು

***

ಪ್ರತಿಭಟನಾಕಾರರ ಮೇಲೆ ಹಲ್ಲೆ

ದಾವಣಗೆರೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತ್ ಬಂದ್ ನಡೆಸದಂತೆ ವಿರೋಧ ವ್ಯಕ್ತಪಡಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

****

ಮೈಸೂರು ವರದಿ

ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

***

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಕರ್ನಾಟಕ ಕಾರ್ಮಿಕ ಪಕ್ಷದ ಪಧಾದಿಕಾರಿಗಳಿಂದ ಭಾರತ್ ಬಂದ್ ಆಚರಣೆ – ಪ್ರತಿಭಟನೆ

***

ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರತ್ ಬಂದ್.. ವಶಕ್ಕೆ ಪಡೆದ ಪೊಲೀಸರು

***

ಬೆಂಗಳೂರಲ್ಲಿ ಜನಸಾಗರ

ಬೆಂಗಳೂರಿನ ಟೌನ್‌ಹಾಲ್‌ ತುಂಬಾ ಜನಸಾಗರ.. ಭಾರತ್ ಬಂದ್‌ಗೆ ಬೆಂಬಲದ ಮಹಾಪೂರ..

***

 ಅರಬೆತ್ತಲೆ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತರು.

***

ಮಳೆಯಲ್ಲಿಯೇ ಪ್ರತಿಭಟನೆ

ಮಡಿಕೇರಿಯಲ್ಲಿ ಮಳೆಯಲ್ಲೂ ಪ್ರತಿಭಟಿಸಿ ಭಾರತ್ ಬಂದ್ ಆಚರಿಸಿದ ಪ್ರಜ್ಞಾವಂತರು…

ಪಾಂಡವಪುರ ವರದಿ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ರೈತರಿಂದ ಬೈಕ್ ರ್‍ಯಾಲಿ ನಡೆಯಿತು.

***

ರಾಯಚೂರು ವರದಿ

ರಾಯಚೂರು ಗ್ರಾಮೀಣ ಶಾಸಕ ದದ್ದಲ ಬಸನಗೌಡ ಅವರು ಭಾರತ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.

***

ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...