Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...