ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.
ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು, ಸಂಪರ್ಕ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ಬಂದ್ ಮಾಡಲಾಗಿದೆ. ರಸ್ತೆ ಮತ್ತು ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪಂಜಾಬ್ ನಲ್ಲಿ ರೈತರು 350 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
ಪಂಜಾಬ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಜಿಡಿಪಿ) ಪ್ರತಿಭಟನಾ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯದ ಪೊಲೀಸ್ ಪಡೆಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲ ಪ್ರತಿಭಟನಾ ಸ್ಥಳಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಹರಿಯಾಣದಲ್ಲೂ ಜಿಂದ್ ಜಿಲ್ಲೆಯಲ್ಲಿ 25 ಸ್ಥಳಗಳಲ್ಲಿ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ದೆಹಲಿ-ಗುರ್ಗಾಂವ್ ಗಡಿ (ರಾಜೋಕ್ರಿ) ಗಡಿಯಲ್ಲಿ ಸಂಚಾರ ದಟ್ಟಣೆಯಾಗಿದೆ.
ಬಂದ್ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕೆಲವು ಮಾರ್ಗಗಳನ್ನು ತಡೆದಿದ್ದಾರೆ. ದೆಹಲಿಗೆ ಪ್ರವೇಶಿಸುವ ವಾಹನಗಳ ತೀವ್ರ ತಪಾಸಣೆ ನಡೆಸಿದ್ದಾರೆ.
KMP Expressway blocked by farmers #आज_भारत_बंद_है #FarmersBharatBandh https://t.co/njMJjHRBoE pic.twitter.com/WaOGCYPBzR
— Kisan Ekta Morcha (@Kisanektamorcha) September 27, 2021
ರಾಜಸ್ಥಾನ, ಹರಿಯಾಣ, ಬಿಹಾರ್, ತಮಿಳುನಾಡು, ಜಾರ್ಖಾಂಡ್, ಚಂಡಿಗಢ, ಕೇರಳ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರಾಖಂಡ , ಮಧ್ಯಪ್ರದೇಶ, ಪಂಜಾಬ್, ಉತ್ತರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳಗಳಲ್ಲಿ ರೈತರು ಮತ್ತು ರೈತ ಪರ ಸಂಘಟನೆಗಳು ಬಂದ್ ನಡೆಸುತ್ತಿವೆ.
ಅಮೃತಸರದ ಗುರುನಾನಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವಿವಿ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ.
Guru Nanak Dev University, Amritsar Main Gate blocked by students and employees.#आज_भारत_बंद_है pic.twitter.com/GMsm5rGc3I
— Kisan Ekta Morcha (@Kisanektamorcha) September 27, 2021
Purnea, Bihar#आज_भारत_बंद_है#FarmersBharatBandh pic.twitter.com/9cB4e3ZtL2
— Kisan Ekta Morcha (@Kisanektamorcha) September 27, 2021
ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಕರೆ ನೀಡಿದೆ. ಆದರೆ, ಆಸ್ಪತ್ರೆಗಳು, ಮೆಡಿಕಲ್ಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು, ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುತ್ತದೆ. ಜೊತೆಗೆ ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ರೈತ ಸಂಘಟನೆ ಭರವಸೆ ನೀಡಿದೆ.
#Delhi – संयुक्त किसान मोर्चा के आह्वान पर सिंघु बॉर्डर पर प्रदर्शनकारी कृषि क़ानूनों के विरोध में धरना दे रहे हैं। एक प्रदर्शनकारी ने बताया, "हम सरकार तक अपनी आवाज़ पहुंचाना चाहते हैं। तीनों कृषि क़ानून रद्द किए जाएं।"@OfficialBKU @Kisanektamorcha #BharatBandh #FarmerLaws pic.twitter.com/Q596OIo9Kd
— News1Indiatweet (@News1IndiaTweet) September 27, 2021
ಇದನ್ನೂ ಓದಿ: ಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್