Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...