Homeಕರ್ನಾಟಕತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಶಾಸಕ ಸುರೇಶ್‌ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುರೇಶ್‌ಗೌಡ ಅವರನ್ನು ಸ್ಥಾನದಿಂದ ಇಳಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರು, ಬೆಂಬಲಿಗರನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶಾಸಕ ಸುರೇಶ್‌ಗೌಡ, ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗೆ ಇರಲು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

“ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

“ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ. ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ. ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು. ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ” ಎಂದು ತಮ್ಮ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ. ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ” ಎಂದು ಸುರೇಶ್‌ಗೌಡ ಮನವಿ ಮಾಡಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ಗೌಡ ರಾಜೀನಾಮೆ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಯಡಿಯೂರಪ್ಪ ಆಪ್ತರನ್ನು ನಿಯಂತ್ರಿಸಲು ಅವರ ಆಪ್ತರನ್ನು ಕೆಳಗಿಳಿಸಲಾಗುತ್ತಿದೆ ಎನ್ನುವ ಜೊತೆಗೆ ಸುರೇಶ್‌ಗೌಡ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...