Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....