Homeಮುಖಪುಟಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ... ಈ ಥರದ ‍‍ಶೀರ್ಷಿಕೆಗಳ ಹಿಂದಿನ ಉದ್ದೇಶವೇನು?

- Advertisement -
- Advertisement -

ಗಣತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧವೂ ಜನ ಹೋರಾಟ ಸಂಘಟಿಸಲು ಅವಕಾಶ ಇದೆ. ಇದೇ ಕಾರಣಕ್ಕೆ ಕಳೆದ 75 ವರ್ಷಗಳಲ್ಲಿ ಭರತ ಭೂಮಿ ನೂರಾರು ಹೋರಾಟಗಳಿಗೆ ಸಾಕ್ಷಿಯಾಗಿದೆ. ಇಂತಹ ಹೋರಾಟಗಳನ್ನು ಜನರ ನಡುವೆ ತೆಗೆದುಕೊಂಡು ಹೋದ ಮತ್ತು ಆ ಹೋರಾಟದ ಗೆಲುವಿಗೆ ತೆರೆಯ ಹಿಂದೆ ನಿಂತು ಶ್ರಮಿಸಿದ ದೊಡ್ಡ ಇತಿಹಾಸ ಭಾರತದ ಪತ್ರಿಕೋದ್ಯಮಕ್ಕಿದೆ. ಭಾರತದ ಸ್ವಾತಂತ್ರ್ಯ ಹೋರಾಟದಿಂದ 2013-14ರ ಸುಮಾರಿಗೆ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನವರಗೆ ದೇಶದ ಪತ್ರಿಕೋದ್ಯಮ ನಿರ್ವಹಿಸಿದ್ದ ಜವಾಬ್ದಾರಿ ನಿರ್ಣಾಯಕ ಮತ್ತು ನಿಸ್ಸಂಶಯವಾಗಿ ಪ್ರಶಂಸನಾರ್ಹ. ಆಡಳಿತರೂಢ ಸರ್ಕಾರವನ್ನೇ ಬೀಳಿಸಿದ ಕೀರ್ತಿಯೂ ಮಾಧ್ಯಮಗಳಿಗೆ ಇದೆ. ಇಂದಿರಾ ಗಾಂಧಿ ಕಾಲದಲ್ಲಿ ಚಿಗುರೊಡೆದ ಸರ್ವಾಧಿಕಾರದ ವಿರುದ್ಧ ಸೆಟೆದುನಿಂತ ಪತ್ರಿಕೋದ್ಯಮದ ಛಾತಿ ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಿಲಬಸ್ ಎಂದರೂ ತಪ್ಪಾಗಲಾರದು. ಇವೆಲ್ಲ ನಿಜಕ್ಕೂ ಮಾಧ್ಯಮದ ಶಕ್ತಿ. ಆದರೆ, ಇಂದು ಇವೇ ಮಾಧ್ಯಮಗಳಿಗೆ ಏನಾಗಿದೆ?

ಸ್ವಾತಂತ್ರ್ಯಾನಂತರ ಭಾರತ ನೂರಾರು ಹೋರಾಟಗಳನ್ನು ಕಂಡಿದೆ ನಿಜ. ಆದರೆ, ಈ ಎಲ್ಲಾ ಹೋರಾಟಗಳ ತೂಕ ಒಂದಾದರೆ, ಕಳೆದ ಒಂದು ವರ್ಷದಿಂದ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟದ ತೂಕವೇ ಮತ್ತೊಂದು. ಏಕೆಂದರೆ ಈ ಮಟ್ಟಿಗೆ ಸುದೀರ್ಘ ಅವಧಿಗೆ ಸಮಾಜದ ಮೇಲೆ ಈ ಪರಿ ಪ್ರಭಾವ ಬೀರಿದ ಮತ್ತೊಂದು ಹೋರಾಟವನ್ನು ಹೆಸರಿಸುವುದು ಕಷ್ಟ.

