Homeಮುಖಪುಟಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಹೊಗಳಿದ ಸ್ಪಲ್ಪ ಸಮಯದಲ್ಲೇ ಗೋವಾ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಲುಯಿಜಿನೊ ಫೆಲೇರೊ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲುಯಿಜಿನೊ ಫೆಲೇರೊ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಸೇರುವ ಸೂಚನೆಗಳಿವೆ. ಅಧಿಕೃತವಾಗಿ ಘೋಷಣೆಯೊಂದೆ ಬಾಕಿಯಿದೆ. ರಾಜೀನಾಮೆ ನೀಡುವ ಮೊದಲು, ಬಿಜೆಪಿಗೆ ಕಠಿಣ ಪೈಪೋಟೆ ನೀಡುವ ಏಕೈಕ ಪ್ರತಿಸ್ಪರ್ಧಿ ಮಮತಾ ಬ್ಯಾನರ್ಜಿ ಎಂದು ಹೊಗಳಿದ್ದರು.

ಮುಂದಿನ ವರ್ಷ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅದಷ್ಟು ಬೇಗ ಘೋಷಿಸಲಾಗುವುದು ಎಂದು ಟಿಎಂಸಿ ತಿಳಿಸಿತ್ತು. ಇದರ ಬೆನ್ನಲ್ಲೇ ಲುಯಿಜಿನೊ ಫೆಲೇರೊ ರಾಜೀನಾಮೆ ನೀಡಿರುವುದು ಅವರು ಟಿಎಂಸಿ ಸೇರುತ್ತಾರೆ ಎಂಬ ವದಂತಿಗೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

“ನಾನು ಹಲವು ಜನರನ್ನು ಭೇಟಿಯಾಗಿದ್ದೇನೆ ಅವರೆಲ್ಲರೂ ನಾನು 40 ವರ್ಷದ ಕಾಂಗ್ರೆಸ್ಸಿಗ ಎಂದು ಹೇಳುತ್ತಾರೆ. ನಾನು ಮುಂದೆಯೂ ಕಾಂಗ್ರೆಸ್ ಕುಟುಂಬದ ಕಾಂಗ್ರೆಸ್ಸಿಗನಾಗಿ ಮುಂದುವರಿಯುತ್ತೇನೆ. ಎಲ್ಲಾ ನಾಲ್ಕು ಕಾಂಗ್ರೆಸ್‌ ಪಕ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಕಠಿಣ ಪೈಪೋಟಿ ನೀಡಿದ್ದಾರೆ. ಪ್ರಧಾನಿ ಮೋದಿ ಬಂಗಾಳದಲ್ಲಿ 200 ಸಭೆಗಳನ್ನು ನಡೆಸಿದ್ದರು. ಅಮಿತ್ ಶಾ 250 ಸಭೆಗಳನ್ನು ನಡೆಸಿದ್ದರು. ನಂತರ ಇಡಿ, ಸಿಬಿಐ ಕೂಡ ಅವರಿಗೆ ಸಹಾಯಕವಾಗಿದ್ದವು. ಆದರೆ ಮಮತಾ ಬ್ಯಾನರ್ಜಿ ಅವರ ಸೂತ್ರ ಗೆದ್ದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಲುಯಿಜಿನೊ ಫಲೇರೋ ಅವರು 2019 ರ ರಾಷ್ಟ್ರೀಯ ಚುನಾವಣೆಗೆ ತ್ರಿಪುರಾದ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಇವರು ಟಿಎಂಸಿ ಸೇರುವುದರಿಂದ ಈಶಾನ್ಯ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಹೆಜ್ಜೆಯಿಡಲು ಮತ್ತು ಬಿಜೆಪಿಯನ್ನು ಹಿಂದಿಕ್ಕಲು ಸಹಾಯಕವಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದ ಮಾಜಿ ಸಂಸದೆ ಸುಶ್ಮಿತಾ ದೇವ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಇತ್ತಿಚೆಗೆ ಟಿಎಂಸಿ ಸೇಪ್ಡೆಯಾಗಿದ್ದರು. ಇದಾದ ಬಳಿಕ ಕಾಂಗ್ರೆಸ್‌ಗೆ ಇದು ಎರಡನೇ ದೊಡ್ಡ ಹೊಡೆತ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದಾಗಿನಿಂದ ಬೇರೆ ಪಕ್ಷಗಳಿಂದ ಟಿಎಂಸಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ.


ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...