Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಮುಖ್ಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್, ಮೋದಿಯವರ ಬಹುದೊಡ್ಡ ಫೋಟೊದೊಂದಿಗೆ “ಭೂಮಿಯ ಕೊನೆಯ ಮತ್ತು ಉತ್ತಮ ಭರವಸೆ” ಎಂಬ ಶೀರ್ಷಿಕೆಯಲ್ಲಿ ಲೇಖನ ಪ್ರಕಟಿಸಿದೆ ಎಂದು ಸ್ಕ್ರೀನ್‌ ಶಾಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವಿಶ್ವದ ಅತ್ಯಂತ ಪ್ರೀತಿಯ ಮತ್ತು ಶಕ್ತಿಶಾಲಿ ನಾಯಕ ನಮ್ಮನ್ನು ಆಶೀರ್ವದಿಸಲು ಇಲ್ಲಿದ್ದಾರೆ” ಎಂಬ ಉಪಶೀರ್ಷಿಕೆಯೊಂದಿಗೆ ಮೋದಿಯವರು ಸಹಿ ಮಾಡುತ್ತಿರುವ ಫೋಟೊವುಳ್ಳ ನ್ಯೂಯಾರ್ಕ್ ಟೈಮ್ಸ್‌ನ ದಿನಾಂಕ 26 ಸೆಪ್ಟೆಂಬರ್ 2021ರ ಆವೃತ್ತಿ ಎಂದು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ.

ಈ ಸ್ಕ್ರೀನ್‌ ಶಾಟ್‌ ಅನ್ನು ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಕಾರ್ಯದರ್ಶಿ ರೋಹಿತ್ ಚಹಾಲ್ ಸೇರಿದಂತೆ ನೂರಾರು ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ, ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ. ವಾಟ್ಸಾಪ್‌ನಲ್ಲಿ ಅತಿ ಹೆಚ್ಚು ಫಾರ್ವಾಡ್ ಆಗಿದೆ.

ಫ್ಯಾಕ್ಟ್‌ ಚೆಕ್:

ಸೆಪ್ಟಂಬರ್ 26 ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಮುಖಪುಟದಲ್ಲಿ ನರೇಂದ್ರ ಮೋದಿ ಕುರಿತಾಗಿ ಯಾವುದೇ ಲೇಖನ ಪ್ರಕಟಿಸಿಲ್ಲ ಮತ್ತು ಅವರ ಫೋಟೊವನ್ನು ಸಹ ಪ್ರಕಟಿಸಿಲ್ಲ. ಈ ಮೇಲಿನ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಯಾರೂ ಪತ್ರಿಕೆಯ URL ವಿವರನ್ನು ಒದಗಿಸಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇದು ಎಡಿಟ್ ಮಾಡಿದ ಫೋಟೊ ಎಂಬುದನ್ನು ತೋರಿಸುತ್ತದೆ.

ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತಾವು ಇದನ್ನು ಪ್ರಕಟಿಸಿಲ್ಲ. ಇದು ಎಡಿಟ್ ಮಾಡಿದ ಫೋಟೊ ಎಂದು ಸ್ಪಷ್ಟೀಕರಣ ನೀಡಿದೆ.

ಸ್ಕ್ರೀನ್ ಶಾಟ್‌ನಲ್ಲಿರುವ ಹೆಡ್‌ಲೈನ್ ಫಾಂಟ್ ನ್ಯೂಯಾರ್ಕ್ ಟೈಮ್ಸ್ ನಿರಂತರವಾಗಿ ಬಳಸುವ ಫಾಂಟ್‌ಗಿಂತ ಭಿನ್ನವಾಗಿದೆ. ಅಲ್ಲದೇ ಪತ್ರಿಕೆಯ ದಿನಾಂಕ ಬರೆಯುವ ಸ್ಥಳದಲ್ಲಿ  26 September ಎಂದು ಬರೆಯುವ ಬದಲು 26 “Setpember” ಎಂದು ತಪ್ಪಾಗಿ ಬರೆಯಲಾಗಿದೆ. ಹಾಗಾಗಿ ಇದು ಎಡಿಟೆಡ್ ಫೋಟೊ ಎಂದು ತೀರ್ಮಾನಿಸಬಹುದು.

ನಕಲಿ ಮುಖಪುಟದಲ್ಲಿ ಬಳಸಿದ ಪಿಎಂ ಮೋದಿಯವರ ಚಿತ್ರವನ್ನು ಕಳೆದ ತಿಂಗಳು ಪ್ರಕಟಿಸಿದ Zee News ಪ್ರಕಟಿಸಿದ “ಕಡಲ ಭದ್ರತೆಯನ್ನು ಹೆಚ್ಚಿಸುವ ಕುರಿತು ಯುಎನ್‌ಎಸ್‌ಸಿ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪಿಎಂ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂಬ ಲೇಖನಯಿಂದ ತೆಗೆದುಕೊಂಡಿರುವಂತೆ ಕಾಣುತ್ತದೆ.

ಅಲ್ಲದೆ ಈ ಫೋಟೊ ಮಾರ್ಚ್‌ನಿಂದಲೇ ಅಂತರ್ಜಾಲದಲ್ಲಿದೆ. “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12, 2021 ರಂದು ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು” ಎಂಬ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ ಲೇಖನದಲ್ಲಿ ಇದೇ ಚಿತ್ರ ಹಾಕಲಾಗಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಹೊಗಳುವುದಕ್ಕಾಗಿಯೇ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಅವರ ಬಗ್ಗೆ ಬಹುದೊಡ್ಡ ಲೇಖನ ಬಂದಿದೆ ಎಂದು ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ನ್ಯೂಯಾರ್ಕ್ ಟೈಮ್ಸ್ ಅಂತಹ ಯಾವುದೇ ಲೇಖನ ಪ್ರಕಟಿಸಿಲ್ಲ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ ditanagara

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...