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 10 ತಿಂಗಳಿಂದ ದೇಶದ ರೈತರು ವಿರಮಿಸದೆ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್-ಹರಿಯಾಣ ರಾಜ್ಯಗಳಲ್ಲಿ ಹೋರಾಟ ತಕ್ಷಣಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ರೈತ ನಾಯಕ ರಾಕೇಶ್ ಟಿಕಾಯತ್, “10 ತಿಂಗಳಲ್ಲ 10 ವರ್ಷವಾದರೂ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಯುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಹೋರಾಟವನ್ನು ತೀವ್ರಗೊಳಿಸುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಒಟ್ಟಾಗಿ ಇಂದು ಭಾರತ್ ಬಂದ್ ಘೋಷಿಸಿವೆ. ಭಾರತ್ ಬಂದ್‌ಗೆ ಪಂಜಾಬ್-ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಂಪೂರ್ಣವಾಗಿ ಸ್ತಬ್ಧವಾಗಿದೆ. ತಮಿಳುನಾಡಿನಲ್ಲಿ ರೈತರು ರೈಲ್ ರೊಖೋ ನಡೆಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಸುದ್ದಿ ಬಿತ್ತರಿಸುವಲ್ಲಿ ರಾಷ್ಟ್ರೀಯ ಮಾಧ್ಯಮ ಮಾತ್ರವಲ್ಲ ಕನ್ನಡ ಮಾಧ್ಯಮಗಳ ಧ್ವನಿಯೂ ಬೇರೆಯೇ ರೀತಿ ಇದೆ.

ಭಾರತ್ ಬಂದ್ ಠುಸ್ ಪಟಾಕಿ, ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ, ರೈತ ಹೋರಾಟ ವಿಫಲ… ಇವು ಇಂದು ದೃಶ್ಯ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಗಳು. ನಾಳಿನ ಕನ್ನಡ ದಿನ ಪತ್ರಿಕೆಗಳಲ್ಲೂ ಇವಕ್ಕಿಂತ ಭಿನ್ನವಾದ ಪದಗುಚ್ಛಗಳನ್ನು ನಿರೀಕ್ಷೆ ಮಾಡುವುದು ಕಷ್ಟ. ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ಆರ್ಥಿಕ ವ್ಯವಸ್ಥೆ ಕುಸಿದಿರುವ ಕಾರಣಕ್ಕೆ ಬಲವಂತಕ್ಕೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಬೇಡ ಎಂದು ರೈತರು ತೀರ್ಮಾನಿಸಿದ್ದರು. ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು, ಶಾಲೆಗಳು ಸೇರಿ ನೈತಿಕ ಬೆಂಬಲ ಘೋಷಿಸಿವೆ. ಇಂತಹ ಸಂದರ್ಭದಲ್ಲಿ ವಾಹನಗಳು ಓಡಾಡುತ್ತಿವೆ, ಅಂಗಡಿಗಳು ತೆರೆದಿವೆ, ಹಾಗಾಗಿ ಬಂದ್ ವಿಫಲವಾಗಿದೆ ಎಂದರೆ ಏನರ್ಥ. ದೇಶದ ಎಲ್ಲಾ ಜಿಲ್ಲಾ, ತಾಲ್ಲೂಕುಗಳಲ್ಲಿ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆದಿವೆ. ಅದನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿವೆ. ಇಲ್ಲಿ ಉದ್ಭವವಾಗುವ ಪ್ರಶ್ನೆ ಒಂದೇ, ಕಳೆದ 75 ವರ್ಷಗಳ ಕಾಲ ರೈತ, ಕಾರ್ಮಿಕ, ಮಹಿಳಾ ಮತ್ತು ದಲಿತ ಚಳುವಳಿಗಳ ಹಿಂದಿನ ಬೆನ್ನೆಲುಬಾಗಿದ್ದ ಮಾಧ್ಯಮಗಳು ಇಂದೇಕೆ ಬದಲಾಗಿವೆ? ಇವರಿಗೆ ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ದರ್ದಾದರೂ ಏನು? 2013-14ರ ಭ್ರಷ್ಟಾಚಾರ ವಿರೋಧಿ ಆಂದೋಲನದ ವಕ್ತಾರಿಕೆ ವಹಿಸಿ ಸರ್ಕಾರವನ್ನೇ ಪತನಗೊಳಿಸಿದ್ದ ಪತ್ರಿಕೋದ್ಯಮ ಇಂದು ನೈತಿಕ ಅಧಃಪಥನದ ಹಾದಿ ಹಿಡಿದಿರುವುದು ಏಕೆ? ಎಂಬುದು.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ


