Homeಚಳವಳಿಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

ಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ಒಕ್ಕೂಟ ಸರ್ಕಾರ ಜಾರಿಗೊಳಿಸಿ ಒಂದು ವರ್ಷವಾದ ಹಿನ್ನೆಲೆ ಇಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ವಿಪಕ್ಷ ನಾಯಕರು ಸೇರಿದಂತೆ ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರುಗಳ ವಿವರ ಇಲ್ಲಿದೆ.

ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, “ರೈತರ ಅಹಿಂಸಾತ್ಮಕ ಸತ್ಯಾಗ್ರಹ ಇಂದಿಗೂ ಹಾಗೆಯೇ ನಡೆಯುತ್ತಿದೆ. ಆದರೆ ಶೋಷಣೆ ಮಾಡುತ್ತಿರುವ ಸರ್ಕಾರವು ಇದನ್ನು ಇಷ್ಟಪಡುವುದಿಲ್ಲ. ಹೀಗಾಗಿ ಇಂದು ಭಾರತ್ ಬಂದ್ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ (ಕಾಂಗ್ರೆಸ್)

ಪಂಜಾಬ್ ನೂತನ ಮುಖ್ಯಮಂತ್ರಿ  ಚರಣ್‌ಜಿತ್ ಸಿಂಗ್ ಚನ್ನಿ ರೈತ ಹೋರಾಟಕ್ಕೆ ಬೆಂಬಲಿಸಿ ಕಪ್ಪು ಬಾವುಟ ಹಿಡಿದಿರುವ ಪೋಟೋ ಜೊತೆಗೆ ಟ್ವೀಟ್ ಮಾಡಿದ್ದಾರೆ.

“ನಾನು ರೈತರೊಂದಿಗೆ ನಿಲ್ಲುತ್ತೇನೆ ಮತ್ತು ಕೇಂದ್ರ ಸರ್ಕಾರಕ್ಕೆ ಮೂರು ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಲು ಮನವಿ ಮಾಡುತ್ತೇನೆ. ನಮ್ಮ ರೈತರು ಒಂದು ವರ್ಷದಿಂದಲೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವ ಸಮಯ ಬಂದಿದೆ” ಎಂದಿದ್ದಾರೆ. ಜೊತೆಗೆ ರೈತರು ಶಾಂತಿಯುತವಾಗಿ ತಮ್ಮ ಹಕ್ಕನ್ನು ಕೇಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ರಾಘವ್ ಚಡ್ಡಾ (ಆಪ್)

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಡ್ಡಾ ಕೃಷಿ ಕಾನೂನುಗಳನ್ನು ವಿರೋಧಿಸಿ, ಭಾರತ್ ಬಂದ್‌ಗೆ ಬೆ<ಬಲ ನೀಡಿದ್ದಾರೆ.

“ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಅವರು ಕೇಜ್ರಿವಾಲ್, ಕಪ್ಪು ಕಾನೂನುಗಳ ವಿರುದ್ಧ ರೈತರ ಪರವಾಗಿ ನಿಂತಿದ್ದಾರೆ. ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಂಪೂರ್ಣ ಬೆಂಬಲಿಸುತ್ತಣ” ಎಂದು ವಿಡಿಯೊ ಬಿಡುಗಡೆ ಮಾಡಿದ್ದಾರೆ.

ತೇಜಸ್ವಿ ಯಾದವ್ (ಆರ್‌ಜೆಡಿ)

ಆರ್‌ಜೆಡಿ ನಾಯಕ, ಬಿಹಾರದ ಪ್ರತಿಪಕ್ಷ ನಾಯಕ್ ತೇಜಸ್ವಿ ಯಾದವ್‌ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ರೈತರ ವಬಿರುದ್ಧ ಮಾತನಾಡುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ ಬೆನ್ನೆಲುಬಾಗಿರುವ ರೈತರನ್ನು ಬಡವರನ್ನಾಗಿ ಮಾಡುವ ಮೂಲಕ, ದೇಶವು ಎಂದಾದರೂ ಸಮೃದ್ಧ, ಸಮರ್ಥ, ಬಲಿಷ್ಠವಾಗಲು ಸಾಧ್ಯವೇ..? ಈ ದಾನಿಗಳು ಬೆಳೆದ ಆಹಾರವನ್ನು ನಾವು ತಿನ್ನುತ್ತೇವೆ. ಅದೇ ಬಾಯಿಯಿಂದ ದೇಶದ ರೈತರ ವಿರುದ್ಧ ನಿಂದನಾತ್ಮಕ ಮಾತುಗಳನ್ನು ಮಾತನಾಡಲು ನಾಚಿಕೆಯಾಗುವುದಿಲ್ಲವೇ..?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಲಾಲೂ ಪ್ರಸಾದ್ ಯಾದವ್ (ಬಿಹಾರದ ಮಾಜಿ ಮುಖ್ಯಮಂತ್ರಿ)

ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ಭಾರತವು ಕೃಷಿಕರ ದೇಶವಾಗಿದ್ದು, ರೈತರ ಶ್ರಮದಿಂದ ಬಲವನ್ನು ಪಡೆಯುವ ಮೂಲಕ ದೇಶ ಬೆಳೆಯುತ್ತಿದೆ. ಇದು ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳ ಕ್ರೋನಿ ಕ್ಯಾಪಿಟಲಿಸಂ ಪ್ರಾಬಲ್ಯದ ದೇಶವಲ್ಲ. ಕ್ರೂರ ಬಂಡವಾಳಶಾಹಿ ಎಲ್ಲಾ ಸಂಪತ್ತನ್ನು ಬೆರಳೆಣಿಕೆಯ ಜನರ ಚೀಲದಲ್ಲಿ ಇರಿಸುತ್ತದೆ. ಆದರೆ ರೈತ ಎಲ್ಲರಿಗೂ ಆಹಾರವನ್ನು ಉತ್ಪಾದಿಸುತ್ತಾನೆ. ಅದಕ್ಕಾಗಿಯೇ ನಾವು ರೈತರೊಂದಿಗೆ ಇದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...