Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...