ಕೃಷಿ ಕ್ಷೇತ್ರವು ರಾಜ್ಯಗಳ ಪಟ್ಟಿಯಲ್ಲಿರುವುದರಿಂದ ರಾಜ್ಯಗಳು ಮತ್ತು ರೈತರೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ ಎಂಬುದು ರೈತರ ಆರೋಪ. ಈಗಾಗಲೇ ದೇಶದ ಬಹುತೇಕ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. ದೇಶದ ರೈಲ್ವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಶೇ.50 ರಷ್ಟು ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದೀಗ ನೂತನ ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರವನ್ನೂ ಖಾಸಗಿಯವರಿಗೆ ಧಾರೆ ಎರೆಯುವ ಹುನ್ನಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದು ರೈತರ ಆರೋಪ. ಈಗಿನ ಒಂದು ವರ್ಷದಲ್ಲಿ ಇದು ಕೇವಲ ಆರೋಪಗಳಾಗಿ ಮಾತ್ರ ಉಳಿಯದೆ ತಜ್ಞರ ಸಂಶೋಧನೆಯಿಂದಾಗಿ ಕೃಷಿ ನೀತಿ ರೈತರಿಗೆ ಮಾರಕ ಮತ್ತು ಕೃಷಿ ಚಟುವಟಿಕೆಯನ್ನೇ ಕತ್ತುಹಿಸುವ ಕೃತ್ಯ ಎಂಬುದನ್ನು ಸಾಬೀತುಪಡಿಸಲಾಗಿದೆ. ಹಾಗಿದ್ದೂ ಮಾಧ್ಯಮಗಳು ಏಕೆ ರೈತರ ಪರ ಇಲ್ಲ?

ಇನ್ನೂ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಹೋರಾಟವನ್ನು ಸುದ್ದಿಯ ಮೂಲಕ ಜನರ ಬಳಿ ತಲುಪಿಸುವುದು ಇರಲಿ, ಮಾಧ್ಯಮಗಳೇ ಆ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವಲ್ಲಿ ನಿರತವಾಗಿದ್ದವು. ಇನ್ನೂ ಕರ್ನಾಟಕದ ಮಾಧ್ಯಮಗಳೂ ಈ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಹಲವು ಬಣ್ಣ ಬಣ್ಣದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ರೈತ ಹೋರಾಟವನ್ನು ಮುಗಿಸಲು ಪ್ರಭುತ್ವದ ಪ್ರಯತ್ನಕ್ಕಿಂತ ಪತ್ರಿಕೋದ್ಯಮದ ಪ್ರಯತ್ನ ತುಸು ಹೆಚ್ಚೇ ಆಗಿತ್ತು.

ಇದೇ ಕಾರಣಕ್ಕೆ ದೆಹಲಿ ರೈತ ಹೋರಾಟಗಾರರು ಗೋದಿ ಮಾಧ್ಯಮಗಳನ್ನು ಬದಿಗಿಟ್ಟು ಸಾಮಾಜಕ ಜಾಲತಾಣದ ಮೂಲಕ ತಮ್ಮದೇ ಮಾಧ್ಯಮಗಳನ್ನು ಕಂಡುಕೊಂಡರು. ಆ ಮೂಲಕ ತಮ್ಮ ಹೋರಾಟವನ್ನು ಜನಮಾನಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ನಿಜಕ್ಕೂ ಇಂದು ರೈತ ಹೋರಾಟಕ್ಕೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಜಾಗ ಇಲ್ಲದೆ ಇರಬಹುದು, ಮಾಧ್ಯಮಗಳು ಸತ್ಯವನ್ನು ಮರೆಮಾಚಿರಬಹುದು. ಆದರೆ, ಜನ ಇಂದಿಗೂ ರೈತರ ಹಿಂದೆಯೇ ಇದ್ದಾರೆ. ಮಾಧ್ಯಮಗಳ ಪಕ್ಷಪಾತೀ ಧೋರಣೆ ಒಂದಲ್ಲ ಒಂದು ತನಗೆ ಮುಳ್ಳಾಗಲಿದೆ ಎಂಬುದಂತೂ ಸತ್ಯ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...